Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿಗೆ ಹಲವು ಬಾರಿ ಭೇಟಿ ನೀಡಿದ್ದ...

ಕೊಡಗಿಗೆ ಹಲವು ಬಾರಿ ಭೇಟಿ ನೀಡಿದ್ದ ಪೇಜಾವರ ಶ್ರೀ

ವಾರ್ತಾಭಾರತಿವಾರ್ತಾಭಾರತಿ29 Dec 2019 11:13 PM IST
share
ಕೊಡಗಿಗೆ ಹಲವು ಬಾರಿ ಭೇಟಿ ನೀಡಿದ್ದ ಪೇಜಾವರ ಶ್ರೀ

ಮಡಿಕೇರಿ, ಡಿ.29: ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ನಿಧನಕ್ಕೆ ಕೊಡಗು ಜಿಲ್ಲೆ ಕೂಡ ಕಂಬನಿ ಮಿಡಿದಿದೆ. ಕಾವೇರಿ ತವರು ಕೊಡಗು ಜಿಲ್ಲೆಯೊಂದಿಗೆ ತಮ್ಮ ಅವಿನಾಭಾವ ಸಂಬಂಧ ಹೊಂದಿದ್ದ ಅವರು, ಕೊಡಗು ಜಿಲ್ಲೆ ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂದರ್ಭ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ಕೊಡಗು ಜಿಲ್ಲೆ ಮತ್ತೆ ತನ್ನ ಗತ ವೈಭವಕ್ಕೆ ಮರಳಲಿ ಎಂದು ಉಡುಪಿ ಮಠದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದರು. ಕೊಡಗು ಜಿಲ್ಲೆಯೊಂದಿಗೆ ಪೇಜಾವರ ಶ್ರೀ ವಿಶೇಷ ಪ್ರೀತಿ ಹೊಂದಿದ್ದು, ಹಲವು ಬಾರಿ ಕಾವೇರಿಯ ತವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದರು.

ಕೊಡಗು ನಂಟು: 1971ರಲ್ಲಿ ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಸಮಾವೇಶದಲ್ಲಿ ಕೊಡಗು ಜಿಲ್ಲೆಯ ಹಲವು ಪ್ರಮುಖರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಭೇಟಿಯಾದ ಕೊಡಗು ಜಿಲ್ಲೆಯ ಪ್ರಮುಖರಿಗೆ ಮಡಿಕೇರಿಯಲ್ಲಿ ಒಂದು ಸ್ವಯಂ ಸೇವಾ ಆಸ್ಪತ್ರೆಯನ್ನು ನಿರ್ಮಿಸುವಂತೆ ಪೇಜಾವರ ಶ್ರೀ ಸಲಹೆ ನೀಡಿದ್ದರು. ಅವರ ಸಲಹೆಯಿಂದ ಪ್ರಭಾವಿತರಾದ ಕೆಲವರು 1971-72ರಲ್ಲಿ ಒಂದು ಟ್ರಸ್ಟ್ ರಚಿಸಿ, ಆಸ್ಪತ್ರೆ ಕಟ್ಟಲು ಮುಂದಡಿ ಇಟ್ಟಿದ್ದರು. ಮೊದಲ ಬಾರಿಗೆ 1973ರಲ್ಲಿ ಮಡಿಕೇರಿಗೆ ಬಂದ ಸ್ವಾಮೀಜಿ, ಜಿಲ್ಲೆಯ ದಾನಿಗಳು ಆಸ್ಪತ್ರೆಯ ನಿರ್ಮಾಣಕ್ಕೆ ತಮ್ಮ ಕೈಲಾದ ಸಹಾಯ ನೀಡುವಂತೆ ಕರೆ ನೀಡಿದ್ದರು. 1973ರಲ್ಲಿ ಆಸ್ಪತ್ರೆಯ ಆವರಣದಲ್ಲಿ ಗಣಪತಿ ದೇವಾಲಯಕ್ಕೂ ಶ್ರೀ ಶಿಲಾನ್ಯಾಸ ನೆರವೇರಿಸಿದ್ದರು.

1977, ನವೆಂಬರ್ 18ರಂದು ಮಡಿಕೇರಿಗೆ ಬಂದಿದ್ದ ಸ್ವಾಮೀಜಿ ಬಸ್ ಡಿಪೊ ಹಿಂದಿನ ಪ್ರದೇಶದಲ್ಲಿ ಅಶ್ವಿನಿ ಆಸ್ಪತ್ರೆಯ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ, ಶುಭ ಹಾರೈಸಿದ್ದರು. 1987ರಲ್ಲಿ ಅಶ್ವಿನಿ ಆಸ್ಪತ್ರೆಯ ದಶ ಮಾನೋತ್ಸವ ಸಮಾರಂಭದ ಸಂದರ್ಭ ಆಸ್ಪತ್ರೆಯ ಟ್ರಸ್ಟಿಗಳು ಶ್ರೀಯನ್ನು ಭೇಟಿಯಾದಾಗ ದೃಷ್ಟಿ ದಾನ ಸರ್ವಶ್ರೇಷ್ಠ ದಾನವಾಗಿದ್ದು, ಆಸ್ಪತ್ರೆಯ ದಶಮಾನೋತ್ಸವವನ್ನು ಯಾವ ರೀತಿ ಆಚರಿಸಬೇಕು ಎಂಬುದರ ಕುರಿತು ಸಲಹೆ ನೀಡಿದ್ದರು. ಅವರ ಸಲಹೆಯಂತೆ ಅಶ್ವಿನಿ ಆಸ್ಪತ್ರೆ ಕಳೆದ 31 ವರ್ಷಗಳಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರವನ್ನು ನಡೆಸಿಕೊಂಡು ಬರುತ್ತಿದೆ. ಬಳಿಕ 1988ರಲ್ಲಿ ವಿಶ್ವ ಹಿಂದೂ ಪರಿಷತ್‌ನ ಕಾರ್ಯಕ್ರಮಕ್ಕೂ ಮಡಿಕೇರಿಗೆ ಬಂದಿದ್ದ ಪೇಜಾವರ ಶ್ರೀ, ನಗರದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಆಶೀರ್ವಚನ ನೀಡಿದ್ದರು. 1992ರಲ್ಲಿ ಅಶ್ವಿನಿ ಆಸ್ಪತ್ರೆಯಲ್ಲಿ ಎ.ಬಿ. ಶೆಟ್ಟಿ ದಂತ ವೈದ್ಯಕೀಯ ಘಟಕಕ್ಕೂ ಪೂಜೆ ನರೆವೇರಿಸುವ ಮೂಲಕ ಚಾಲನೆ ನೀಡಿದ್ದರು.

ಪೇಜಾವರ ಶ್ರೀ ಅಗಲಿಕೆ ದುಃಖ ತಂದಿದೆ. ಮಡಿಕೇರಿ ಅಶ್ವಿನಿ ಆಸ್ಪತ್ರೆ ಪೇಜಾವರ ಶ್ರೀ ಸಲಹೆಯಂತೆ 1977ರಲ್ಲಿ ಕಾರ್ಯರಂಭ ಮಾಡಿದೆ. ಅವರು ನೀಡಿದ ಮಾರ್ಗದರ್ಶನದಂತೆ ಉಚಿತ ನೇತ್ರ ಚಿಕಿತ್ಸಾ ಶಿಬಿರವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ನೂರಾರು ಬಡ ರೋಗಿಗಳಿಗೆ ದೃಷ್ಟಿ ದಾನ ನೀಡುವ ಮೂಲಕ ಹೊಸ ಬದುಕು ಕಲ್ಪಿಸಲಾಗಿದೆ ಎನ್ನುತ್ತಾರೆ ಡಾ. ಕುಲಕರ್ಣಿ.

ಪ್ರಕೃತಿ ವಿಕೋಪ: ಭಾಗಮಂಡಲಕ್ಕೆ ಭೇಟಿ
ಕೊಡಗು ಜಿಲ್ಲೆ ಸತತ 2 ವರ್ಷಗಳಿಂದ ಪ್ರಕೃತಿ ವಿಕೋಪಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಕೆಲ ತಿಂಗಳ ಹಿಂದೆ ತಮ್ಮ ಅನಾರೋಗ್ಯದ ನಡುವೆಯೇ ಭಾಗಮಂಡಲ ಮತ್ತು ತಲಕಾವೇರಿಗೆ ಆಗಮಿಸಿದ್ದರು. ಭಾಗಮಂಡಲ ಭಗಂಡ ಸನ್ನಿಧಿ ಮತ್ತು ತಲಕಾವೇರಿಯ ತೀರ್ಥ ಕುಂಡಿಕೆ ಹಾಗೂ ಅಲ್ಲಿರುವ ದೇವಸ್ಥಾನಗಳಲ್ಲಿ ಪೇಜಾವರ ಶ್ರೀ ಪೂಜೆ ಸಲ್ಲಿಸಿದ್ದರು. ಪ್ರಕೃತಿ ವಿಕೋಪದಿಂದ ಅಪಾರ ಹಾನಿಯಾದ ಮಕ್ಕಂದೂರು ವ್ಯಾಪ್ತಿಯ ಕೆಲವು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಿದ್ದರು. ಪ್ರಕೃತಿ ದುರಂತದಿಂದ ನೊಂದ ಕೊಡಗು ಜಿಲ್ಲೆಯ ಜನರು ಮತ್ತೆ ತಮ್ಮ ಬದುಕನ್ನು ಕಟ್ಟಿಕೊಳ್ಳಲಿ ಎಂದು ಪೇಜಾವರ ಶ್ರೀ ಹಾರೈಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X