Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಂಗಳನೆಡೆಗೆ ಯಾನಕ್ಕೆ ‘ನಾಸಾ’ದ ಸಿದ್ಧತೆ...

ಮಂಗಳನೆಡೆಗೆ ಯಾನಕ್ಕೆ ‘ನಾಸಾ’ದ ಸಿದ್ಧತೆ ಸ್ವಚ್ಛತೆಗೆ ಆದ್ಯತೆ

ವಾರ್ತಾಭಾರತಿವಾರ್ತಾಭಾರತಿ28 Dec 2019 10:07 PM IST
share
ಮಂಗಳನೆಡೆಗೆ ಯಾನಕ್ಕೆ ‘ನಾಸಾ’ದ ಸಿದ್ಧತೆ ಸ್ವಚ್ಛತೆಗೆ ಆದ್ಯತೆ

ವಾಷಿಂಗ್ಟನ್, ಡಿ.28: ಮುಂದಿನ ವರ್ಷ ಮಂಗಳಗ್ರಹದೆಡೆಗೆ ಯಾನ ನಡೆಸಲಿರುವ ಮಾರ್ಸ್ 2020 ರೋವರ್ ಕುಜಗ್ರಹದಲ್ಲಿ ಸೂಕ್ಷ್ಮಜೀವಿಯ ಬದುಕಿನ ಕುರುಹುಗಳನ್ನು ಅನ್ವೇಷಿಸುವುದರ ಜೊತೆಗೆ ಭವಿಷ್ಯದಲ್ಲಿ ನಡೆಯುವ ಮಂಗಳಯಾನಗಳಿಗೆ ಮಾರ್ಗಸೂಚಿಯಾಗಿರಲಿದೆ ಎಂದು ನಾಸಾದ ವಿಜ್ಞಾನಿಗಳು ಹೇಳಿದ್ದಾರೆ.

 ಶುಕ್ರವಾರ ನಾಸಾದ ಕಚೇರಿಯಲ್ಲಿ ಮಾರ್ಸ್ 2020 ರೋವರ್ ಅನ್ನು ಅನಾವರಣಗೊಳಿಸಲಾಯಿತು. ಸಾಮಾನ್ಯ ಕಾರಿನ ಗಾತ್ರದಲ್ಲಿರುವ ಮಾರ್ಸ್ 2020 ರೋವರ್ ಆರು ಚಕ್ರಗಳನ್ನು ಹೊಂದಿದೆ. ಕ್ಯಾಲಿಫೋರ್ನಿಯಾದ ಜೆಟ್ ಪ್ರೊಪಲ್ಷನ್ ಲ್ಯಾಬೊರೇಟರಿಯಲ್ಲಿ ಅತ್ಯಂತ ಶುದ್ಧವಾದ ಪ್ರಯೋಗಶಾಲೆಯನ್ನು ಮಂಗಳಯಾನದ ಸಿದ್ಧತೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಂಗಳನನ್ನು ತಲುಪುವವರೆಗೆ ಯಂತ್ರಾಂಶಗಳನ್ನು ಸಾಧ್ಯವಿದ್ದಷ್ಟು ಸ್ವಚ್ಛ ಮತ್ತು ಸುರಕ್ಷಿತವಾಗಿಡಬೇಕಿದೆ ಎಂದು ಮಾರ್ಸ್ 2020ರ ಕಾರ್ಯಾಚರಣೆ ವ್ಯವಸ್ಥಾಪಕ ಡೇವಿಡ್ ಗ್ರುಯೆಲ್ ಹೇಳಿದ್ದಾರೆ.

ಬಿಲಿಯಾಂತರ ವರ್ಷಗಳ ಹಿಂದೆ ಜೀವಿಸಿದ್ದವು ಎಂದು ಹೇಳಲಾಗಿರುವ ಸೂಕ್ಷ್ಮಾಣು ಜೀವಿಗಳ ಕುರುಹನ್ನು ಅನ್ವೇಷಿಸುವ ಹಿನ್ನೆಲೆಯಲ್ಲಿ ಮಂಗಳ ಗ್ರಹದಿಂದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ತರುವ ಉದ್ದೇಶದ ಯೋಜನೆ ಇದಾಗಿದೆ. ಶುಕ್ರವಾರ ಮಾಧ್ಯಮದವರಿಗೆ ಪ್ರಯೋಗಶಾಲೆಗೆ ಪ್ರವೇಶ ಕಲ್ಪಿಸಲಾಗಿದೆ. ಮಾಧ್ಯಮದವರನ್ನು ಕೋಣೆಯೊಳಗೆ ಪ್ರವೇಶಿಸುವ ಮೊದಲು ಸುದೀರ್ಘ ಕ್ರಿಮಿನಾಶಕ ಪ್ರಕ್ರಿಯೆಗೆ ಒಳಡಿಸಲಾಗಿದೆ. ಪ್ರಯೋಗಾಲದ ಹೊರಕೋಣೆಗೆ ಪ್ರವೇಶಿಸುವ ಮೊದಲೇ ಪತ್ರಕರ್ತರ ಶೂಗಳನ್ನು ಸ್ವಯಂಚಾಲಿತ ಯಂತ್ರಗಳಿಂದ ಶುದ್ಧಗೊಳಿಸಲಾಗಿದೆ.

ಬಳಿಕ ‘ಕ್ರಿಮಿನಾಶಕ ನಿಲುವಂಗಿ’ಯನ್ನು ಮತ್ತು ಮುಖಕ್ಕೆ ಮಾಸ್ಕ್ , ಕೈಗಳಿಗೆ ಗ್ಲೌಸ್ (ಕೈಗವಸು) ಧರಿಸುವಂತೆ ಸೂಚಿಸಲಾಗಿದೆ. ಅಂತಿಮವಾಗಿ ಪ್ರಯೋಗಾಲಯ ಪ್ರವೇಶಿಸುವ ಮೊದಲು ಏರ್ ಶವರ್‌ನಡಿ ಸಾಗುವ ಮೂಲಕ ಮೈಮೇಲೆ ಇರಬಹುದಾದ ಅನಗತ್ಯದ ವಸ್ತುಗಳನ್ನು ದೂರಗೊಳಿಸಲಾಗಿದೆ. ಪತ್ರಕರ್ತರ ಮೊಬೈಲ್‌ನ ಕವರನ್ನು ತೆಗೆಯುವಂತೆ ಸೂಚಿಸಲಾಗಿದೆ(ಮೊಬೈಲ್ ಕವರ್‌ನಲ್ಲಿ ಬ್ಯಾಕ್ಟೀರಿಯಾಗಳು ಸುಲಭವಾಗಿ ಉತ್ಪತ್ತಿಯಾಗುತ್ತವೆ). ಬಳಿಕ ಪತ್ರಕರ್ತರ ಬಳಿಯಿದ್ದ ಪೆನ್ ಹಾಗೂ ಇತರ ಸಾಧನಗಳ ಬದಲು ವಿಶೇಷ ಪೆನ್ ಹಾಗೂ ಪೇಪರ್‌ಗಳನ್ನು ಒದಗಿಸಲಾಗಿದೆ. ಜೊತೆಗೆ, ಯಾವುದೇ ರೀತಿಯ ಪ್ರಸಾಧನ ಬಳಸದಂತೆ ಮತ್ತು ವಿಶೇಷ ಮೇಕಪ್ ಮಾಡಿಕೊಳ್ಳದಂತೆ(ಕೂದಲಿಗೆ ಡೈ ಹಾಕುವುದು, ಬಣ್ಣ ಹಾಕುವುದು ಇತ್ಯಾದಿ) ಅತಿಥಿಗಳಿಗೆ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X