ಕಂಬಳದ ರಕ್ಷಣೆಗೆ ಸರಕಾರ ಬದ್ಧ: ಯಡಿಯೂರಪ್ಪ
ಮೂಡುಬಿದಿರೆ ಕೋಟಿ-ಚೆನ್ನಯ ಕಂಬಳಕ್ಕೆ ಚಾಲನೆ, ಅಬ್ಬಕ ಪ್ರತಿಮೆ ಅನಾವರಣ
![ಕಂಬಳದ ರಕ್ಷಣೆಗೆ ಸರಕಾರ ಬದ್ಧ: ಯಡಿಯೂರಪ್ಪ ಕಂಬಳದ ರಕ್ಷಣೆಗೆ ಸರಕಾರ ಬದ್ಧ: ಯಡಿಯೂರಪ್ಪ](https://www.varthabharati.in/sites/default/files/images/articles/2019/12/25/225066-1577264006.gif)
ಮೂಡುಬಿದಿರೆ, ಡಿ.25: ಜನಪದ ಕ್ರೀಡೆಯಾಗಿರುವ ಕಂಬಳವನ್ನು ಉಳಿಸಿ ಸಂರಕ್ಷಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಲ್ಲಿನ ಒಂಟಿಕಟ್ಟೆಯ ಜೋಡುಕರೆ ಕಂಬಳ ಸಮಿತಿಯ ಆಯೋಜಿಸಿರುವ 17ನೇ ವರ್ಷದ ಕೋಟಿ-ಚೆನ್ನಯ ಕಂಬಳ ಉದ್ಘಾಟನೆ ಹಾಗೂ ವೀರರಾಣಿ ಅಬ್ಬಕ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಿ ಅವರು ಮಾತನಾಡುತ್ತಿದ್ದರು
ಮೂಡುಬಿದಿರೆಯನ್ನು ಈಗಾಗಲೇ ತಾಲೂಕಾಗಿ ಘೋಷಿಸಲಾಗಿದೆ. ಹೆಚ್ಚಿನ ಅನುದಾನ ನೀಡಿ ಇದನ್ನು ಮಾದರಿ ಕ್ಷೇತ್ರವನ್ನಾಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ವೀರರಾಣಿ ಅಬ್ಬಕ್ಕ ಸಾವಿರಾರು ವರ್ಷಗಳ ಹಿಂದೆಯೇ ಫೋರ್ಚುಗೀಸರ ವಿರುದ್ಧ ಹೋರಾಡುವ ಮೂಲಕ ಭಾರತೀಯ ಮಹಿಳೆಯ ಶೌರ್ಯವನ್ನು ಪ್ರದರ್ಶಿಸಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಗೃಹಸಚಿವ ಬಸವರಾಜ್ ಬೊಮ್ಮಾಯಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಸಿ.ಟಿ.ರವಿ, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಸುನೀಲ್ಕುಮಾರ್, ಹರೀಶ್ ಪೂಂಜಾ, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಶಾಸಕರಾದ ಬಿ.ನಾಗರಾಜ ಶೆಟ್ಟಿ, ಯೋಗೀಶ್ ಭಟ್, ರುಕ್ಮಯ ಪೂಜಾರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಕಿಶೋರ್ ಆಳ್ವ, ಬೃಜೇಶ್ ಚೌಟ, ಈಶ್ವರ್ ಕಟೀಲು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಎಡಿಸಿ ರೂಪಾ, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷ, ಕಲ್ಲಡ್ಕ ಪ್ರಭಾಕರ ಭಟ್ ಮತ್ತಿತರರು ಉಪಸ್ಥಿತರಿದ್ದರು.