Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ ದಲಿತ ಚಳವಳಿಗಳು ಬೆಳೆಯಲು...

ರಾಜ್ಯದಲ್ಲಿ ದಲಿತ ಚಳವಳಿಗಳು ಬೆಳೆಯಲು ಬಿ.ಬಸವಲಿಂಗಪ್ಪ ಕಾರಣ: ಹಿರಿಯ ಕವಿ ಸಿದ್ದಲಿಂಗಯ್ಯ

ಬಸವಲಿಂಗಪ್ಪ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ27 Dec 2019 11:32 PM IST
share
ರಾಜ್ಯದಲ್ಲಿ ದಲಿತ ಚಳವಳಿಗಳು ಬೆಳೆಯಲು ಬಿ.ಬಸವಲಿಂಗಪ್ಪ ಕಾರಣ: ಹಿರಿಯ ಕವಿ ಸಿದ್ದಲಿಂಗಯ್ಯ

ಬೆಂಗಳೂರು, ಡಿ.27: ರಾಜ್ಯದಲ್ಲಿ ದಲಿತ ಚಳವಳಿಗಳು, ದಲಿತ ಸಂಘಟನೆಗಳು ಬೆಳೆಯಲು ಮಾಜಿ ಸಚಿವ ಬಿ.ಬಸವಲಿಂಗಪ್ಪ ಅವರೆ ಕಾರಣ ಎಂದು ಹಿರಿಯ ಕವಿ ಸಿದ್ದಲಿಂಗಯ್ಯ ಹೇಳಿದ್ದಾರೆ.

ಶುಕ್ರವಾರ ರಮಾಬಾಯಿ ಅಂಬೇಡ್ಕರ್ ಭವನದಲ್ಲಿ ಬೆಂವಿವಿ ಆಯೋಜಿಸಿದ್ದ ಬಸವಲಿಂಗಪ್ಪ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ ಸಮಾರಂಭ, ಬಿ.ಬಸವಲಿಂಗಪ್ಪನವರ 27ನೆ ಮಹಾಪರಿನಿಬ್ಬಾಣದ ಸ್ಮರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೋರಾಟ ಮತ್ತು ಅಂಬೇಡ್ಕರ್ ಅವರ ಕುರಿತು ನಮಗೆ ತಿಳಿವಳಿಕೆ ನೀಡುತ್ತಿದ್ದ ಬಿ.ಬಸವಲಿಂಗಪ್ಪ ಅವರು ರಾಜ್ಯದಲ್ಲಿ ದಲಿತ ಚಳವಳಿಗಳು ಹಾಗೂ ದಲಿತ ಸಂಘಟನೆಗಳು ಬೆಳೆಯಲು ಕಾರಣರಾದರು ಎಂದು ಹೇಳಿದರು.

ನಾನು 8ನೆ ತರಗತಿಯಲ್ಲಿದ್ದಾಗಲೇ ಬಿ.ಬಸವಲಿಂಗಪ್ಪ ಅವರ ಹೋರಾಟವನ್ನು ನೋಡಿ ಬೆಳೆದವನು. ಅವರು ಒಂದು ಬಾರಿ ಪುರಭವನದ ಮುಂದೆ ದಲಿತ ಚಳವಳಿಯನ್ನು ನಡೆಸಿದಾಗ ನಮ್ಮ ಹಾಸ್ಟೆಲ್‌ನಿಂದ 300 ಜನರನ್ನು ಕರೆದುಕೊಂಡು ಹೋಗಿ ಬೆಂಬಲ ವ್ಯಕ್ತಪಡಿಸಿದ್ದೆ. ಆವಾಗಿನಿಂದಲೇ ಅವರ ಹೋರಾಟದ ಶಕ್ತಿಯನ್ನು ಬಲ್ಲವನಾಗಿದ್ದೇನೆ ಎಂದು ಹೇಳಿದರು.

ಬಿ.ಬಸವಲಿಂಗಪ್ಪ ಅವರ ನಿಕಟವರ್ತಿಯಾದ ಬಸವರಾಜು ಮಾತನಾಡಿ, ಈ ರಾಜ್ಯದಲ್ಲಿ ದಲಿತದ ಪರ ಧ್ವನಿ ಮೊಳಗಿಸಿದ ರಾಜಕೀಯ ನಾಯಕ ಯಾರಾದರೂ ಇದ್ದರೆ ಅದು ಬಿ.ಬಸವಲಿಂಗಪ್ಪ ಅವರು. ನಾವು ವಿಚಾರಶೀಲರಾಗದಿದ್ದರೆ, ನಮ್ಮ ವಿದ್ಯೆ ಮತ್ತು ಬುದ್ಧಿ ಗುಲಾಮ ಪದ್ಧತಿಗೆ ಒಳಗಾಗುತ್ತದೆ ಎಂದು ತಿಳಿಸಿಕೊಟ್ಟವರು ಎಂದು ಹೇಳಿದರು.

ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಟಿ.ಎಚ್.ಮೂರ್ತಿ ಮಾತನಾಡಿ, ಹೋರಾಟಗಳಿಗೆ ಕಾನೂನಿನ ರೂಪಕೊಟ್ಟ ಮಹಾನ್ ಚೇತನ ಬಿ.ಬಸವಲಿಂಗಪ್ಪ ಹಾಗೂ ನಗರಗಳ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ಉಪನಗರಗಳ ನಿರ್ಮಾಣದ ಕುರಿತು ದೂರದರ್ಶಿತ್ವ ಹೊಂದಿದ್ದಂತಹ ರಾಜಕಾರಣಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ಕುಲಸಚಿವ ಡಾ.ರಂಗಸ್ವಾಮಿ, ರೆವೆನ್ಯೂ ಅಧಿಕಾರಿ ಹನುಮಂತಪ್ಪ, ಡಿಎಸ್‌ಎಸ್ ಸಂಚಾಲಕ ಮೋಹನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X