Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ: ಕರ್ನಾಟಕ 166 ರನ್‌ಗೆ ಆಲೌಟ್

ರಣಜಿ: ಕರ್ನಾಟಕ 166 ರನ್‌ಗೆ ಆಲೌಟ್

► ಕರುಣ್ ನಾಯರ್ ಅರ್ಧಶತಕ ► ಅಭಿನಯ್‌ಗೆ ಐದು ವಿಕೆಟ್

ವಾರ್ತಾಭಾರತಿವಾರ್ತಾಭಾರತಿ26 Dec 2019 12:27 PM IST
share
ರಣಜಿ: ಕರ್ನಾಟಕ 166 ರನ್‌ಗೆ ಆಲೌಟ್

ಮೈಸೂರು,ಡಿ.25: ನಾಯಕ ಕರುಣ್ ನಾಯರ್ ಅರ್ಧಶತಕದ ಕೊಡುಗೆಯ(81)ಹೊರತಾಗಿಯೂ ವೇಗಿಗಳಾದ ಅಭಿನಯ್(5-37)ಹಾಗೂ ರಿಷಿ ಧವನ್(3-27)ವೇಗಕ್ಕೆ ತತ್ತರಿಸಿದ ಆತಿಥೇಯ ಕರ್ನಾಟಕ ತಂಡ ಬುಧವಾರ ಇಲ್ಲಿ ಆರಂಭವಾದ ರಣಜಿ ಟ್ರೋಫಿ ಮೂರನೇ ಸುತ್ತಿನ ‘ಬಿ’ ಗುಂಪಿನ ಪಂದ್ಯದಲ್ಲಿ ಹಿಮಾಚಲಪ್ರದೇಶ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ ಕೇವಲ 166 ರನ್ ಗಳಿಸಿ ಆಲೌಟಾಗಿದೆ.

ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಕರ್ನಾಟಕವನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸಲು ಯಶಸ್ವಿಯಾದ ಹಿಮಾಚಲಪ್ರದೇಶ ದಿನದಾಟದಂತ್ಯಕ್ಕೆ ಮೊದಲ ಇನಿಂಗ್ಸ್ ನಲ್ಲಿ 17 ಓವರ್‌ಗಳಲ್ಲಿ 29 ರನ್‌ಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಹಿನ್ನಡೆ ಅನುಭವಿಸಿದೆ.

ತವರು ಮೈದಾನದಲ್ಲಿ ದೊಡ್ಡ ಮೊತ್ತ ಗಳಿಸುವ ಗುರಿಯೊಂದಿಗೆ ಮೊದಲು ಬ್ಯಾಟಿಂಗ್‌ಗೆ ಇಳಿದಿದ್ದ ಕರ್ನಾಟಕ ಆರಂಭಿಕ ಬ್ಯಾಟ್ಸ್‌ಮನ್ ಮಾಯಾಂಕ್ ಅಗರ್ವಾಲ್(0) ಹಾಗೂ ವನ್‌ಡೌನ್ ದಾಂಡಿಗ ದೇವದತ್ತ ಪಡಿಕ್ಕಲ್(0) ವಿಕೆಟನ್ನು ಶೂನ್ಯಕ್ಕೆ ಕಳೆದುಕೊಂಡಿತು. ರವಿ ಸಮರ್ಥ್(4) ಹಾಗೂ ದೇಗಾ ನಿಶ್ಚಲ್(16)ಕೂಡ ವಿಕೆಟ್ ಕೈಚೆಲ್ಲಿದಾಗ ಕರ್ನಾಟಕದ ಸ್ಕೋರ್ 30ಕ್ಕೆ 4.

ಆಗ ಜೊತೆಯಾದ ನಾಯಕ ಕರುಣ್ ನಾಯರ್(81, 185 ಎಸೆತ, 8 ಬೌಂಡರಿ)ಹಾಗೂ ಶ್ರೇಯಸ್ ಗೋಪಾಲ್(27, 52 ಎಸೆತ)5ನೇ ವಿಕೆಟ್ ಜೊತೆಯಾಟದಲ್ಲಿ 56 ರನ್ ಸೇರಿಸಿದರು.

ಈ ಜೋಡಿಯನ್ನು ಅರೋರ (2-41) ಬೇರ್ಪಡಿಸಿದರು.

 ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಬಿ.ಆರ್. ಶರತ್(2)ಜೆ. ಸುಚಿತ್(10), ಅಭಿಮನ್ಯು ಮಿಥುನ್(21) ಬೇಗನೆ ವಿಕೆಟ್ ಒಪ್ಪಿಸಿದರು. ತಂಡದ ಪರ ಸರ್ವಾಧಿಕ ಸ್ಕೋರ್ ಗಳಿಸಿದ ಕರುಣ್ ನಾಯರ್ ಔಟಾಗುವುದರೊಂದಿಗೆ ಕರ್ನಾಟಕದ ಮೊದಲ ಇನಿಂಗ್ಸ್ ಹೋರಾಟಕ್ಕೆ ತೆರೆ ಬಿತ್ತು. ಪ್ರತೀಕ್ ಜೈನ್ ವಿಕೆಟ್ ಉರುಳುವುದರೊಂದಿಗೆ ಕರ್ನಾಟಕ 67.2 ಓವರ್‌ಗಳಲ್ಲಿ 166 ರನ್‌ಗೆ ಆಲೌಟಾಯಿತು.

ಮೊದಲ ಇನಿಂಗ್ಸ್ ಆರಂಭಿಸಿರುವ ಹಿಮಾಚಲ ಪ್ರದೇಶ 17 ಓವರ್‌ಗಳಲ್ಲಿ 29 ರನ್‌ಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿದೆ. ಪ್ರಶಾಂತ್ ಚೋಪ್ರಾ(5), ಸುಮೀತ್ ವರ್ಮಾ(7) ಹಾಗೂ ಅಂಕಿತ್ ಕಾಲ್ಸಿ(0)ಪೆವಿಲಿಯನ್‌ಗೆ ಪರೇಡ್ ನಡೆಸಿದರು. ಕರ್ನಾಟಕದ ಪರ ಪ್ರತೀಕ್ ಜೈನ್ ಎರಡು ವಿಕೆಟ್(2-11) ಪಡೆದಿದ್ದಾರೆ.

ಸಂಕ್ಷಿಪ್ತ ಸ್ಕೋರ್

 ► ಕರ್ನಾಟಕ ಮೊದಲ ಇನಿಂಗ್ಸ್: 166/10

(ಕರುಣ್ ನಾಯರ್ 81, ಎಸ್.ಗೋಪಾಲ್ 27, ಮಿಥುನ್ 21, ಅಭಿನಯ್ 5-37, ರಿಷಿ ಧವನ್ 3-27, ಅರೋರ 2-41)

 ► ಹಿಮಾಚಲ ಪ್ರದೇಶ ಮೊದಲ ಇನಿಂಗ್ಸ್: 17 ಓವರ್‌ಗಳಲ್ಲಿ 29/3

(ಖಂಡೂರಿ 14,ಪ್ರತೀಕ್ ಜೈನ್ 2-11)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X