Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಯುವಕನ...

ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಯುವಕನ ಕನಸಿಗೆ ಕೊಳ್ಳಿ ಇಟ್ಟ ಪೊಲೀಸರು

ಮಂಗಳೂರು ಗೋಲಿಬಾರ್-ಹಿಂಸಾಚಾರ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ31 Dec 2019 10:22 AM IST
share
ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಯುವಕನ ಕನಸಿಗೆ ಕೊಳ್ಳಿ ಇಟ್ಟ ಪೊಲೀಸರು

ಮಂಗಳೂರು, ಡಿ.30: ಯಾರ ಹಂಗಿಲ್ಲದೆ ಬದುಕಬೇಕು, ಏನಾದರೊಂದು ಸಾಧಿಸಬೇಕು, ಇತರರ ಅಧೀನದಲ್ಲಿ ಕೆಲಸ ಮಾಡುವ ಬದಲು ಸ್ವಾವಲಂಬಿ ಬದುಕು ಕಟ್ಟಬೇಕು... ಹೀಗೆ ಈ ಯುವಕ ಕಟ್ಟಿಕೊಂಡ ಕನಸು ಅಷ್ಟಿಷ್ಟಲ್ಲ. ಅದಕ್ಕಾಗಿ ತನ್ನ ಸ್ನೇಹಿತರ ಜೊತೆಗೂಡಿ ಸ್ವ ಉದ್ಯಮದಲ್ಲಿ ಸಕ್ರಿಯನಾಗಿದ್ದ. ಉದ್ಯಮದ ವೃದ್ಧಿಗಾಗಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತಿರುಗಾಡುತ್ತಿದ್ದ. ಮುಂಜಾನೆ ಮನೆಯಿಂದ ಹೊರಟರೆ ಮರಳಿ ಬರುವಾಗ ರಾತ್ರಿಯಾಗುತ್ತಿತ್ತು. ಏಳೆಂಟು ಗೆಳೆಯರ ಪಾಲುದಾರಿಕೆಯಿಂದ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಈತ ನಗರದ ಫಳ್ನೀರ್‌ನ ಅಥೆನಾ ಆಸ್ಪತ್ರೆಯ ಮುಂಭಾಗದಲ್ಲಿ 'ಕಟ್ಟಾ ಮೀಟಾ' (ಜ್ಯೂಸ್ ಹಬ್) ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಡಿ.23ರಂದು ಈ ಜ್ಯೂಸ್ ಹಬ್ ಉದ್ಘಾಟನೆಗೊಳ್ಳಬೇಕಿತ್ತು. ಡಿ.19ರಂದು ಆ 'ಹಬ್'ಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿ ಇನ್ನೇನೋ ಮರಳಬೇಕೆನ್ನುವಷ್ಟರಲ್ಲಿ ಪೊಲೀಸರು ರಾಕ್ಷಕರಂತೆ ಒಕ್ಕರಿಸಿದರು. ಅಷ್ಟೇ ಅಲ್ಲ, ಸೆ.307 ಸಹಿತ ಹಲವು ಕಲಂನಡಿ ಪ್ರಕರಣ ದಾಖಲಿಸಿಕೊಂಡು ಜೈಲು ಪಾಲಾಗುವಂತೆ ಮಾಡಿದ್ದರು. ತನ್ನದಲ್ಲದ ತಪ್ಪಿಗೆ ಇದೀಗ ನಾಲ್ಕು ಕೋಣೆಯ ಮಧ್ಯೆ ದಿನಗಳೆಯುತ್ತಿದ್ದಾನೆ. ಒಮ್ಮೆ ತನ್ನನ್ನು ಇಲ್ಲಿಂದ ಪಾರು ಮಾಡಿ ಎಂದು ಕುಟುಂಬಸ್ಥರಲ್ಲಿ ಬೇಡಿಕೊಳ್ಳುತ್ತಿದ್ದಾನೆ.

ಇದು ಡಿ.19ರಂದು ಮಂಗಳೂರಿನಲ್ಲಿ ನಡೆದ ಗೋಲಿಬಾರ್-ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ ತೊಕ್ಕೊಟ್ಟಿನ ತಂಝೀಲ್ (26) ಎಂಬ ಯುವಕನ ಕರುಣಾಜನಕ ಕಥೆ.

'ತಂಝೀಲ್ ಪ್ರತಿಭಟನೆಯಲ್ಲಿ ಪಾಲ್ಗೊಂಡವನಲ್ಲ. ಈವರೆಗೆ ಯಾವುದೇ ಗಲಭೆೆೆಯಲ್ಲೂ ತೊಡಗಿಸಿಕೊಂಡವನಲ್ಲ. ದ್ವಿತೀಯ ಪಿಯುಸಿ ಪೂರೈಸಿದ ಬಳಿಕ ತಂಝೀಲ್ ಸ್ವಂತ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ. ಹಾಗೇ ಸುರತ್ಕಲ್ ಮತ್ತಿತರ ಕಡೆ ಸ್ನೇಹಿತರ ಜೊತೆಗೂಡಿ ಪಾಲುದಾರಿಕೆಯಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿ ಇತ್ಯಾದಿಗಳನ್ನು ತೆರೆದಿದ್ದ. ನಗರದ ಅಥೆನಾ ಆಸ್ಪತ್ರೆಯ ಮುಂದೆ ಜ್ಯೂಸ್ ಅಂಗಡಿ ತೆರೆಯಲು ಸಿದ್ಧತೆ ನಡೆಸಿದ್ದ. ಅದಕ್ಕೆ ಡಿ.19ರಂದು ಅಗತ್ಯವಿರುವ ಸಾಮಗ್ರಿ ಗಳನ್ನು ಖರೀದಿಸಲು ಗೆಳೆಯನ ಕಾರಿನಲ್ಲಿ ತೆರಳಿ ಸ್ಟೇಟ್‌ಬ್ಯಾಂಕ್ ಬಳಿ ಪಾರ್ಕ್ ಮಾಡಿದ್ದರು. ಸೆಂಟ್ರಲ್ ಮಾರ್ಕೆಟ್ ಬಳಿ ಖರೀದಿಸಿದ ಸಾಮಾಗ್ರಿಗಳನ್ನು ರಿಕ್ಷಾದಲ್ಲಿ ಜ್ಯೂಸ್ ಅಂಗಡಿಯತ್ತ ಸಾಗಿಸಿ ಮರಳಿ ಸ್ಟೇಟ್‌ಬ್ಯಾಂಕ್ ಬಳಿ ನಡೆದುಕೊಂಡು ಬರುತ್ತಿದ್ದಾಗ ಹಿಂಸಾಚಾರದ ಸುದ್ದಿ ಸಿಕ್ಕಿದೆ. ಸ್ಟೇಟ್‌ಬ್ಯಾಂಕ್ ಬಳಿ ನಿಲ್ಲಿಸಲಾಗಿದ್ದ ಕಾರಿನತ್ತ ವೇಗವಾಗಿ ನಡೆದುಕೊಂಡು ಹೋಗುತ್ತಿದ್ದಾಗ ಮೊದಲು ಒಬ್ಬ ಪೊಲೀಸ್ ವಿಚಾರಿಸಿದ್ದಾರೆ. ಆಯ್ತು... ಜಾಗ್ರತೆ ಎಂದು ಆ ಪೊಲೀಸ್ ಹೇಳಿದ್ದಾರೆ. ಬಳಿಕ ಇನ್ನೊಬ್ಬ ಪೊಲೀಸ್ ವಿಚಾರಿಸಿ, ಪರಿಸ್ಥಿತಿ ಚೆನ್ನಾಗಿಲ್ಲ, ಈ ರಸ್ತೆಯಾಗಿ ಹೋಗು ಎಂದಿದ್ದಾರೆ. ಆ ಮಾತು ಕೇಳಿದ್ದ ತಂಝೀಲ್ ಮತ್ತಾತನ ಸ್ನೇಹಿತ ಪೊಲೀಸರು ಹೇಳಿದ ರಸ್ತೆಯಲ್ಲಿ ಸಾಗಿದ್ದರು. ಗುಂಪು ಸೇರಿದ್ದ ಪೊಲೀಸರಿಗೆ ಏನಾಗಿತ್ತೋ ಏನೋ... ಯದ್ವಾತದ್ವಾ ಹಲ್ಲೆ ನಡೆಸತೊಡಗಿದರು. ತಂಝೀಲ್ ಪೊಲೀಸರ ಕೈಗೆ ಸಿಕ್ಕಿಬಿದ್ದ. ಹಾಗೇ ಸಂಜೆ 7ರವರೆಗೆ ಠಾಣೆಯಲ್ಲಿ ಕೂಡಿ ಹಾಕಿದ ಪೊಲೀಸರು ಬಳಿಕ ಆತನ ಮೊಬೈಲ್, ಪರ್ಸ್ ಕಿತ್ತುಕೊಂಡು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಜೈಲಿಗೆ ಹಾಕಿದರು.

ಮಿತಭಾಷಿಯಾಗಿದ್ದ ತಂಝೀಲ್ ಡಿ.19ರಂದು ಹಂಪನಕಟ್ಟೆ, ಸೆಂಟ್ರಲ್ ಮಾರ್ಕೆಟ್‌ಗೆ ಹೋದ ಬಳಿಕ ಹುಬ್ಬಳ್ಳಿಗೆ ತೆರಳಲು ನಿರ್ಧರಿಸಿದ್ದ. ಆದರೆ ಪೊಲೀಸರು ಅದಕ್ಕೆ ಅವಕಾಶ ಕೊಡಲೇ ಇಲ್ಲ. ಅವ ಅಂದು ಸಾಮಗಿಗಳನ್ನು ಖರೀದಿಸಿದ ಬಿಲ್ ಕೂಡಾ ಆತನ ಬಳಿ ಇದೆ. ಪೊಲೀಸರು ಸರಿಯಾಗಿ ವಿಚಾರಿಸಿದ್ದರೆ ಅವನನ್ನು ಆವತ್ತೇ ಬಿಡುಗಡೆ ಮಾಡಬಹುದಿತ್ತು ಎಂದು ತಂಝೀಲ್‌ನ ಅಣ್ಣ ನೌಷಾದ್ 'ವಾರ್ತಾಭಾರತಿ'ಯ ಜೊತೆ ನೋವು ತೋಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X