Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಎಎ ನೆಪದಲ್ಲಿ ಸರಕಾರ ಅಸ್ಥಿರಗೊಳಿಸಲು...

ಸಿಎಎ ನೆಪದಲ್ಲಿ ಸರಕಾರ ಅಸ್ಥಿರಗೊಳಿಸಲು ಕಾಂಗ್ರೆಸ್ ಸಂಚು: ಸಚಿವ ಸಿ.ಟಿ.ರವಿ ಆರೋಪ

ವಾರ್ತಾಭಾರತಿವಾರ್ತಾಭಾರತಿ26 Dec 2019 12:19 PM IST
share
ಸಿಎಎ ನೆಪದಲ್ಲಿ ಸರಕಾರ ಅಸ್ಥಿರಗೊಳಿಸಲು ಕಾಂಗ್ರೆಸ್ ಸಂಚು: ಸಚಿವ ಸಿ.ಟಿ.ರವಿ ಆರೋಪ

ಮಂಗಳೂರು, ಡಿ.26: ಸಿಎಎ ನೆಪದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂದು ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.

ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತ್ರಿವಳಿ ತಲಾಖ್, 370ನೆ ವಿಧಿ ರದ್ದು, ಬಾಬರಿ ಮಸ್ಜಿದ್ ತೀರ್ಪು ಇತ್ಯಾದಿ ಸಂದರ್ಭ ದೇಶಾದ್ಯಂತ ಗಲಭೆಯಾಗಬಹುದು ಎಂದು ಕಾಂಗ್ರೆಸ್ಸಿಗರು ಭಾವಿಸಿದ್ದರು. ಆದರೆ, ಎಲ್ಲೂ ಏನೂ ಆಗಿಲ್ಲ. ಈ ಮಧ್ಯೆ ಸಿಎಎ ಅನುಷ್ಠಾನಕ್ಕೆ ಸಿದ್ಧತೆ ನಡೆಯತೊಡಗಿದಾಗ ಕಾಂಗ್ರೆಸ್ ಗಲಭೆಗೆ ಸಂಚು ಹೂಡಿತು. ಅದಕ್ಕೆ ಕೆಲವು ವಿಚಾರವಾದಿಗಳು, ಅರಾಜಕ ಶಕ್ತಿಗಳನ್ನೂ ಕೂಡ ಬಳಸಿಕೊಂಡಿತು. ಒಟ್ಟಿನಲ್ಲಿ ಸಿಎಎ ನೆಪದಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದೆ ಎಂದರು.

ಕಾಂಗ್ರೆಸ್, ಎಸ್‌ಡಿಪಿಐ, ಪಿಎಫ್‌ಐ ಒಳ ಒಪ್ಪಂದ ಮಾಡಿಕೊಂಡಿವೆ. ಅದರ ಪರಿಣಾಮವಾಗಿಯೇ ಎಲ್ಲೆಡೆ ಹಿಂಸಾಚಾರ ನಡೆಯುತ್ತಿದೆ. ಮಂಗಳೂರಿನ ಗಲಭೆಯಲ್ಲಿ ಅದು ಸಾಬೀತಾಗಿದೆ. ಮಾಜಿ ಸಚಿವ ಯು.ಟಿ.ಖಾದರ್‌ರ ‘ಬೆಂಕಿ’ಯ ಮಾತು ಕೂಡ ಅದಕ್ಕೆ ಸಾಕ್ಷಿಯಾಗಿದೆ. ಖಾದರ್ ಹೀಗೆ ಹೇಳಿದರೂ ಕಾಂಗ್ರೆಸ್ ಯಾಕೆ ವೌನ ವಹಿಸಿವೆ ಎಂದು ಸಿ.ಟಿ.ರವಿ ಪ್ರಶ್ನಿಸಿದರು.

ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಬಲಿಯಾದವರು ಹಿಂಸಾಚಾರದಲ್ಲಿ ಭಾಗಿಯಾದರೆ ಅವರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ. ತನಿಖೆಯಿಂದ ಅವರು ಆರೋಪಿಗಳೋ, ಅಮಾಯಕರೋ ಎಂದು ತಿಳಿಯುತ್ತದೆ. ಅಮಾಯಕರಾದರೆ ಪರಿಹಾರ ಕೊಡಲಾಗುವುದು ಎಂದು ಸಿ.ಟಿ.ರವಿ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಬ್ರಿಜೇಶ್ ಚೌಟ, ನಿತಿನ್ ಕುಮಾರ್, ಸಂಜಯ್ ಪ್ರಭು, ಜಿತೇಂದ್ರ ಕೊಟ್ಟಾರಿ, ರಣದೀಪ್ ಕಾಂಚನ್, ನಂದನ್ ಮಲ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X