Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾವಿನ ಮನೆಯಲ್ಲೂ ರಾಜಕೀಯ ಸರಿಯಲ್ಲ:...

ಸಾವಿನ ಮನೆಯಲ್ಲೂ ರಾಜಕೀಯ ಸರಿಯಲ್ಲ: ಯು.ಟಿ.ಖಾದರ್

ಮಂಗಳೂರು ಗೋಲಿಬಾರ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ26 Dec 2019 8:41 PM IST
share
ಸಾವಿನ ಮನೆಯಲ್ಲೂ ರಾಜಕೀಯ ಸರಿಯಲ್ಲ: ಯು.ಟಿ.ಖಾದರ್

ಮಂಗಳೂರು, ಡಿ.26: ಮಂಗಳೂರು ಗಲಭೆಯಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಪರಿಹಾರ ನೀಡಿ ಮತ್ತೆ ಯಾರದೋ ಮಾತು ಕೇಳಿ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಹೇಳಿಕೆ ನೀಡಿರುವುದು ಜಿಲ್ಲೆಯ ಜನರಿಗೆ ನೋವು ತಂದಿದೆ. ಸಾವಿನ ಮನೆಯಲ್ಲಿ ರಾಜಕೀಯ ಸರಿಯಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಘೋಷಣೆ ಮಾಡಿದ ಪರಿಹಾರ ಹಿಂದೆ ಪಡೆದಿರುವುದು ಯಾಕೆ ಎಂಬುದನ್ನು ಮುಖ್ಯಮಂತ್ರಿ ಜನತೆಗೆ ತಿಳಿಸಬೇಕು. ಇದು ಕೇವಲ ಪರಿಹಾರದ ವಿಷಯವಲ್ಲ. ನೊಂದವರಿಗೆ ನ್ಯಾಯ ದೊರೆಯಬೇಕಿದೆ ಎಂದರು.

ಸರಕಾರ ಪರಿಹಾರ ನೀಡದಿದ್ದರೆ, ಸಾರ್ವಜನಿಕರು ಸೇರಿ ಇದಕ್ಕಿಂತ ಹೆಚ್ಚಿನ ಪರಿಹಾರವನ್ನು ಸಂಗ್ರಹಿಸಿ ನೀಡಬಲ್ಲೆವು. ನೀವೆಷ್ಟೇ ಸಮಾಜವನ್ನು ವಿಭಜಿಸಿದರೂ ಸರ್ವ ಧರ್ಮದ ಸಹೋದರತೆ ಬಲಿಷ್ಠವಾಗಿದೆ. ಆದರೆ ನೊಂದಿರುವ ಕುಟುಂಬಕ್ಕೆ ಸಮಾಧಾನ ಪಡಿಸುವ ಬದಲು ಅವಮಾನ ಮಾಡುವ ಪ್ರವೃತ್ತಿ ಸರಕಾರದಿಂದ ಆಗಬಾರದು ಎಂದರು.

ಹಿಂದೆ ಮುಲ್ಕಿಯಲ್ಲಿ ಗೋಲಿಬಾರ್ ಆದಾಗ ಪರಿಹಾರ ನೀಡಲಾಗಿತ್ತು. ಆದರೆ ಈ ಮಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತಮಗೆ ಬೇಕಾದಂತೆ ವಿಡಿಯೋ ಪುಟೇಜ್ ಬಿಡುಗಡೆ ಮಾಡಲಾಗುತ್ತಿದೆ. ಗಲಭೆ ವಿಚಾರದಲ್ಲಿ ಸರಕಾರ ಗೊಂದಲ ಉಂಟು ಮಾಡುತ್ತಿದ್ದು, ಇದರ ಉದ್ದೇಶವೇನು ಎಂದು ಅವರು ಪ್ರಶ್ನಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನು ಸಭೆ ಕರೆದು ಧೈರ್ಯ ತುಂಬುವ ಕೆಲಸ ಮಾಡಬೇಕು. ಈ ಘಟನೆ ವಿಭಿನ್ನ ಧರ್ಮಗಳ ಜನರ ನಡುವೆ ಆಗಿದ್ದಲ್ಲ. ಹಾಗಿದ್ದರೂ ಸರಕಾರ ಕಣ್ಣುಮುಚ್ಚಾಲೆ ಯಾಕೆ ಮಾಡುತ್ತಿದೆ. ಅಂದು ಘಟನೆ ನಡೆದು ಹೋಗಿದೆ. ಅದರ ಬಗ್ಗೆ ನೋವಿದೆ, ಖೇದವಿದೆ, ತಪ್ಪಿತಸ್ಥರು ಯಾರೇ ಆಗಿರಲಿ. ನ್ಯಾಯಾಂಗ ತನಿಖೆ ಆಗಲಿ. ಘಟನೆ ಆರಂಭದಿಂದ ಕೊನೆಯವರೆಗಿನ ಎಲ್ಲಾ ಘಟನೆಗಳ ಸಮಗ್ರ ತನಿಖೆಯಾಗಲಿ ಎಂದು ಅವರು ಆಗ್ರಹಿಸಿದರು.

ಬಿ.ಆರ್. ಅಂಬೇಡ್ಕರ್ ಬರೆದ ಸಂವಿಧಾನ ಇರುವವರೆಗೆ ಎನ್‌ಆರ್‌ಸಿ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಸರಕಾರ ನಡೆಸುವವರಿಗೆ ಸ್ಪಷ್ಟತೆ ಬೇಕು. ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸುವ ಕೆಲಸ ಆಗಬಾರದು. ಪರಿಹಾರ ನೀಡುವುದಾಗಿ ಹೇಳಿ ಇದೀಗ ಪರಿಶೀಲಿಸುವ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಯು.ಟಿ.ಖಾದರ್ ಹೇಳಿದರು.

ಗೋಷ್ಠಿಯಲ್ಲಿ ಮಮತಾ ಗಟ್ಟಿ, ಸದಾಶಿವ ಉಳ್ಳಾಲ್, ಮುಹಮ್ಮದ್ ಮೋನು, ಸಂತೋಷ್ ಕುಮಾರ್ ಶೆಟ್ಟಿ, ಈಶ್ವರ್ ಉಳ್ಳಾಲ್, ಎನ್.ಎಸ್. ಕರೀಂ, ಜಬ್ಬಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X