ಡಿ. 25: ಮುಖ್ಯಮಂತ್ರಿಯಿಂದ ಪ್ರಕಾಶಾಭಿನಂದನ ಕಾರ್ಯಕ್ರಮ ಉದ್ಘಾಟನೆ
ಮಂಗಳೂರು : ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕೆ.ಪ್ರಕಾಶ್ ಶೆಟ್ಟಿ ಯವರ 60 ನೆ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ಅಭಿಮಾನಿಗಳಿಂದ ಡಿ.25ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಗೋಲ್ಡ್ ಪಿಂಚ್ ಸಿಟಿ ಬಂಗ್ರ ಕೂಳೂರಿನಲ್ಲಿ ಹಮ್ಮಿಕೊಂಡ ಪ್ರಕಾಶಾಭಿನಂದನ ನಕಾರ್ಯಕ್ರಮ ಉದ್ಘಾಟನೆಯನ್ನು ರಾಜ್ಯದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಲಿದ್ದಾರೆ.
ಜಿಲ್ಲೆಯ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮೊದಲು ನಿಗದಿಯಾದಂತೆ ನಡೆಯಲಿದೆ ಎಂದು ಎಂದು ಪ್ರಕಾಶಾಭಿನಂದನ ಸಮಿತಿಯ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಪೂರ್ವ ಭಾವಿಯಾಗಿ 100ಕ್ಕೂ ಮಿಕ್ಕಿ ಅಶಕ್ತರಿಗೆ ಮತ್ತು 66 ವಿದ್ಯಾರ್ಥಿಗಳಿಗೆ ಸುಮಾರು ಒಂದು ಕೋಟಿ ರೂಗಳಿಗೆ ಅಧಿಕ ಮೊತ್ತದ ಸಹಾಯಧನವನ್ನು ಡಿ.19ರಂದು ಬಂಗ್ರ ಕೂಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಗಿದೆ. 18 ಜನ ವಿವಿಧ ಕ್ಷೇತ್ರದ ಸಾಧಕರಿಗೆ ಡಿ. 25ರಂದು ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಸಮಾರಂಭದಲ್ಲಿ 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯ ಮಂತ್ರಿ ಡಾ.ಸಿ.ಎನ್. ಅಶ್ವಥನಾರಾಯಣ , ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕನ್ನಡ ಸಂಸ್ಕೃತಿ ಪ್ರವಾಸೋದ್ಯಮ ಖಾತೆಯ ಸಚಿವ ಸಿ.ಟಿ.ರವಿ, ಮೀನುಗಾರಿಕೆ ಮತ್ತು ಬಂದರು ಹಾಗೂ ಮುಜರಾಯಿ ಖಾತೆಯ ಸಚಿವ ಕೊಟ ಶ್ರೀನಿವಾಸ ಪೂಜಾರಿ, ಕೇಂದ್ರ ರಾಸಾಯನಿಕ, ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರು ಸಂಸದರು, ದೇಶ, ವಿದೇಶದ ಉದ್ಯಮಿಗಳು ರಾಜ್ಯ,ರಾಷ್ಟ್ರ ಮಟ್ಟದ ರಾಜಕೀಯ ನಾಯಕರು, ಸ್ಯಾಂಡಲ್ ವುಡ್ ,ಬಾಲಿವುಡ್ ನಟ-ನಟಿಯರು. ಬಂಟ ಸಮಾಜದ ಗಣ್ಯರು, ಎಲ್ಲಾ ಸಮಾಜದ ಮುಖಂಡ ಭಾಗವಹಿಸಲಿದ್ದಾರೆ ಎಂದು ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅಭಿನಂದನಾ ಸಮಿತಿಯ ಪದಾಧಿಕಾರಿಗಳಾದ ಸಂತೋಷ್ ವಿ.ಶೆಟ್ಟಿ,ಸುರೇಶ್ ಶೆಟ್ಟಿ ಪಡುಬಿದ್ರೆ, ಎಂ.ಸುರೇಶ್ಚಂದ್ರ ಶೆಟ್ಟಿ,ಐಕಳ ಹರೀಶ್ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ,ದೇವಿ ಚರಣ್ ಶೆಟ್ಟಿ ,ಮನೋಹರ ಶೆಟ್ಟಿ,ಪುರುಷೋತ್ತಮ ಶೆಟ್ಟಿ,ಜಿ.ಸುಧೀರ್ ಹೆಗ್ಡೆ, ಅರವಿಂದ ಪೂಂಜ ,ನಿಟ್ಟೆ ರವಿರಾಜ ಶೆಟ್ಟಿ,ನಿತೇಶ್ ಶೆಟ್ಟಿ ಎಕ್ಕಾರು ಮೊದಲಾದವರು ಉಪಸ್ಥಿತರಿದ್ದರು.







