Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಾಮಾಣಿಕತೆಯ ಮಾರ್ಗವು ಯಾತನಾದಾಯಕ:...

ಪ್ರಾಮಾಣಿಕತೆಯ ಮಾರ್ಗವು ಯಾತನಾದಾಯಕ: ಸರಕಾರಿ ಏಜೆನ್ಸಿಗಳ ತನಿಖೆ ಬಗ್ಗೆ ಅಶೋಕ್ ಲಾವಸ

ಮೋದಿ, ಅಮಿತ್ ಶಾಗೆ ಕ್ಲೀನ್ ಚಿಟ್ ವಿರೋಧಿಸಿದ್ದ ಚುನಾವಣಾ ಆಯುಕ್ತ

ವಾರ್ತಾಭಾರತಿವಾರ್ತಾಭಾರತಿ28 Dec 2019 9:03 PM IST
share
ಪ್ರಾಮಾಣಿಕತೆಯ ಮಾರ್ಗವು ಯಾತನಾದಾಯಕ: ಸರಕಾರಿ ಏಜೆನ್ಸಿಗಳ ತನಿಖೆ ಬಗ್ಗೆ ಅಶೋಕ್ ಲಾವಸ

ಹೊಸದಿಲ್ಲಿ, ಡಿ.28: ಸರಕಾರಿ ಏಜೆನ್ಸಿಗಳಿಂದ ನಿರಂತರ ತನಿಖೆ ಎದುರಿಸುತ್ತಿರುವ ಚುನಾವಣಾ ಆಯುಕ್ತ ಅಶೋಕ್ ಲಾವಸ ಅವರು, ಪ್ರಾಮಾಣಿಕತೆಯ ಮಾರ್ಗವು ಯಾತನಾದಾಯಕವಾಗಿದೆ. ಹೆಚ್ಚಿನ ಶಕ್ತಿಯನ್ನು ಕಬಳಿಸುತ್ತದೆ ಎಂದು ಹೇಳಿದ್ದಾರೆ.

indianexpress.comನಲ್ಲಿ ಬರೆದಿರುವ ಲೇಖನದಲ್ಲಿ ಲಾವಸ, “ಪ್ರಾಮಾಣಿಕತೆಯು ಸರಳ ನೀತಿಯಲ್ಲ, ಆ ಮಾರ್ಗದಲ್ಲಿ ಸಾಗುವವರು ಸದಾ ಬೆಲೆಯನ್ನು ತೆರುತ್ತಲೇ ಇರಬೇಕಾಗುತ್ತದೆ” ಎಂದಿದ್ದಾರೆ. ಲಾವಸ ಹಾಲಿ ಚುನಾವಣಾ ಆಯುಕ್ತ ಸುನಿಲ್ ಅರೋರಾರ ನಿವೃತ್ತಿಯ ಬಳಿಕ ಅವರ ಸ್ಥಾನಕ್ಕೇರುವ ಸಾಲಿನಲ್ಲಿದ್ದಾರೆ.

ಲೋಕಸಭಾ ಚುನಾವಣೆಗಳ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪಗಳ ಪ್ರಕರಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಚುನಾವಣಾ ಆಯೋಗವು ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿದಾಗಿನಿಂದ ತೆರಿಗೆ ವಂಚನೆ ಆರೋಪಗಳಲ್ಲಿ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗಳು ಲಾವಸ ಅವರ ಬೆನ್ನ ಹಿಂದೆ ಬಿದ್ದಿದೆ.

"ಪ್ರಾಮಾಣಿಕರು ದೈಹಿಕವಾಗಿ ಸದೃಢ ಅಥವಾ ಶಕ್ತಿಶಾಲಿಯಲ್ಲದಿರಬಹುದು. ಆದರೆ ಅವರು ಧೈರ್ಯವನ್ನು ಹೊಂದಿರುತ್ತಾರೆ ಮತ್ತು ಆ ಧೈರ್ಯವೇ ಅವರ ಶಕ್ತಿಯಾಗಿರುತ್ತದೆ. ಅವರ ದುಃಖದ ಸಮಯದಲ್ಲಿ ಅವರಿಗೆ ಅಗತ್ಯವಿದ್ದಾಗ ಅಥವಾ ಅವರನ್ನು ಪ್ರತ್ಯೇಕತೆ ಕಾಡುತ್ತಿರುವಾಗ ಅವರ ಜೊತೆ ನಿಲ್ಲದವರು ಧೈರ್ಯಶಾಲಿಗಳಲ್ಲದಿರಬಹುದು. ಅವರು ನಾಟಕವೊಂದು ಮುಗಿದಾಗ ಎದ್ದು ನಿಂತು ಚಪ್ಪಾಳೆ ಬಾರಿಸುವ ಪ್ರೇಕ್ಷಕರಿದ್ದಂತೆ. ಅವರು ನಾಯಕನೊಂದಿಗೆ ಅನುಭೂತಿ ಹೊಂದಿದ್ದರೂ ಅವರು ನಾಟಕದಲ್ಲಿ ಭಾಗವಹಿಸಿರುವುದಿಲ್ಲ. ನಾಯಕನು ಕಷ್ಟಪಡುವುದನ್ನು ಅವರು ನೋಡಬಹುದು, ಆತನ ಸಂಕಷ್ಟಕ್ಕಾಗಿ ಹನಿ ಕಣ್ಣೀರನ್ನು ಸುರಿಸಬಹುದು, ಆತನಿಗಾಗಿ ಮೌನ ಪ್ರಾರ್ಥನೆ ಸಲ್ಲಿಸಬಹುದು ಮತ್ತು ಆತನನ್ನು ಶ್ಲಾಘಿಸುವ ಮುನ್ನ ನಾಟಕದ ಅಂತ್ಯಕ್ಕಾಗಿ ಕಾಯಬಹುದು" ಎಂದು ಲಾವಸ ತಾನು ಮತ್ತು ತನ್ನ ಕುಟುಂಬ ಎದುರಿಸುತ್ತಿರುವ ಅಗ್ನಿಪರೀಕ್ಷೆಗಳನ್ನು ಪ್ರಸ್ತಾಪಿಸಿ ಬರೆದಿದ್ದಾರೆ.

ಲೋಕಸಭಾ ಚುನಾವಣೆಗಳ ಸಂದರ್ಭ ನೀತಿ ಸಂಹಿತೆ ಆರೋಪಗಳಲ್ಲಿ ಮೋದಿ ಮತ್ತು ಶಾ ಅವರಿಗೆ ಕ್ಲೀನ್ ಚಿಟ್ ನೀಡುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಲಾವಸ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದು ವರದಿಯಾಗಿತ್ತು. ತನ್ನ ಭಿನ್ನಾಭಿಪ್ರಾಯಗಳನ್ನು ಚುನಾವಣಾ ಆಯೋಗವು ದಾಖಲಿಸಿಕೊಂಡಿರಲಿಲ್ಲ ಎಂದು ಆಗ ಲಾವಸ ಬಹಿರಂಗವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದರು. ಆದಾಯ ತೆರಿಗೆ ಇಲಾಖೆ ಮತ್ತು ಮೋದಿ ಸರಕಾರ ಶಂಕಿತ ತೆರಿಗೆ ವಂಚನೆ ಮತ್ತು ಅಧಿಕಾರ ದುರುಪಯೋಗಕ್ಕಾಗಿ ಲಾವಸ ಮತ್ತು ಅವರ ಕುಟುಂಬದ ವಿರುದ್ಧ ಹಲವಾರು ವಿಚಾರಣೆಗಳನ್ನು ಆರಂಭಿಸಿದ್ದು, ಆಗಿನಿಂದಲೂ ಅವರು ವಿವಾದಗಳ ಕೇಂದ್ರಬಿಂದುವಾಗಿದ್ದಾರೆ.

ಜೀವನದಲ್ಲಿ ಪ್ರತಿಯೊಂದಕ್ಕೂ ಬೆಲೆಯಿರುವಂತೆ ಪ್ರಾಮಾಣಿಕತೆಗೂ ಬೆಲೆಯಿದೆ. ನೇರವಾಗಿ ಅಥವಾ ಪರೋಕ್ಷವಾಗಿ ಆ ಬೆಲೆಯನ್ನು ತೆರಲು ಸಿದ್ಧರಾಗಿರುವುದು ಪ್ರಾಮಾಣಿಕ ಕೃತ್ಯದ ಭಾಗವಾಗಿದೆ ಎಂದು ಬರೆದಿರುವ ಲಾವಸ, ಪ್ರಾಮಾಣಿಕರಿಂದ ವಿರೋಧಿಸಲ್ಪಟ್ಟಿರುವವರು ವಿನಮ್ರತೆಯ ಶ್ರೇಷ್ಠತೆಯನ್ನು ಸೌಮ್ಯವಾಗಿ ಒಪ್ಪಿಕೊಳ್ಳುತ್ತಾರೆ ಎಂದು ನಿರೀಕ್ಷಿಸುವುದು ಮುಗ್ಧತನವಾಗುತ್ತದೆ. ಅವರು ಪ್ರತಿದಾಳಿ ನಡೆಸುತ್ತಾರೆ ಮತ್ತು ಪ್ರಾಮಾಣಿಕರು ಏಕಾಂಗಿಯಾಗಿ ನರಳುವ ಮೂಲಕ ಅದಕ್ಕೆ ಬೆಲೆಯನ್ನು ತೆರಬೇಕಾಗುತ್ತದೆ ಎಂದೂ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X