Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಂಕಣ ಸೂರ್ಯ ಗ್ರಹಣ: ಬಣಗುಟ್ಟಿದ ರಾಜ್ಯದ...

ಕಂಕಣ ಸೂರ್ಯ ಗ್ರಹಣ: ಬಣಗುಟ್ಟಿದ ರಾಜ್ಯದ ಹಲವು ಪ್ರಮುಖ ನಗರಗಳು

ವಾರ್ತಾಭಾರತಿವಾರ್ತಾಭಾರತಿ26 Dec 2019 10:58 PM IST
share
ಕಂಕಣ ಸೂರ್ಯ ಗ್ರಹಣ: ಬಣಗುಟ್ಟಿದ ರಾಜ್ಯದ ಹಲವು ಪ್ರಮುಖ ನಗರಗಳು

ಬೆಂಗಳೂರು, ಡಿ.26: ಕಂಕಣ ಸೂರ್ಯ ಗ್ರಹಣದ ಹಿನ್ನೆಲೆಯಲ್ಲಿ ರಾಜಧಾನಿ ಸೇರಿದಂತೆ ರಾಜ್ಯದ ಹಲವು ಬೀದಿಗಳು ಗುರುವಾರ ಮಧ್ಯಾಹ್ನದವರೆಗೂ ಜನಸಂದಣಿಯಿಲ್ಲದೆ ಬಣಗುಡುತ್ತಿದ್ದವು.

ಗುರುವಾರ ಬೆಳಗ್ಗೆ 8 ಗಂಟೆಯಿಂದ 11 ಗಂಟೆವರೆಗೆ ಕಂಕಣ ಸೂರ್ಯ ಗ್ರಹಣ ಸಂಭವಿಸಿತ್ತು. ಹಲವರು ತಮ್ಮ ಮನೆಗಳ ಮುಂದೆಯೇ ಗ್ರಹಣ ವೀಕ್ಷಣೆ ಮಾಡಿದರೆ, ಮತ್ತಷ್ಟು ಜನರು ಕೆಲವು ಕಡೆ ಸಂಘಟನೆಗಳಿಂದ ಆಯೋಜಿಸಿದ್ದ ಸ್ಥಳಕ್ಕೆ ತೆರಳಿ ಗ್ರಹಣ ವೀಕ್ಷಿಸಿದರು. ಆದರೆ, ಬಹುತೇಕ ಜನರು ಮನೆಗಳಿಂದ ಹೊರಬಂದಿರಲಿಲ್ಲ.

ರಾಜಧಾನಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ದಾವಣಗೆರೆ ಸೇರಿದಂತೆ ಹಲವು ನಗರಗಳಲ್ಲಿನ ಪ್ರಮುಖ ಬೀದಿಗಳಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆದಿರಲಿಲ್ಲ. ಅಲ್ಲದೆ, ಸಂಚಾರ ದಟ್ಟಣೆಯೂ ಕಡಿಮೆಯಿತ್ತು. ಸೂರ್ಯ ಗ್ರಹಣದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ಜನರು ಮನೆಯಿಂದ ಹೊರ ಬಂದಿರಲಿಲ್ಲ. ಜತೆಗೆ, ಬುಧವಾರ ಕ್ರಿಸ್‌ಮಸ್ ರಜೆಯೂ ಇತ್ತು.

ನಗರದಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಜನರು ಅತಿ ಕಡಿಮೆಯಿತ್ತು. ಉಳಿದಂತೆ ಟ್ಯಾಕ್ಸಿ, ಆಟೋ ಸೇವೆ ವಿರಳವಾಗಿತ್ತು. ಕಚೇರಿಗಳಿಗೆ ತೆರಳಲೇಬೇಕಾದವರು ಅಷ್ಟೇ ಮನೆಯಿಂದ ಹೊರಬಂದಿದ್ದರು. ಉಳಿದಂತೆ ಬಹುತೇಕರು ಮನೆಯಲ್ಲಿಯೇ ಉಳಿದುಕೊಂಡಿದ್ದರು.

ಬೆಂಗಳೂರಿನಲ್ಲಿ ಪ್ರತಿದಿನ ಜನದಟ್ಟಣೆಯಿಂದ ಗಿಜಿಗುಡುವ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಕೆ.ಆರ್.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿ, ಮೆಜೆಸ್ಟಿಕ್, ಬನ್ನೇರುಘಟ್ಟ, ಬಾಣಸವಾಡಿ, ಹೊಸೂರು ಸೇರಿದಂತೆ ಹಲವು ರಸ್ತೆಗಳಲ್ಲಿ ಅಘೋಷಿತ ಬಂದ್ ಆದಂತೆ ಭಾಸವಾಗುತ್ತಿತ್ತು. ಜನರೇ ಇಲ್ಲದಿದ್ದರಿಂದ ಅನಿವಾರ್ಯವಾಗಿ ಎಲ್ಲ ಅಂಗಡಿಗಳು ಸ್ವಯಂಪ್ರೇರಿತವಾಗಿ ಬಾಗಿಲು ಮುಚ್ಚಿದ್ದರು.

ಗ್ರಹಣ ಆರಂಭವಾಗುತ್ತಿದ್ದಂತೆಯೇ ಎಲ್ಲ ದೇವಾಲಯಗಳನ್ನು ಮುಚ್ಚಲಾಗಿತ್ತು. ಗ್ರಹಣ ಅಂತ್ಯಗೊಳ್ಳುತ್ತಿದ್ದಂತೆ ಬಾಗಿಲು ತೆರೆದು, ವಿಶೇಷ ಪೂಜೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಅಧಿಕ ಸಂಖ್ಯೆಯಲ್ಲಿ ದೇವಾಲಯಗಳಿಗೆ ತೆರಳಿ ದೇವರಿಗೆ ನಮಸ್ಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X