Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಂಕ್ಚರ್ ಹಾಕುವವರಿಂದಲ್ಲ,...

ಪಂಕ್ಚರ್ ಹಾಕುವವರಿಂದಲ್ಲ, ಪಾರ್ಲಿಮೆಂಟ್‍ನಲ್ಲಿ ಕುಳಿತಿರುವವರಿಂದ ದೇಶ ಹಾಳಾಗಿದೆ: ಜ್ಞಾನಪ್ರಕಾಶ್ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ28 Dec 2019 5:18 PM IST
share
ಪಂಕ್ಚರ್ ಹಾಕುವವರಿಂದಲ್ಲ, ಪಾರ್ಲಿಮೆಂಟ್‍ನಲ್ಲಿ ಕುಳಿತಿರುವವರಿಂದ ದೇಶ ಹಾಳಾಗಿದೆ: ಜ್ಞಾನಪ್ರಕಾಶ್ ಸ್ವಾಮೀಜಿ

ಕೊಳ್ಳೇಗಾಲ, ಡಿ.28: ಪಂಕ್ಚರ್ ಹಾಕುವವರು ಪ್ರಾಮಾಣಿಕರು. ಅವರಿಂದ ಈ ದೇಶ ಹಾಳಾಗಿಲ್ಲ. ಪಾರ್ಲಿಮೆಂಟ್‍ನಲ್ಲಿ ಕುಳಿತಿರುವವರಿಂದ ದೇಶ ಹಾಳಾಗಿದೆ ಎಂದು ಮೈಸೂರಿನ ಉರಿಲಿಂಗಪೆದ್ದಮಠ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.   

ಪಟ್ಟಣದ ಎಂ.ಜಿ.ಎಸ್.ವಿ ಕಾಲೇಜು ಮೈದಾನದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದರು.

ಎನ್.ಆರ್.ಸಿ ಜಾರಿಗೆ ಬಂದರೆ ಪೌರತ್ವವನ್ನು ಪೇಪರ್ ಅಥವಾ ದಾಖಲೆಗಳಿಂದ ಸಾಬೀತು ಪಡಿಸಬೇಡಿ, ಬದಲಾಗಿ ಡಿ.ಎನ್.ಎ. ಪರೀಕ್ಷೆ ಮೂಲಕ ಸಾಬೀತು ಪಡಿಸುವಂತೆ ಒತ್ತಾಯಿಸೋಣ. ಡಿ.ಎನ್.ಎ ಮಾಡಿಸಿದರೆ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದ ವರ್ಗದವರು ಒಂದೇ ರಕ್ತ ಎಂಬುದು ಗೊತ್ತಾಗುತ್ತದೆ. ಇವರು ಇಲ್ಲಿನ ಮೂಲ ನಿವಾಸಿಗಳು ಎಂಬುದು ಸಾಬೀತಾಗುತ್ತದೆ. ಆದರೆ ಹೊರಗಿನವರು ಬಂದು ನಮಗೆ ಪೌರತ್ವ ಸಾಬೀತು ಮಾಡಲು ಹೇಳುತ್ತಿದ್ದಾರೆ. ಹಾಗೇನಾದರು ಸಾಬೀತು ಪಡಿಸಬೇಕಿದ್ದರೆ ಡಿಎನ್‍ಎ ಮೂಲಕ ಸಾಬೀತು ಪಡಿಸಲಿ ಎಂದು ಹೇಳಿದರು.

ಈ ಜಗತ್ತಿನಲ್ಲಿ ಎರಡು ವಿಷಯಗಳು ಅತಿ ದೊಡ್ಡ ಹೆಸರು ಮಾಡಿವೆ. ಅದರ ಪೈಕಿ ಒಂದು ಭಾರತದ 130 ಕೋಟಿ ಜನರ ಭವಿಷ್ಯ ಬರೆದಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪೆನ್ನು. ಎರಡನೆಯದು ಟಿಪ್ಪು ಸುಲ್ತಾನ್ ಅವರ ಖಡ್ಗ. ಇವೆರಡೂ ಜಗತ್ತಿನಾದ್ಯಂತ ಹೆಸರು ಮಾಡಿರುವುದು ಎಂದರು.

ಭಾರತ ದೇಶವನ್ನು ಧರ್ಮಾಧಾರಿತ ದೇಶ ಮಾಡಲು ಹೊರಟಿದ್ದಾರೆ. ಮೊದಲು ಮನುವಾದದ ಕನ್ನಡಕ ತೆಗೆಯಿರಿ. ಇದನ್ನು ಸಂವಿಧಾನ ಒಪ್ಪುವುದಿಲ್ಲ. ಭಾರತ ಸರ್ವ ಜನಾಂಗದ ಶಾಂತಿಯ ತೋಟ. ಇದು ಧರ್ಮ ನಿರಪೇಕ್ಷಿತ ರಾಷ್ಟ್ರ ಎಂದು ವ್ಯಾಖ್ಯಾನಿಸಿದರು.

ಬಳಿಕ ಬೆಂಗಳೂರಿನ ಇಸಾಕ್ ಸಿಎಎ ಕಾಯ್ದೆ ಹಾಗೂ ಎನ್.ಆರ್.ಸಿ ಕುರಿತು ಸುದೀರ್ಘ ಉಪನ್ಯಾಸ ನೀಡಿದರು. ಸಾಹಿತಿ ಹಾಗೂ ಜೆಡಿಎಸ್ ಮುಖಂಡ ಮುಳ್ಳೂರು ಶಿವಮಲ್ಲು, ಮುಸ್ಲಿಂ ಧರ್ಮಗುರುಗಳಾದ ಮೌಲಾನ ಅಂಜದ್ ಖಾಸ್ಮಿ, ಮೌಲಾನ ಅಬೂಬಕರ್ ಸಿದ್ದೀಖ್, ಮೌಲಾನ ವಸೀಂ ಅಹಮದ್, ನಾಯಕ ಜನಾಂಗದ ಮುಖಂಡ ಚಿಕ್ಕಲಿಂಗಯ್ಯ, ರೈತ ಮುಖಂಡ ಗೌಡೇಗೌಡ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಶ್ರೀ.ಸಿದ್ದಾರೂಢ ಸ್ವಾಮೀಜಿ, ನಗರಸಭೆ ಮಾಜಿ ಅಧ್ಯಕ್ಷ ಶಾಂತರಾಜು, ಸದಸ್ಯರುಗಳಾದ ಶಂಕನಪುರ ಪ್ರಕಾಶ್, ನಾಸೀರ್ ಷರೀಫ್, ರೈತ ಮುಖಂಡರುಗಳಾದ ಶಿವರಾಂ ಹಾಗೂ ಪಿ.ನಾಗರಾಜು, ದಲಿತ ಮುಖಂಡರಾದ ಸೋಮಣ್ಣ, ಮಣಿ, ರಾಜಶೇಖರ್ ಮೂರ್ತಿ, ನಟರಾಜು(ಕಪಿಲ್), ಚಂದು, ಶೇಖರ್ ಬುದ್ಧ, ಡಿಎಸ್‍ಎಸ್. ನ ಸಿದ್ದರಾಜು, ಅಂಜುಮನ್ ಸಂಸ್ಥೆಯ ಎಲ್ಲಾ ಸದಸ್ಯರುಗಳು, ಮುಸ್ಲಿಂ ಮುಖಂಡರುಗಳು, ಯುವ ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X