ಪೇಜಾವರ ಶ್ರೀ ನಿಧನ; ಶಾಸಕ ವೇದವ್ಯಾಸ ಕಾಮತ್ ಸಂತಾಪ
![ಪೇಜಾವರ ಶ್ರೀ ನಿಧನ; ಶಾಸಕ ವೇದವ್ಯಾಸ ಕಾಮತ್ ಸಂತಾಪ ಪೇಜಾವರ ಶ್ರೀ ನಿಧನ; ಶಾಸಕ ವೇದವ್ಯಾಸ ಕಾಮತ್ ಸಂತಾಪ](https://www.varthabharati.in/sites/default/files/images/articles/2019/12/29/225633-1577614715.jpg)
ಮಂಗಳೂರು : ಶ್ರೀ ಕೃಷ್ಣನಗರಿ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಇಂದು ನಮ್ಮ ನ್ನಗಲಿದ್ದು ಇಡೀ ಕರುನಾಡು ಸ್ತಬ್ಧವಾಗಿದೆ ಎಂದು ಶಾಸಕ ಡಿ ವೇದವ್ಯಾಸ್ ಕಾಮತ್ ಸಂತಾಪ ಸೂಚಿಸಿದ್ದಾರೆ.
ಜನರಿಗಾಗಿ ಅದರಲ್ಲಿಯೂ ಬಡವರಿಗಾಗಿ ಬದುಕಿದವರು ಶ್ರೀಗಳು. ಬಡತನ ನಿರ್ಮೂಲನೆ, ಅನ್ನ ದಾಸೋಹ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟ ದಿವ್ಯ ಚೇತನ. ದೇಶದ ಸಂಸ್ಕೃತಿ ಪ್ರತೀಕರಾಗಿದ್ದರು. ಆಧ್ಯಾತ್ಮದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದವರು ಪೇಜಾವರ ಶ್ರೀಗಳು. ಸಮಾಜಕ್ಕೆ ಶ್ರೀಗಳು ನೀಡಿದ ಕೊಡುಗೆ ಅಪಾರ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವ ಮೊದಲೇ ಶ್ರೀಗಳು ವಿಧಿವಶರಾಗಿದ್ದಾರೆ. ಶ್ರೀಗಳು ನಮ್ಮನಗಲಿದ ಸುದ್ದಿ ಕೇಳಿ ಮನಸಿಗೆ ನೋವಾಯ್ತು. ಎಲ್ಲ ಸಮುದಾಯ ಮತ್ತು ಲಕ್ಷಾಂತರ ಭಾರತೀಯರ ಆರಾಧ್ಯದೈವ ಶ್ರೀಗಳು ನಮ್ಮನ್ನು ಅಗಲಿದರೂ ಅವರ ತತ್ವ ಸಿದ್ಧಾಂತಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಶ್ರೀಗಳ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಎಲ್ಲಾ ಭಕ್ತರಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಡಿ ವೇದವ್ಯಾಸ್ ಕಾಮತ್ ಸಂತಾಪ ಸೂಚಿಸಿದ್ದಾರೆ.