ಭಾಷೆ, ಸಂಸ್ಕೃತಿಯನ್ನು ಗೌರವಿಸಬೇಕು: ಅರ್ಜಿದಾರರಿಗೆ ಹೈಕೋರ್ಟ್ ಕಿವಿಮಾತು

ಬೆಂಗಳೂರು, ಡಿ.27: ನಾವು ಕನ್ನಡ ನಾಡಿನಲ್ಲಿ ಇದ್ದೇವೆ ಎಂಬುದನ್ನು ಮರೆಯಬಾರದು. ಹಾಗೆಯೇ ಇಲ್ಲಿನ ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸಬೇಕೆಂದು ಹೈಕೋರ್ಟ್ ಅರ್ಜಿದಾರರಿಗೆ ಕಿವಿಮಾತು ಹೇಳಿದೆ.
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕೆಂಬ ಆದೇಶವನ್ನು ಪ್ರಶ್ನಿಸಿ ಮೆಟ್ರೋ ಕ್ಯಾಶ್ ಆ್ಯಂಡ್ ಕ್ಯಾರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ಕರ್ನಾಟಕದಲ್ಲಿ ವಾಸ ಹಾಗೂ ವ್ಯಾಪಾರ ಮಾಡುತ್ತೇವೆ ಎಂದ ಮೇಲೆ ಇಲ್ಲಿನ ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸಬೇಕೆಂದು ಅರ್ಜಿದಾರರಿಗೆ ಕಿವಿಮಾತು ಹೇಳಿದ ನ್ಯಾಯಪೀಠವು ಭಾರತೀಯ ಚಿಲ್ಲರೆ ಮಾರಾಟಗಾರರ ಸಂಘ ಸಲ್ಲಿಸಿರುವ ಅರ್ಜಿಯೊಂದಿಗೆ ಮೆಟ್ರೋ ಕ್ಯಾಶ್ ಆ್ಯಂಡ್ ಕ್ಯಾರಿ ಅರ್ಜಿಯನ್ನು ಸೇರಿಸಲು ನಿರ್ದೇಶನ ನೀಡಿದೆ.
Next Story





