Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಝೋತಾ ಸ್ಫೋಟ ಪ್ರಕರಣ: ಎನ್‍ಐಎ ತನಿಖೆಯ...

ಸಂಝೋತಾ ಸ್ಫೋಟ ಪ್ರಕರಣ: ಎನ್‍ಐಎ ತನಿಖೆಯ ಬಗ್ಗೆ ಹಲವು ಪ್ರಶ್ನೆಗಳನ್ನೆತ್ತಿದ ಪಿಯುಡಿಆರ್ ವರದಿ

ವಾರ್ತಾಭಾರತಿವಾರ್ತಾಭಾರತಿ28 Dec 2019 3:41 PM IST
share
ಸಂಝೋತಾ ಸ್ಫೋಟ ಪ್ರಕರಣ: ಎನ್‍ಐಎ ತನಿಖೆಯ ಬಗ್ಗೆ ಹಲವು ಪ್ರಶ್ನೆಗಳನ್ನೆತ್ತಿದ ಪಿಯುಡಿಆರ್ ವರದಿ

ಹೊಸದಿಲ್ಲಿ: ಹನ್ನೆರಡು ವರ್ಷಗಳ ಹಿಂದೆ 2007ರಲ್ಲಿ ಸಂಭವಿಸಿದ ಸಂಝೋತಾ ಸ್ಫೋಟ ಪ್ರಕರಣ ಕುರಿತಂತೆ ರಾಷ್ಟ್ರೀಯ ತನಿಖಾ ಏಜನ್ಸಿ (ಎನ್ ಐಎ) ಕೈಗೊಂಡ ತನಿಖೆ `ತಾರತಮ್ಯ'ದಿಂದ ಕೂಡಿತ್ತು ಹಾಗೂ ಕೇಸರಿ ಉಗ್ರವಾದದ ಅಂಶವನ್ನು ನಿರ್ಲಕ್ಷ್ಯಿಸಿತ್ತು ಎಂದ  ಮಾನವ ಹಕ್ಕುಗಳ ಸಂಸ್ಥೆ ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರೆಟಿಕ್ ರೈಟ್ಸ್ (ಪಿಯುಡಿಆರ್) ತನ್ನ ವರದಿ `ಎ ಕಾಂಪ್ರೊಮೈಸ್ಡ್ ಇನ್ವೆಸ್ಟಿಗೇಶನ್'ನಲ್ಲಿ ಹೇಳಿ ಹಲವಾರು ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

"ಪ್ರಕರಣದ ಸಾಕ್ಷಿಗಳಿಗೆ ಸೂಕ್ತ ರಕ್ಷಣೆಯಿಲ್ಲದೇ ಇರುವುದರಿಂದ ಹಲವಾರು ಮಂದಿ ತಿರುಗಿ ಬಿದ್ದಿರುವುದು, ಅಪರಾಧಕ್ಕೂ ಆರೋಪಿಗಳಿಗೂ ನಂಟು ಕಲ್ಪಿಸುವ ಪ್ರಮುಖ ಸಾಕ್ಷ್ಯವಿಲ್ಲದೇ ಇರುವುದು, ದೋಷಾರೋಪ ಪಟ್ಟಿ ಸಲ್ಲಿಸಲು ಎನ್‍ ಐಎ ತೋರಿದ  ಭಾರೀ ಅವಸರ ಹಾಗೂ ಘಟನೆ ನಡೆದ ನಂತರದ ಕೆಲ ವರ್ಷಗಳಲ್ಲಿ ಕೇಸರಿ ಉಗ್ರ ಸಂಘಟನೆಗಳ ಕುರಿತಂತೆ ತನಿಖಾ ಏಜನ್ಸಿಗಳು ಕಣ್ಣು ಮುಚ್ಚಿ ಕುಳಿತಿದ್ದರಿಂದ ಸಮಯದ ನಷ್ಟವಾಗಿರುವುದು ತಾರತಮ್ಯಕಾರಿ ತನಿಖೆ ನಡೆದಿರುವುದನ್ನು ಸೂಚಿಸುತ್ತದೆ'' ಎಂದು ವರದಿಯ ಜತೆ ಕಳುಹಿಸಿರುವ ಟಿಪ್ಪಣಿಯಲ್ಲಿ ಪಿಯುಡಿಆರ್ ಹೇಳಿದೆ.

ಪ್ರಕರಣದ ಎಲ್ಲಾ ಆರೋಪಿಗಳನ್ನು ಹರ್ಯಾಣದ ಪಂಚಕುಲಾದ ಎನ್‍ಐಎ ವಿಶೇಷ ನ್ಯಾಯಾಲಯ ಮಾರ್ಚ್ 2019ರಲ್ಲಿ ಖುಲಾಸೆಗೊಳಿಸಿತ್ತು. ಖುಲಾಸೆಗೊಂಡವರಲ್ಲಿ ಸ್ವಾಮಿ ಅಸೀಮಾನಂದ, ರಾಮಚಂದ್ರ ಕಲ್ಸಂಗರ, ಸಂದೀಪ್ ಡಾಂಗೆ, ಲೋಕೇಶ್ ಶರ್ಮ, ಕಮಲ್ ಚೌಹಾಣ್, ರಾಜೇಂದ್ರ ಚೌಧುರಿ ಹಾಗೂ ಅಮಿತ್ ಹಕ್ಲ ಸೇರಿದ್ದರು. ಎಲ್ಲರೂ ವಿವಿಧ ಕೇಸರಿ ಉಗ್ರ ಸಂಘಟನೆಗಳ ಭಾಗವಾಗಿದ್ದರು ಎಂಬ ಆರೋಪವಿತ್ತು.

ಅಸಮಾಧಾನಕರ ರೀತಿಯಲ್ಲಿ ನಡೆಸಲಾದ ತನಿಖೆಯಿಂದ ಎಲ್ಲಾ ಆರೋಪಿಗಳೂ ಖುಲಾಸೆಗೊಳ್ಳುವಂತಾಯಿತೆಂದೂ ವಿಶೇಷ ನ್ಯಾಯಾಲಯ  ಎನ್‍ಐಎ ಕುರಿತು ಹೇಳಿದ್ದನ್ನೂ ವರದಿ ಉಲ್ಲೇಖಿಸಿದೆಯಲ್ಲದೆ, ತನಿಖೆಯ ಆರಂಭದಿಂದಲೂ ಎನ್‍ಐಎ ಕಾರ್ಯನಿರ್ವಹಿಸಿದ ರೀತಿ ಹಲವಾರು ಪ್ರಶ್ನೆಗಳಿಗೆ ದಾರಿ ಮಾಡಿ ಕೊಟ್ಟಿದೆ ಎಂದು ಹೇಳಿದೆ.

ಪ್ರಮುಖ ಆರೋಪಿಗಳಾದ ಪ್ರಜ್ಞಾ ಠಾಕುರ್, ಸುನೀಲ್ ಜೋಷಿ, ಸಂದೀಪ್ ಡಾಂಗೆ ಹಾಗೂ ಅಸೀಮಾನಂದ ನಡುವೆ ನಂಟಿತ್ತು  ಹಾಗೂ ಅವರು ಫೆಬ್ರವರಿ-ಮಾರ್ಚ್ 2007ರ ನಡುವೆ  ಪರಸ್ಪರ ಸಂಪರ್ಕದಲ್ಲಿದ್ದರೆಂಬುದಕ್ಕೆ ಕರೆ ವಿವರ ದಾಖಲೆಗಳಿದ್ದರೂ  ಅವುಗಳನ್ನು ಎನ್‍ಐಎ ನ್ಯಾಯಾಲಯದ ಮುಂದೆ ಹಾಜರುಪಡಿಸಲು ವಿಫಲವಾಗಿತ್ತಲ್ಲದೆ, ಆರೋಪಿಗಳ ಮೊಬೈಲ್ ಫೋನ್ ಸಿಮ್ ಕಾರ್ಡ್  ಕುರಿತಾದ ಸಾಕ್ಷ್ಯವನ್ನೂ ಒದಗಿಸಿರಲಿಲ್ಲ ಎಂದು ಪಿಯುಡಿಆರ್ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X