Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಬಿಷಪ್‌ರಿಂದ ಕ್ರಿಸ್ಮಸ್ ಸಂದೇಶ

ಉಡುಪಿ ಬಿಷಪ್‌ರಿಂದ ಕ್ರಿಸ್ಮಸ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ24 Dec 2019 8:23 PM IST
share
ಉಡುಪಿ ಬಿಷಪ್‌ರಿಂದ ಕ್ರಿಸ್ಮಸ್ ಸಂದೇಶ

ಉಡುಪಿ : ಇಡೀ ಮಾನವಕುಲ ಜಾತಿ ಮತಗಳ ಬೇಧವಿಲ್ಲದೆ ಆಚರಿಸುವ ಹಬ್ಬ ಕ್ರಿಸ್ತಜಯಂತಿ ಅಥವ ಕ್ರಿಸ್ಮಸ್. ಹಬ್ಬದ ಕೇಂದ್ರ ವ್ಯಕ್ತಿ ಯೇಸು ಕಂದ. ಮಾನವನ ಮೇಲಿನ ಪ್ರೀತಿಯಿಂದ ಸರ್ವಶಕ್ತ ದೇವರು ಹುಲುಮಾನವನಾಗಿ ಒಂದು ಪುಟ್ಟ ಶಿಶುವಾಗಿ, ದನದ ಕೊಟ್ಟಿಗೆಯಲ್ಲಿ ಜನ್ಮತಳೆದ ಮಹಾರಹಸ್ಯದ ಆಚರಣೆಯೇ ಕ್ರಿಸ್‌ಮಸ್. ದೇವರು ಈ ಲೋಕವನ್ನು ಎಷ್ಟಾಗಿ ಪ್ರೀತಿಸಿ ದರೆಂದರೆ ತಮ್ಮ ಏಕಮಾತ್ರ ಪುತ್ರರನ್ನೇ ಈ ಲೋಕಕ್ಕೆ ಕೊಟ್ಟರು ಎನ್ನುತ್ತದೆ ಪವಿತ್ರ ಬೈಬಲ್ ಗ್ರಂಥ. ಮಾನವ ತನ್ನ ಮನುಷ್ಯತ್ವವನ್ನು ಮರೆತು ದಾನವನಾಗಲು ಹೊರಟಾಗ ಮಾನವನಿಗೆ ಮಾನವನಾಗಿ ಜೀವಿಸುವುದನ್ನು ಕಲಿಸಲು ದೇವರು ಧರೆಗಿಳಿದ ಹಬ್ಬವೇ ಕ್ರಿಸ್ಮಸ್.

ಇಂದು ಸಮಾಜದಲ್ಲಿ ಅಶಾಂತಿ, ಅಸಮಾನತೆ, ಅನ್ಯಾಯ, ಬಡತನ, ನಿರುದ್ಯೋಗ, ಹಿಂಸೆ, ಶೋಷಣೆ, ರೋಗರುಜಿನ, ದ್ವೇಷ, ಯುದ್ಧ, ಅತ್ಯಾಚಾರ, ಮತಾಂಧತೆ, ಪರಮತ ಅಸಹಿಷ್ಣುತೆ ಇತ್ಯಾದಿಗಳನ್ನು ಕಾಣುತ್ತೇವೆ. ಇದಕ್ಕೆ ಉತ್ತರ ಹಲ್ಲಿಗೆ ಹಲ್ಲು, ಕಣ್ಣಿಗೆ ಕಣ್ಣು ಖಂಡಿತಾ ಅಲ್ಲ. ಬದಲಾಗಿ ಪ್ರೀತಿ ಮಾತ್ರ. ಇದನ್ನು ತಿಳಿಸಲೆಂದೇ ಯೇಸು ಕ್ರಿಸ್ತರು ಈ ಧರೆಯಲ್ಲಿ ಹುಟ್ಟಿದ್ದು.

 ಕ್ರಿಸ್ತ ಜನನದ ಕುರಿತು ಪ್ರವಾದಿ ಯೆಶಾಯ ಮೊದಲೇ ತಿಳಿಸಿದ್ದನು. ಇಗೋ ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಆತನನ್ನು ಶಾಂತಿನೃಪನೆಂದು ಕರೆಯುವರು. ಆತನ ರಾಜ್ಯದ ಶಾಂತಿ ಹೇಗಿರುತ್ತದೆ ಎಂದರೆ ತೋಳ ಮತ್ತು ಕುರಿಮರಿ ಒಂದಾಗಿ ಬಾಳುವುವು, ಮೇಕೆ ಮತ್ತು ಚಿರತೆ ಜೊತೆಯಾಗಿ ಮಲಗುವುವು, ಕರುವು ಸಿಂಹ ಒಟ್ಟಾಗಿ ಮೊಲೆಯುಣ್ಣುವುವು, ಕರಡಿ ಮತ್ತು ಅಕಳು ಒಟ್ಟಿಗೆ ಮೇಯುವುವು, ಮೊಲೆಗೂಸು ನಾಗರ ಹುತ್ತದ ಮೇಲೆ ಆಡುವುದು. ಆದರೆ ಯಾವುದೇ ಕೇಡು ಅಥವಾ ಹಾನಿಯಾಗದು. ಅಲ್ಲಿ ಶಾಶ್ವತ ಶಾಂತಿ ನೆಲೆಸುವುದು.

ದೇವರೇ ಶಾಂತಿಯ ಮೂಲ. ಯೇಸು ಜನಿಸಿದ ದಿವಸ ದೇವರ ಶಾಂತಿ ಈ ಲೋಕದಲ್ಲಿ ಜನ್ಮತಾಳಿತು. ಅವರೇ ನಮ್ಮ ನಿಜವಾದ ಶಾಂತಿ.ತನ್ನ ಪ್ರಾಣವನ್ನೇ ಧಾರೆಯೆರೆದು ಮೃತ್ಯುಂಜಯನಾಗಿ ಸತ್ತಲ್ಲಿಂದ ಎದ್ದು ಬಂದ ಪುರುತ್ಥಾನಿ ಕ್ರಿಸ್ತ ಹೇಳುವುದಿಷ್ಟೇ: ಒಬ್ಬರನ್ನೊಬ್ಬರು ಪ್ರೀತಿಸಿರಿ ಆಗ ಮಾತ್ರ ಶಾಂತಿ ಸಾಧ್ಯ. ಶಾಂತಿಯಿದ್ದಲ್ಲಿ ಮಾತ್ರ ಬಾವೈಕ್ಯತೆ, ಸಾಮರಸ್ಯ, ಸಹಬಾಳ್ವೆ, ಸಮಾಧಾನ ಸಾಧ್ಯ. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು. ಅವರೇ ನಿಜವಾದ ದೇವರ ಮಕ್ಕಳು. ಹಾಗಾದರೆ ನಾವೂ ನೀವೂ ಶಾಂತಿಯ ಸಾಧನ, ಶಾಂತಿಯ ದೂತರಾಗೋಣವೇ? ಶಾಂತಿ, ಪ್ರೀತಿಯ ಭಾರತವನ್ನು ಕಟ್ಟೋಣವೇ?

ಸರ್ವೇಜನಾ: ಸುಖಿನೋ ಭವಂತು! ವಾಲೈಕುಮ್ ಸಲಾಮ್! ಒಬ್ಬರನ್ನೊಬ್ಬರು ಪ್ರೀತಿಸಿರಿ - ಇವೆಲ್ಲದರ ತಾತ್ಪರ್ಯ ಒಂದೇ. ಎಲ್ಲರೂ ಸುಖ, ಶಾಂತಿ,ಪ್ರೀತಿಯಿಂದ ಬಾಳಲಿ ಎಂಬುದು. ಇದೇ ಕ್ರಿಸ್ತ ಜಯಂತಿಯ ಸಂದೇಶ. ತಮಗೆಲ್ಲರಿಗೂ ಕ್ರಿಸ್ತ ಜಯಂತಿಯ ಶುಭಾಶಯಗಳು.

ಪರಮಪೂಜ್ಯ ಡಾ.ಜೆರಾಲ್ಡ್ ಲೋಬೊ
ಉಡುಪಿಯ ಧರ್ಮಾಧ್ಯಕ್ಷರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X