Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2020ರ ಏಪ್ರಿಲ್‌ನಿಂದ ಮನೆ ಪಟ್ಟಿ...

2020ರ ಏಪ್ರಿಲ್‌ನಿಂದ ಮನೆ ಪಟ್ಟಿ ಪ್ರಕ್ರಿಯೆ ಪ್ರಾರಂಭ, 2021ರ ಫೆ.9ರಿಂದ ಜನಗಣತಿ

ವಾರ್ತಾಭಾರತಿವಾರ್ತಾಭಾರತಿ26 Dec 2019 10:41 PM IST
share
2020ರ ಏಪ್ರಿಲ್‌ನಿಂದ ಮನೆ ಪಟ್ಟಿ ಪ್ರಕ್ರಿಯೆ ಪ್ರಾರಂಭ, 2021ರ ಫೆ.9ರಿಂದ ಜನಗಣತಿ

ಬೆಂಗಳೂರು, ಡಿ.26: ಜನಗಣತಿಯು ಪ್ರತಿ 10 ವರ್ಷಕ್ಕೊಮ್ಮೆ ನಡೆಯುವ ಪ್ರಕ್ರಿಯೆಯಾಗಿದ್ದು, 2021ರ ಜನಗಣತಿಯು 16ನೇ ಜನಗಣತಿಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2020ರ ಏಪ್ರಿಲ್ ತಿಂಗಳಿಂದ ಮನೆಪಟ್ಟಿ ತಯಾರಿಕೆ ಮತ್ತು 2021ರ ಫೆಬ್ರವರಿಯಿಂದ ಜನಸಂಖ್ಯಾ ಗಣತಿ ನಡೆಯಲಿದೆ ಎಂದು ರಾಜ್ಯ ಜನಗಣತಿ ನಿರ್ದೇಶನಾಲಯದ ನಿರ್ದೇಶಕ ವಿಜಯ್ ಕುಮರ್ ಬಾಳಿಕಟ್ಟಿ ತಿಳಿಸಿದ್ದಾರೆ.

ಗುರುವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020ರ ಏಪ್ರಿಲ್ 15ರಿಂದ ಮೇ 29ರವರೆಗೆ ಮನೆಗಣತಿ ಪ್ರಕ್ರಿಯೆ ನಡೆಯಲಿದೆ. 2021ರ ಫೆಬ್ರವರಿ 9ರಿಂದ ಫೆಬ್ರವರಿ 28ರವರೆಗೆ ಜನಗಣತಿ ಪ್ರಕ್ರಿಯೆ ನಡೆಯಲಿದೆ. ನಂತರ 2021ರ ಮಾರ್ಚ್ 1ರಿಂದ ಮಾರ್ಚ್ 5ರವರೆಗೆ ಜನಗಣತಿ ಮತ್ತು ಮನೆ ಗಣತಿಯ ಪರಿಷ್ಕರಣೆ ನಡೆಯಲಿದೆ ಎಂದು ವಿವರಿಸಿದರು.

2021ರ ಜನಗಣತಿಯನ್ನು ಆ್ಯಪ್ ಮೂಲಕ ಡಿಜಿಟಲ್ ಸೆನ್ಸಸ್ ಆಗಿ ಪರಿವರ್ತಿಸಲು ಸರಕಾರ ಮುಂದಾಗಿದೆ. ಕಾಗದ ರಹಿತ ಮತ್ತು ಸಮಸ್ಯೆಯಿಲ್ಲದ ಸೇವೆಗಳನ್ನು ಸರಕಾರ ಪರಿಚಯಿಸುತ್ತಿದ್ದು, ಅದರಲ್ಲಿ ವಿಶೇಷ ಆ್ಯಪ್ ರೂಪಿಸಿ, ಅದರ ಮೂಲಕ ಮುಂದಿನ 2021ರ ಗಣತಿಯನ್ನು ಸಂಪೂರ್ಣವಾಗಿ ಡಿಜಿಟಲ್ ಆಗಿ ನಡೆಸಲಾಗುವುದು. ಇದರ ಜತೆಗೆ ಸಾಂಪ್ರದಾಯಿಕವಾಗಿ ನಡೆಸುತ್ತಿದ್ದ ಹಳೆಯ ಮಾದರಿಯ ಜನಗಣತಿ ವ್ಯವಸ್ಥೆ ಇರಲಿದೆ. ಇದರಿಂದ ನೂತನ ಮತ್ತು ಅತ್ಯಾಧುನಿಕ ಆಯ್ಕೆಗಳುಳ್ಳ, ಸರಳ ಡಿಜಿಟಲ್ ಗಣತಿ ಸೇವೆ ದೊರೆಯಲಿದೆ ಎಂದು ತಿಳಿಸಿದರು.

ಜನಗಣತಿ ಮತ್ತು ಮನೆಗಣತಿ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ನಿಗದಿತ ಸಮಯದೊಳಗೆ ನಿರ್ವಹಿಸಿ ಯಾವುದೇ ಲೋಪಗಳಿಲ್ಲದಂತೆ ಯಶಸ್ವಿಯಾಗಿ ಈ ಪ್ರಕ್ರಿಯೆ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು

ಗಣತಿಗೆ ಶಿಕ್ಷಕರ ಬಳಕೆ: ಗಣತಿದಾರರು ಸಾಮಾನ್ಯವಾಗಿ ಪ್ರಾಥಮಿಕ ಶಾಲಾ ಶಿಕ್ಷಕರೇ ಆಗಿದ್ದು, ಪ್ರತಿ ಆರು ಗಣತಿದಾರರಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗುವುದು. ಮೇಲ್ವಿಚಾರಕರು ಸಾಮಾನ್ಯವಾಗಿ ಪ್ರೌಢಶಾಲಾ ಶಿಕ್ಷಕರು ಅಥವಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಾಗಿರುವರು ಎಂದು ಅವರು ಮಾಹಿತಿ ನೀಡಿದರು. ಎನ್‌ಪಿಆರ್‌ಗೆ ದಾಖಲೆ ಬೇಡ: ನ್ಯಾಷನಲ್ ಪಾಫುಲೇಷನ್ ರಿಜಿಸ್ಟರ್‌ಗೆ ಯಾವುದೇ ದಾಖಲೆಗಳ ಅಗತ್ಯವಿಲ್ಲ. ಸೂಚನೆ ಕೊಟ್ಟರೆ ಸಾಕು. ನಿಮ್ಮ ಮನೆಯಲ್ಲಿ ಇರುವ ಜನರೆಷ್ಟು, ಲಿಂಗ, ಜಾತಿ, ವ್ಯವಹಾರ, ಉದ್ಯೋಗ, ಮೊಬೈಲ್ ನಂಬರ್ ಸೇರಿದಂತೆ ಇನ್ನಿತರ ಮಾಹಿತಿ ನೀಡಿದರೆ ಸಾಕು ಎಂದು ವಿಜಯ್ ಕುಮಾರ್ ಸ್ಪಷ್ಟಪಡಿಸಿದರು.

ಪ್ರತ್ಯೇಕ ಆ್ಯಪ್ ಬಳಕೆ: ಜನಗಣತಿಗಾಗಿ ಪ್ರತ್ಯೇಕ ಆ್ಯಪ್ ಪ್ರಾರಂಭವಾಗಲಿದ್ದು, ಅದರಲ್ಲಿ ಜನರು ಸ್ವಯಂ ಆಗಿ ಮಾಡಿಕೊಳ್ಳಬಹುದು. ಜನಗಣತಿಯ ಆ್ಯಪ್ ಮೂಲಕ ಸಾರ್ವಜನಿಕರು ಅದರಲ್ಲಿ ಕೇಳುವ ದಾಖಲೆಗಳನ್ನು ನೀಡುವ ಮೂಲಕ ಸ್ವಯಂಕೃತವಾಗಿ ಜನಗಣತಿ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಜನಗಣತಿ ಮತ್ತು ಮನೆಗಣತಿಗಾಗಿ Census- 2021 houselist,  Census- 2021 household, Census- 2021 NRP ಎಂಬ ಮೂರು ಮೊಬೈಲ್ ಅಫ್ಲಿಕೇಷನ್‌ಗಳನ್ನು ಬಿಡುಗಡೆಗೊಳಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 2021ರ ಜನಗಣತಿಯನ್ನು 19,289 ಶಿಕ್ಷಕರು(ಎಣಿಕೆದಾರರು) ಮಾಡಬೇಕಾದ ಅಂದಾಜಿದೆ. ಜನಗಣತಿಯನ್ನು ಮೂರು ವಿಧಗಳಲ್ಲಿ ಮಾಡಬಹುದಾಗಿದ್ದು, ಎಣಿಕೆದಾರರು ಮೊಬೈಲ್ ಅಪ್ಲಿಕೇಷನ್ ಮೂಲಕ ಮನೆಮನೆಗೆ ತೆರಳಿ ಮಾಡುವುದು, ಪೇಪರ್ ಮೂಲಕ ಮಾಡುವುದು ಹಾಗೂ ಮೊಬೈಲ್ ಅಪ್ಲಿಕೇಷನ್ ಮೂಲಕ ಸ್ವತಃ ಮನೆಯವರೇ ಮಾಹಿತಿಯನ್ನು ನಮೂದಿಸಬಹುದಾಗಿದೆ.

-ವಿಜಯ್‌ಕುಮರ್ ಬಾಳಿಕಟ್ಟಿ, ರಾಜ್ಯ ಜಗಣತಿ ನಿರ್ದೇಶನಾಲಯದ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X