‘ವಾರ್ತಾಭಾರತಿ’ 17ನೇ ವಾರ್ಷಿಕ ವಿಶೇಷಾಂಕ: ಸಿಎಂ ಯಡಿಯೂರಪ್ಪ ಲೋಕಾರ್ಪಣೆ
ವಾರ್ತಾಭಾರತಿ ಪತ್ರಿಕೆಯ 17ನೇ ವಾರ್ಷಿಕ ವಿಶೇಷಾಂಕವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಬಿಡುಗಡೆ ಮಾಡಿದ್ದಾರೆ. ನಗರದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ‘ವಾರ್ತಾಭಾರತಿ’ ವಿಶೇಷಾಂಕವನ್ನು ಬಿಡುಗಡೆ ಮಾಡಿ, ಓದುಗರ ಪ್ರತಿನಿಧಿಗಳಾದ ಕಾಂತರಾಜ್ ಮತ್ತು ಪ್ರಿಯಾಂಕಾ ಅವರಿಗೆ ಪ್ರತಿಗಳನ್ನು ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಎನ್. ಭೃಂಗೀಶ್, ಬ್ಯಾರೀಸ್ ಗ್ರೂಪ್ನ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ, ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ, ವಾರ್ತಾಭಾರತಿಯ ಬೆಂಗಳೂರು ಬ್ಯೂರೊ ಮುಖ್ಯಸ್ಥ ಬಸವರಾಜು, ಮಾರ್ಕೆಟಿಂಗ್ ಡೈರೆಕ್ಟರ್ ಎಸ್.ಎಂ.ಅಲಿ, ಹಿರಿಯ ವರದಿಗಾರ ಸಿ.ಪ್ರಕಾಶ್ ರಾಮಜೋಗಿಹಳ್ಳಿ ಮತ್ತು ಪತ್ರಿಕೆಯ ಸಿಬ್ಬಂದಿ ಭಾಗವಹಿಸಿದ್ದರು.
Next Story





