Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಪ್ರವಾಸಿಗರನ್ನು ಕೈ ಬೀಸಿ...

ಮೈಸೂರು: ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ವಿವಿಧ ಬಣ್ಣಗಳ ಹೂವಿನ ಕಲಾಕೃತಿಗಳು

ಅರಮನೆ ಆವರಣದಲ್ಲಿ ಮಾಗಿ ಉತ್ಸವಕ್ಕೆ ಸಚಿವ ವಿ.ಸೋಮಣ್ಣ ಚಾಲನೆ

ವಾರ್ತಾಭಾರತಿವಾರ್ತಾಭಾರತಿ24 Dec 2019 11:11 PM IST
share
ಮೈಸೂರು: ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ವಿವಿಧ ಬಣ್ಣಗಳ ಹೂವಿನ ಕಲಾಕೃತಿಗಳು

ಮೈಸೂರು,ಡಿ.24: ಪ್ರತಿವರ್ಷದಂತೆ ಈ ವರ್ಷವೂ ಸಹ ಇಂದಿನಿಂದ ಜನವರಿ 2ರವರೆಗೆ ಮೈಸೂರಿನಲ್ಲಿ ಮಾಗಿ ಉತ್ಸವ ಆಯೋಜಿಸಲಾಗಿದ್ದು, ಮಾಗಿ ಉತ್ಸವದ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ಅನಾವರಣಗೊಂಡಿರುವ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಚಾಲನೆ ನೀಡಿದರು.

ಬೆಂಗಳೂರು ಅರಮನೆ, ಬೆಂಕಿಗಾಹುತಿಯಾದ ಮೈಸೂರಿನ ಗಂಧದ ಅರಮನೆ, ಆನೆಗಾಡಿ, ಕುದುರೆ ಸಾರೋಟು ಸೇರಿದಂತೆ ಅಂದಿನ ಆಳರಸರ ಪ್ರತಿಕೃತಿಗಳು, ಇಸ್ರೋ ಸಾಧನೆ ಸಾರುವ ರಾಕೆಟ್ ಕಲಾಕೃತಿಗಳು ವಿವಿಧ ಬಗೆಯ ಹೂಗಳಿಂದ ನಿರ್ಮಾಣ ಗೊಂಡಿರುವ ಕಲಾಪ್ರದರ್ಶನಗಳು ನೋಡುಗರ ಕಣ್ಮನ ಸೆಳೆಯುತ್ತಿದೆ. 

ದಸರಾ ಹಬ್ಬದಂತೆ ಪ್ರವಾಸಿಗರನ್ನು ಆಕರ್ಷಿಸಲು 3 ವರ್ಷಗಳಿಂದ ಈ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗುತ್ತಿದ್ದು, ಈ ಸಲವೂ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಫಲಪುಷ್ಪ ಪ್ರದರ್ಶನ ಮಾಗಿ ಉತ್ಸವ ಹಮ್ಮಿಕೊಳ್ಳಲಾಗಿದೆ.

24 ಸಾವಿರ ವಿವಿಧ ಬಗೆಯ ಹೂವಿನ ಗಿಡವುಳ್ಳ ಹೂವಿನ ಕುಂಡ ಬಳಸಲಾಗಿದ್ದು, ಮೆರಿಗೋಲ್ಡ್, ಸಾಲ್ವಿಯ, ಡೇಲಿಯ, ಕಾಕ್ಸಕೂಂಬ್, ಪಿಟೋನಿಯ, ಸೇವಂತಿಗೆ, ಕೋಲಿಯಸ್, ಸಲೋಷಿಯ ಸೇರಿ 32 ಬಗೆಯ ಹೂವಿನ ಗಿಡಗಳು ಮೇಳೈಸಿವೆ. ಇವುಗಳೊಂದಿಗೆ 4 ಲಕ್ಷ ವಿವಿಧ ಹೂವುಗಳಾದ ಗುಲಾಬಿಗಳು, ಕ್ರೈಸಾಂಥಿಮಮ್, ಪಿಂಗ್ಪಾಂಗ್, ಕಾರ್ನೆಷನ್ ಮತ್ತು ಇತರ ಅಲಂಕಾರಿಕ ಹೂವು, ಊಟಿ ಕಟ್ ಫ್ಲವರ್ಗಳ ಅಲಂಕಾರ ಕೂಡ ವೀಕ್ಷಣೆಗೆ ಲಭ್ಯವಿದೆ.

ವಿವಿಧ ಬಣ್ಣಗಳ ಲಕ್ಷಕ್ಕೂ ಅಧಿಕ ಗುಲಾಬಿ ಹೂವಿನಿಂದ ಈ ಆಕೃತಿಯನ್ನು ನಿರ್ಮಿಸಲಾಗಿದ್ದು, ಪ್ರವೇಶ ದ್ವಾರದಲ್ಲಿ ಸೊಂಡಿಲೆತ್ತಿ ನಮಸ್ಕರಿಸುತ್ತಿರುವ 2 ಆನೆಗಳ ಮಾದರಿ, ವಾಯುಸೇನಾ, ಭೂಸೇನಾ ಹಾಗೂ ನೌಕಾಸೇನೆ ಗೌರವ ಸಲ್ಲಿಸುವ ಮಾದರಿ ಚಿತ್ರಗಳನ್ನು ಪಿಂಗ್ ಪಾಂಗ್ ಹೂವುಗಳಿಂದ ಅಲಂಕರಿಸಲಾಗಿದೆ.

ಕಾಳಿಂಗ ಸರ್ಪ, ಧ್ಯಾನದ ಭಂಗಿಯಲ್ಲಿ ಕುಳಿತಿರುವ ಸ್ವಾಮಿ ವಿವೇಕಾನಂದರನ್ನು ಹೂವು ಮತ್ತು ತರಕಾರಿಗಳಿಂದ ಸಿಂಗಾರ ಮಾಡಲಾಗಿದೆ. ಜಯಚಾಮರಾಜ ಒಡೆಯರ್ ಅವರು ಸಿಂಹಾಸನದ ಮೇಲೆ ಕುಳಿತಿರುವಂತೆ, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರ ಆಕೃತಿಯನ್ನು ಕೂಡ ರಚಿಸಲಾಗಿದೆ. ಅರಮನೆ ಖಾಸಗಿ ದರ್ಬಾರ್ ನ ಆಕೃತಿಯುಳ್ಳ ಸೆಲ್ಫಿ ವಲಯವೂ ಇಲ್ಲಿದೆ.

ರಾಷ್ಟ್ರಪಕ್ಷಿ ನವಿಲು ಮಾದರಿ, ಮನೆಯ ಅಂಗಳದ ರೀತಿಯ ಫೋಟೋ, ಶಿವಲಿಂಗ ಮಾದರಿ ಚಿತ್ರವನ್ನು ನಿರ್ಮಿಸಿ ನಿಂಬೆಹಣ್ಣು ಮತ್ತು ಬಿಲ್ವ ಪತ್ರೆಗಳಿಂದ ಅಲಂಕರಿಸಲಾಗುತ್ತಿದೆ. ಚಾರಿಯೆಟ್ ಗಾಡಿಯ ಮಾದರಿ, ಒಂದು ಕುದುರೆ ಆಕೃತಿ, ಮಕ್ಕಳ ಉದ್ಯಾನದಲ್ಲಿ ಮರಳುಗಾಡಿನಲ್ಲಿ ವಾಸಿಸುವ ಪ್ರಾಣಿಗಳು ಮತ್ತು ಪಕ್ಷಿಗಳ 5 ಚಿತ್ರಗಳು ಚಿಣ್ಣರನ್ನು ಬರಮಾಡಿಕೊಳ್ಳಲಿವೆ.

ಫಲಪುಷ್ಪ ಪ್ರದರ್ಶನದ ಅಂಗವಾಗಿ ಅರಮನೆ ಆವರಣದಲ್ಲಿ ಡಿ.28ರಿಂದ 30ರವರೆಗೆ ನಿತ್ಯ ಸಂಜೆ 7ರಿಂದ ರಾತ್ರಿ 9ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಡಿ. 31ರಂದು ರಾತ್ರಿ 11ರಿಂದ 12ರವರೆಗೆ ಪೊಲೀಸ್ ವಾದ್ಯ ತಂಡದಿಂದ ಕರ್ನಾಟಕ ಮತ್ತು ಆಂಗ್ಲ ಪೊಲೀಸ್ ಬ್ಯಾಂಡ್ ಕಾರ್ಯಕ್ರಮ ನಡೆಯಲಿದೆ. ಹೊಸ ವರ್ಷಾಚರಣೆ ಪ್ರಯುಕ್ತ ರಾತ್ರಿ 12ರಿಂದ 12.15ರವರೆಗೆ ಶಬ್ದ ರಹಿತ ಪಟಾಕಿಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸಲಿವೆ. 

ಕಾರ್ಯಕ್ರಮದಲ್ಲಿ ಶಾಸಕರುಗಳಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಮೇಯರ್ ಪುಷ್ಪಲತಾ ಜಗ್ನಾಥ್, ಉಪಮೇಯರ್ ಶಫೀ ಅಹಮದ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಅರಮನೆ ಮಂಡಳಿ ನಿರ್ದೇಶಕ ಸುಬ್ರಮಣ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X