‘ಮೇಲ್ತೆನೆ’ ಸಂಘಟನೆಗೆ ನೂತನ ಪದಾಧಿಕಾರಿಗಳ ಆಯ್ಕೆ
![‘ಮೇಲ್ತೆನೆ’ ಸಂಘಟನೆಗೆ ನೂತನ ಪದಾಧಿಕಾರಿಗಳ ಆಯ್ಕೆ ‘ಮೇಲ್ತೆನೆ’ ಸಂಘಟನೆಗೆ ನೂತನ ಪದಾಧಿಕಾರಿಗಳ ಆಯ್ಕೆ](https://www.varthabharati.in/sites/default/files/images/articles/2019/12/29/225683-1577638712.jpg)
ಇಸ್ಮಾಯೀಲ್ ಮಾಸ್ಟರ್, ಮನ್ಸೂರ್ ಅಹ್ಮದ್
ಮಂಗಳೂರು, ಡಿ. 29: ಬ್ಯಾರಿ ಲೇಖಕರು ಮತ್ತು ಕಲಾವಿದರನ್ನು ಒಳಗೊಂಡ ‘ಮೇಲ್ತೆನೆ’ ಸಂಘಟನೆಯ ವಾರ್ಷಿಕ ಸಭೆಯು ಶನಿವಾರ ಹರೇಕಳ ಗ್ರಾಮದ ರಾಜಗುಡ್ಡ ಬಳಿ ಜರುಗಿತು.
ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಸಾಮಣಿಗೆ ವರದಿ ವಾಚಿಸಿ, ಲೆಕ್ಕಪತ್ರ ಮಂಡಿಸಿದರು. ಸಂಘಟನೆಯ ವತಿಯಿಂದ 2020ರಲ್ಲಿ ನಡೆಸಲಾಗುವ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
2020ನೆ ಸಾಲಿನ ಗೌರವಾಧ್ಯಕ್ಷರಾಗಿ ಆಲಿಕುಂಞಿ ಪಾರೆ, ಅಧ್ಯಕ್ಷರಾಗಿ ಮದನಿ ಪಿಯು ಕಾಲೇಜಿನ ಪ್ರಾಂಶುಪಾಲ ಇಸ್ಮಾಯೀಲ್ ಟಿ., ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರ್ ಅಹ್ಮದ್ ಸಾಮಣಿಗೆ, ಕೋಶಾಧಿಕಾರಿಯಾಗಿ ಮುಹಮ್ಮದ್ ಬಾಷಾ ನಾಟೆಕಲ್, ಉಪಾಧ್ಯಕ್ಷರಾಗಿ ಬಶೀರ್ ಕಲ್ಕಟ್ಟ, ಜೊತೆ ಕಾರ್ಯದರ್ಶಿಯಾಗಿ ಅಶೀರುದ್ದೀನ್ ಮಂಜನಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಶೀರ್ ಅಹ್ಮದ್ ಕಿನ್ಯ, ಇಸ್ಮತ್ ಪಜೀರ್, ಹಂಝ ಮಲಾರ್ ಅವರನ್ನು ಆಯ್ಕೆ ಮಾಡಲಾಯಿತು.
Next Story