Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಮಾಣಪತ್ರಗಳನ್ನು ತೋರಿಸಲು ಸಾಧ್ಯವಾಗದ...

ಪ್ರಮಾಣಪತ್ರಗಳನ್ನು ತೋರಿಸಲು ಸಾಧ್ಯವಾಗದ ಪ್ರಧಾನಿ, ಸಚಿವರಿರುವ ಸರಕಾರ ಜನರ ಅರ್ಹತೆ ಕೇಳುತ್ತಿದೆ

ಯೆಚೂರಿ ಸರಣಿ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ2 Jan 2020 3:32 PM IST
share
ಪ್ರಮಾಣಪತ್ರಗಳನ್ನು ತೋರಿಸಲು ಸಾಧ್ಯವಾಗದ ಪ್ರಧಾನಿ, ಸಚಿವರಿರುವ ಸರಕಾರ ಜನರ ಅರ್ಹತೆ ಕೇಳುತ್ತಿದೆ

ಹೊಸದಿಲ್ಲಿ: ನ್ಯಾಷನಲ್ ಪಾಪ್ಯುಲೇಶನ್ ರಿಜಿಸ್ಟರ್ ಅಥವಾ ಎನ್‍ ಪಿಆರ್‍ ಗಾಗಿ 21 ವಿಚಾರಗಳ ಕುರಿತು ಮಾಹಿತಿ ಕೇಳುವ ಪ್ರಾಯೋಗಿಕ ಫಾರ್ಮ್ ಅನ್ನು ಕೇಂದ್ರ ಸರಕಾರ ಅಂತಿಮಗೊಳಿಸಿದೆ ಎಂಬ ವರದಿಯೊಂದಕ್ಕೆ ಗೃಹ ಸಚಿವಾಲಯ ನೀಡಿರುವ ಸ್ಪಷ್ಟೀಕರಣಕ್ಕೆ ಪ್ರತಿಕ್ರಿಯೆಯಾಗಿ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಟ್ವೀಟ್ ಮಾಡಿದ್ದಾರೆ.

"ಆರ್‍ ಟಿಐಯನ್ನು ಮುಚ್ಚಿ ಬಿಟ್ಟಿರುವ, ಸೊನ್ನೆ ಪಾರದರ್ಶಕತೆಯಿರುವ ಇಲೆಕ್ಟೋರಲ್ ಬಾಂಡ್‍ ಗಳನ್ನು ಉತ್ತೇಜಿಸುವ ಸರಕಾರ,  ತಮ್ಮ ಪದವಿ ಪ್ರಮಾಣಪತ್ರಗಳನ್ನು ತೋರಿಸಲು ಸಾಧ್ಯವಾಗದ ಪ್ರಧಾನಿ ಹಾಗೂ ಸಚಿವರುಗಳು- ಈಗ  ನಾಗರಿಕರಿಗೆ ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಹೇಳುತ್ತಿದೆ? ಅವರು ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ" ಎಂದು ಬರೆದಿದ್ದಾರೆ.

ಗೃಹ ಸಚಿವಾಲಯವು ಪತ್ರಿಕೆಯ ವರದಿಗೆ ನೀಡಿದ ಸ್ಪಷ್ಟೀಕರಣದಲ್ಲಿ ಎನ್‍ ಪಿಆರ್ ಗಣತಿದಾರರಿಗೆ ದಾಖಲೆಪತ್ರಗಳನ್ನು ನೀಡಬೇಕಾಗಿಲ್ಲ ಎಂಬ ಸರಕಾರದ ನಿಲುವನ್ನು ವರದಿ `ನಿರ್ಲಕ್ಷ್ಯಿಸಿದೆ' ಎಂದು ಹೇಳಿದರೆ ವರದಿಯನ್ನು ತಯಾರಿಸಿದ್ದ ಪತ್ರಕರ್ತರು ತಮ್ಮ ವರದಿಯಲ್ಲಿ ಈ ವಿಚಾರ ಎತ್ತಲಾಗಿಲ್ಲ ಎಂದಿದ್ದಾರೆ.

``ಎನ್‍ ಪಿಆರ್ ಎನ್‍ಆರ್‍ಸಿ ಗೆ ದಾರಿ ಮಾಡಿಕೊಡುತ್ತಿದೆಯೆಂದು ಸ್ಪಷ್ಟವಾಗಿ ಹೇಳುವ ಪೌರತ್ವ ನಿಯಮಗಳು 2003 ಇದನ್ನು ರದ್ದು ಪಡಿಸಲಾಗಿದೆ ಎಂದು ಗೃಹ ಸಚಿವಾಲಯ ಹೇಳುತ್ತಿದೆಯೇ?'' ಎಂದು ಯೆಚೂರಿ ಪ್ರಶ್ನಿಸಿದ್ದಾರೆ.

"ಹಾಗಲ್ಲದೇ ಇದ್ದರೆ  ಏಕೆ ಅರ್ಧಸತ್ಯಗಳನ್ನು ಹಾಗೂ ತಪ್ಪುದಾರಿಗೆಳೆಯುವ ಸ್ಪಷೀಕರಣಗಳನ್ನು ನೀಡಬೇಕು?, ಎನ್‍ ಪಿಆರ್ ಎನ್‍ಆರ್‍ ಸಿಗೆ ಮೂಲ ದಾಖಲೆ ಆಗಿದೆ. ನಾಗರಿಕರಿಗೆ ಕಿರುಕುಳ ಹಾಗೂ ಬೆದರಿಕೆ ನೀಡುವ ಪ್ರಕ್ರಿಯೆ'' ಎಂದು ಟ್ವೀಟ್ ಮಾಡಿದ ಯೆಚೂರಿ, ಸರಕಾರ ಎನ್‍ ಪಿಆರ್ ಹಾಗೂ ಎನ್‍ಆರ್‍ ಸಿ ಎರಡನ್ನೂ ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ.

A govt — that has shut down RTI, promotes Electoral bonds, has zero transparency, PM and Ministers cannot show their degrees — is now asking Citizens to prove their credentials? They will not get away with this. #CAA_NPR_NRC_Protests

— Sitaram Yechury (@SitaramYechury) January 2, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X