ಪ್ರವಾಸ ತೆರಳುತ್ತಿದ್ದ ಬಸ್ ಮರಕ್ಕೆ ಢಿಕ್ಕಿ: ಹಲವು ವಿದ್ಯಾರ್ಥಿಗಳಿಗೆ ಗಾಯ
ಕಲಬುರಗಿ, ಜ.2: ಖಾಸಗಿ ಬಸ್ಸೊಂದರಲ್ಲಿ ಶಾಲಾ ಮಕ್ಕಳು ಪ್ರವಾಸಕ್ಕೆಂದು ಹೊರಟಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಹೊಡೆದ ಪರಿಣಾಮ ಹಲವು ಮಕ್ಕಳು ಗಾಯಗೊಂಡಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಗ್ಗಿನ ಜಾವ ನಡೆದಿದೆ.
ನಗರ ಪ್ರದೇಶದಲ್ಲಿರುವ ವೆಂಕಟಗಿರಿ ಹೊಟೇಲ್ ಬಳಿ ಈ ಘಟನೆ ನಡೆದಿದ್ದು, ನಗರದ ಅಯ್ಯಪ್ಪ ಶಾಲೆಗೆ ಸೇರಿದ ಬಸ್ ಇದಾಗಿದೆ ಎಂದು ತಿಳಿದುಬಂದಿದೆ. ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆ ಬಗ್ಗೆ ಮಾಹಿತಿ ಪಡೆದ ಕಲಬುರಗಿ ಸಂಚಾರಿ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story