ಎನ್ಆರ್ಸಿ ಮತ್ತು ಸಿಎಎ ವಿರುದ್ಧ ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ

ಭಟ್ಕಳ, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿಯನ್ನು ವಿರೋಧಿಸಿ ಭಟ್ಕಳದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.
ಇಲ್ಲಿನ ಸಾಮಾಜಿಕ, ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್ ವ- ತಂಝೀಮ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.
ಇಲ್ಲಿನ ಅಂಜುಮಾನ್ ಶಾಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಚಿಂತಕ, ಅಂಕಣಕಾರ ಶಿವಸುಂದರ್, ಸಿಪಿಎಂ ಮುಖಂಡ ಕೆ.ರಮೇಶ್ ಸಹಿತ ಹಲವರು ಮಾತನಾಡಿ, ಸಿಎಎ ಹಾಗೂ ಎನ್ಆರ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೂ ಮೊದಲು ಇಲ್ಲಿನ ವೈಭವ್ ಹೋಟೆಲ್ ಬಳಿಯಿಂದ ಅಂಜುಮಾನ್ ಶಾಲೆಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಿಎಎ, ಎನ್ಆರ್ಸಿ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಈ ಕಾಯ್ದೆಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.






.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)

