Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯನ್ನು ‘ಭಾರತೀಯ ಜಿನ್ನಾ ಪಾರ್ಟಿ’...

ಬಿಜೆಪಿಯನ್ನು ‘ಭಾರತೀಯ ಜಿನ್ನಾ ಪಾರ್ಟಿ’ ಎನ್ನಬೇಕು: ಸಾಮಾಜಿಕ ಹೋರಾಟಗಾರ ಹರ್ಷ ಮಂದರ್

ವಾರ್ತಾಭಾರತಿವಾರ್ತಾಭಾರತಿ23 Dec 2019 7:40 PM IST
share
ಬಿಜೆಪಿಯನ್ನು ‘ಭಾರತೀಯ ಜಿನ್ನಾ ಪಾರ್ಟಿ’ ಎನ್ನಬೇಕು: ಸಾಮಾಜಿಕ ಹೋರಾಟಗಾರ ಹರ್ಷ ಮಂದರ್

ಬೆಂಗಳೂರು, ಡಿ.23: ಮುಹಮ್ಮದ್ ಅಲಿ ಜಿನ್ನಾ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟಿರುವ ಬಿಜೆಪಿ ಅನ್ನು ‘ಭಾರತೀಯ ಜಿನ್ನಾ ಪಾರ್ಟಿ’ ಎಂದು ಹೆಸರಿಟ್ಟು ಕೂಗಬೇಕಾಗಿದೆ ಎಂದು ಖ್ಯಾತ ಸಾಮಾಜಿಕ ಹೋರಾಟಗಾರ ಹಾಗೂ ಮಾಜಿ ಸರಕಾರಿ ಅಧಿಕಾರಿ ಹರ್ಷ ಮಂದರ್ ಹೇಳಿದರು.

ಸೋಮವಾರ ನಗರದ ಮಿಲ್ಲರ್ಸ್ ರಸ್ತೆಯ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಅಖಿಲ ಕರ್ನಾಟಕ ಮುಸ್ಲಿಂ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ನೇತೃತ್ವದಲ್ಲಿ ಆಯೋಜಿಸಿದ್ದ, 'ನಾವು ಭಾರತದ ಜನರು ಸಿಎಎ ಮತ್ತು ಎನ್‌ಆರ್‌ಸಿ ಅನ್ನು ತಿರಸ್ಕರಿಸಿ' ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

ಮುಸ್ಲಿಮರು ಅಖಂಡ ಹಿಂದೂಸ್ತಾನದಲ್ಲಿಯೇ ಉಳಿಯಬೇಕೆಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಬಯಸಿದ್ದರು. ಅಷ್ಟೇ ಅಲ್ಲದೆ, ಇದಕ್ಕಾಗಿಯೇ ತಮ್ಮ ಪ್ರಾಣ ತ್ಯಾಗ ಮಾಡಿದರು. ಆದರೆ, ಮುಹಮ್ಮದ್ ಅಲಿ ಜಿನ್ನಾ ಎರಡು ದೇಶಗಳ ಬಗ್ಗೆ ಆಸೆ ಹೊಂದಿದ್ದ. ಇದೀಗ ಬಿಜೆಪಿಯೂ ಜಿನ್ನಾ ರೀತಿಯೇ ವರ್ತನೆ ಮಾಡುತ್ತಿದ್ದು, ಮುಸ್ಲಿಮರು ದೇಶ ಬಿಟ್ಟು ಹೋಗಲಿ ಎನ್ನುವ ಮನಸ್ಥಿತಿ ಹೊಂದಿದ್ದಾರೆ. ಹಾಗಾಗಿ, ಅವರ ಪಕ್ಷಕ್ಕೆ ‘ಭಾರತೀಯ ಜಿನ್ನಾ ಪಾರ್ಟಿ’ ಎನ್ನಬೇಕಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇತ್ತೀಚಿಗೆ ಸಾರ್ವಜನಿಕರನ್ನು ಉದ್ದೇಶಿಸಿದ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಎನ್‌ಆರ್‌ಸಿ, ಸಿಎಎ ಕುರಿತು ಯಾರು ಆತಂಕಗೊಳ್ಳಬೇಡಿ. ಕೆಲ ನಗರ ನಕ್ಸಲರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದಿದ್ದಾರೆ. ಆದರೆ, ಮೋದಿ ಅವರು ಹಸಿ ಸುಳ್ಳುಗಳನ್ನಾಡಿದ್ದಾರೆ. ಇನ್ನು ಕೇಂದ್ರದ ಗೃಹ ಸಚಿವ ಅಮಿತ್ ಶಾ ಹಲವು ಭಾರೀ ಈ ಎರಡು ಕಾಯ್ದೆಗಳನ್ನು ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ ಎಂದು ಆರೋಪ ಮಾಡಿದರು.

ತಿರಸ್ಕರಿಸಿ: ಸಿಎಎ ಒಂದು ಕಠಿಣ ಕಾಯ್ದೆ ಆಗಿದ್ದು, ಒಂದು ವೇಳೆ ಜಾರಿಯಾದರೆ ಎಲ್ಲರೂ ಸರದಿ ಸಾಲಿನಲ್ಲಿ ನಿಂತು ತಮ್ಮ ಪೌರತ್ವ ಸಾಬೀತುಪಡಿಸಲು ಕಾಗದ ನೀಡಬೇಕಾಗಿದೆ ಎಂದ ಅವರು, ಒಂದು ವೇಳೆ ಎನ್‌ಆರ್‌ಸಿ, ಸಿಎಎ ನೋಂದಣಿ ಪ್ರಕ್ರಿಯೆ ಆರಂಭವಾದರೆ, ನಾವು ಇದನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಬೇಕು ಎಂದು ಹೇಳಿದರು.

ವಿಭಜನೆಗೊಂಡಾಗ ನಮ್ಮ ಪೂರ್ವಜರು, ಧರ್ಮಾಧಾರಿತ ಪಾಕಿಸ್ತಾನಕ್ಕೆ ಹೋಗುವುದು ಅಥವಾ ಜಾತ್ಯತೀತ ದೇಶವಾಗಿರುವ ಭಾರತದಲ್ಲಿ ಉಳಿಯುವುದು ಎಂಬ ಆಯ್ಕೆಯಲ್ಲಿ ಭಾರತವನ್ನೇ ಆಯ್ಕೆ ಮಾಡಿಕೊಂಡರು. ಆದರೆ, ಇಂದು ನಮ್ಮ ಮುಂದೆ ಭಾರತ ಮಾತ್ರ ಆಯ್ಕೆ ಇರುವುದು. ಇದನ್ನು ಯಾವುದೇ ಕಾರಣಕ್ಕೂ ಛಿದ್ರ ಮಾಡಲು ಅವಕಾಶ ನೀಡುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X