Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂಬೇಡ್ಕರ್ ಅಭಿವೃದ್ಧಿ ನಿಗಮ ಅನುದಾನ...

ಅಂಬೇಡ್ಕರ್ ಅಭಿವೃದ್ಧಿ ನಿಗಮ ಅನುದಾನ ದುರ್ಬಳಕೆ ಆರೋಪ: ವ್ಯವಸ್ಥಾಪಕರಿಬ್ಬರು ಸೇರಿ 2 ಅಧಿಕಾರಿಗಳ ಅಮಾನತು

ವಾರ್ತಾಭಾರತಿವಾರ್ತಾಭಾರತಿ31 Dec 2019 9:38 PM IST
share
ಅಂಬೇಡ್ಕರ್ ಅಭಿವೃದ್ಧಿ ನಿಗಮ ಅನುದಾನ ದುರ್ಬಳಕೆ ಆರೋಪ: ವ್ಯವಸ್ಥಾಪಕರಿಬ್ಬರು ಸೇರಿ 2 ಅಧಿಕಾರಿಗಳ ಅಮಾನತು

ಬೆಂಗಳೂರು, ಡಿ. 31: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಅನುದಾನ ದುರ್ಬಳಕೆ ಸಂಬಂಧ ಇಬ್ಬರು ವ್ಯವಸ್ಥಾಪಕರೂ ಸೇರಿದಂತೆ ಒಟ್ಟು ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

2016-17 ಹಾಗೂ 2017-18ನೆ ಸಾಲಿನಲ್ಲಿ ಸ್ವಯಂ ಉದ್ಯೋಗ ಯೋಜನೆ ಮತ್ತು ಕೈಗಾರಿಕಾ ಸೇವಾ ವ್ಯವಹಾರ ಯೋಜನೆಯಡಿ ಪರಿಶಿಷ್ಟ ಜಾತಿ(ಎಸ್ಸಿ) 115 ಫಲಾನುಭವಿಗಳಿಗೆ ಬಿಡುಗಡೆ ಮಾಡಲಾದ 6.30ಕೋಟಿ ರೂ.ಸಹಾಯಧನ ಫಲಾನುಭವಿಗಳ ಬದಲು ಮಧ್ಯವರ್ತಿಗಳಿಗೆ ವರ್ಗಾವಣೆ ಮಾಡಿದ್ದರು.ಆ ಮೂಲಕ ಸರಕಾರದ ಅನುದಾನ ದುರುಪಯೋಗ ಆರೋಪದ ಮೇರೆಗೆ ಅಂದಿನ ಜಿಲ್ಲಾ ವ್ಯವಸ್ಥಾಪಕ ಹಾಗೂ ಇಂದಿನ ಉಪ ಪ್ರಧಾನ ವ್ಯವಸ್ಥಾಪಕ ಎಚ್. ಆರ್.ಅರುಣ್‌ಕುಮಾರ್ ಮತ್ತು ಅಂದಿನ ಜಿಲ್ಲಾ ವ್ಯವಸ್ಥಾಪಕ ಹಾಗೂ ಇಂದಿನ ಉಪ ಪ್ರಧಾನ ವ್ಯವಸ್ಥಾಪಕ ಜೆ.ಜಿ.ಪದ್ಮನಾಭರನ್ನು ಅಮಾನತು ಮಾಡಲಾಗಿದೆ.

ಅಭಿವೃದ್ಧಿ ನಿಗಮದ ಕಚೇರಿ ಅಧೀಕ್ಷಕಿ ಎಂ.ಸಿ.ಇಂದಿರಮ್ಮ, ತಾಲೂಕು ಅಭಿವೃದ್ಧಿ ಅಧಿಕಾರಿಗಳಾದ ಪಿ.ಮಲ್ಲೇಶ್ ಮತ್ತು ಎನ್.ಮುಕುಂದ, ದ್ವಿತೀಯ ದರ್ಜೆ ಸಹಾಯಕರಾದ ಕಲ್ಪನಾ ಮತ್ತು ಪುಟ್ಟೀರಯ್ಯ, ಅಂದಿನ ಪ್ರಭಾರ ತಾಲೂಕು ಅಭಿವೃದ್ಧಿ ಅಧಿಕಾರಿ ಎಂ.ಲಿಂಗಣ್ಣ ಅವರನ್ನು ಅಮಾನತುಗೊಳಿಸಲಾಗಿದೆ. ಜೊತೆಗೆ, ನಿಗಮದಲ್ಲಿ ಪ್ರಥಮ ದರ್ಜೆ ಸಹಾಯಕರ ಹುದ್ದೆಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದ ಹೇಮಂತ್‌ ಕುಮಾರ್‌ನನ್ನೂ ಸೇವೆಯಿಂದ ವಜಾ ಮಾಡಲಾಗಿದೆ.

ಅಲ್ಲದೆ, ಬೆಂಗಳೂರಿನ ಕೆನರಾ ಬ್ಯಾಂಕ್‌ನ ಕಲ್ಕರೆ ಶಾಖೆ ಅಂದಿನ ವ್ಯವಸ್ಥಾಪಕರು ಹಾಗೂ ಇತರೆ ಬ್ಯಾಂಕ್ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಮಧ್ಯವರ್ತಿಗಳಾದ ಗೋವಿಂದರಾಜು, ಮುರುಳಿ, ಸೈಯದ್ ಸಾದಿಕ್, ಜಿಮರನ್ ಪಾಷಾ, ಅಮರ್, ಸತ್ಯನಾರಾಯಣ, ಜೆ. ಶ್ರೀಧರ್, ಕೆ.ಮಂಜುನಾಥ್, ಭುವನೇಶ್, ಕೋದಂಡರಾಮ ಹಾಗೂ ಜೀವರಾಜ್ ಒಟ್ಟಾರೆ 6.30 ಕೋಟಿ ರೂ.ದುರುಪಯೋಗ ಮಾಡಿರುವುದು ಸರಕಾರವು ಕೈಗೊಂಡ ತನಿಖೆಯಲ್ಲಿ ಕಂಡು ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಗಡಿ ರಸ್ತೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಈ ಎಲ್ಲ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 408, 419, 420 ಓದಲಾದ 149 ಪ್ರಕಾರ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನೂ ಹೂಡಲಾಗಿದೆ ಎಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಬೆಂಗಳೂರು ನಗರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X