Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮಗಳ ನಡುವೆ ಗೋಡೆ ಕಟ್ಟುವವರು ದೇಶ...

ಧರ್ಮಗಳ ನಡುವೆ ಗೋಡೆ ಕಟ್ಟುವವರು ದೇಶ ದ್ರೋಹಿಗಳು, ಸೇತುವೆ ಕಟ್ಟುವವರು ದೇಶಪ್ರೇಮಿಗಳು: ನಿಕೇತ್ ರಾಜ್ ಮೌರ್ಯ

ಸುಳ್ಯದಲ್ಲಿ ಎನ್.ಆರ್.ಸಿ ಮತ್ತು ಸಿಎಎ ವಿರುದ್ದ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Jan 2020 8:01 PM IST
share
ಧರ್ಮಗಳ ನಡುವೆ ಗೋಡೆ ಕಟ್ಟುವವರು ದೇಶ ದ್ರೋಹಿಗಳು, ಸೇತುವೆ ಕಟ್ಟುವವರು ದೇಶಪ್ರೇಮಿಗಳು: ನಿಕೇತ್ ರಾಜ್ ಮೌರ್ಯ

ಸುಳ್ಯ,ಜ.2:ಇಡೀ ಜಗತ್ತಿನಲ್ಲೇ ನಾಯಕನಿಲ್ಲದೆ, ವ್ಯಕ್ತಿ ಮುಖವಿಲ್ಲದೆ ರಾಷ್ಟ್ರ ಧ್ವಜದ ಅಡಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸಂವಿಧಾನದ ಪಥದಲ್ಲೇ ಇಂತಹ ಪ್ರತಿಭಟನೆ ನಡೆಸಿ ಫಲ ಪಡೆಯೋಣ ಎಂದು ಖ್ಯಾತ ವಾಗ್ಮಿ ನಿಕೇತ್ ರಾಜ್ ಮೌರ್ಯ ಹೇಳಿದರು.

ಮುಸ್ಲಿಂ ಹಿತರಕ್ಷಣಾ ವೇದಿಕೆ ಸುಳ್ಯ ತಾಲೂಕು ನೇತೃತ್ವದಲ್ಲಿ ಕೇಂದ್ರದ ಬಿಜೆಪಿ ಸರಕಾರ ಜಾರಿಗೆ ತರಲು ಹೊರಟಿರುವ ಎನ್.ಆರ್.ಸಿ ಮತ್ತು ಸಿಎಎ ವಿರುದ್ದ ಸುಳ್ಯದ ಗಾಂಧಿನಗರದಲ್ಲಿ ಗುರುವಾರ ನಡೆದ ಬೃಹತ್ ಪ್ರತಿಭಟನೆ ಮತ್ತು ಜನಂದೋಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಧರ್ಮಗಳ ನಡುವೆ ಗೋಡೆ ಕಟ್ಟುವವರು ದೇಶ ದ್ರೋಹಿಗಳು, ಸೇತುವೆ ಕಟ್ಟುವವರು ದೇಶಪ್ರೇಮಿಗಳು. ಸಮಾಜದಲ್ಲಿ ವಿಷ ಬೀಜ ಬಿತ್ತುವವರ ಷಡ್ಯಂತ್ರ ಅರಿಯಬೇಕು ಎಂದು ಹೇಳಿದರು.

ಬೆಂಗಳೂರಿನ ಸಾಮಾಜಿಕ ಹೋರಾಟಗಾರ, ದಲಿತ ಮುಖಂಡ ಭಾಸ್ಕರ್ ಪ್ರಸಾದ್ ಮಾತನಾಡಿ, ನಾಗರಿಕರು ನೀಡಿದ ವಿಡೀಯೋ ಮತ್ತು ಮಾಧ್ಯಮಗಳು ನೀಡಿದ ತೀರ್ಪಿನ ಆಧಾರದಲ್ಲಿ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪೊಲೀಸ್ ಇಲಾಖೆಯ ಪ್ರವೃತ್ತಿ ಕ್ರೌರ್ಯತನದ್ದು. ಈ ಎರಡೂ ಕಾಯಿದೆಗಳು ಮುಠಾಳತನದ್ದು. ದೇಶದ್ರೋಹಿಗಳು ಮಾತ್ರ ಇಂತಹ ಕಾನೂನು ತರಲು ಸಾಧ್ಯ ಎಂದು ಹೇಳಿದರು. 

ಮುಸ್ಲಿಂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಜಿ ಇಸಾಕ್ ಸಾಹೇಬ್ ಪಾಜಪಳ್ಳ ಅಧ್ಯಕ್ಷತೆಯನ್ನು ವಹಿಸಿದರು. ದುಗಲಡ್ಕ ಮಸೀದಿ ಧರ್ಮಗುರು ಝೈನುಲ್ ಅಬೀದಿನ್ ತಂಙಳ್ ದುವಾಃ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ವೆಂಕಪ್ಪ ಗೌಡ, ಭರತ್ ಮುಂಡೋಡಿ, ಎಸ್‍ಡಿಪಿಐ ಜಿಲ್ಲಾ ಮುಖಂಡ ಇಕ್ಬಾಲ್ ಬೆಳ್ಳಾರೆ, ಕಾರ್ಮಿಕ ಸಂಘಟನೆ ಮುಖಂಡರಾದ ಕೆ.ಪಿ.ಜಾನಿ, ಜಿ.ಪಂ.ಮಾಜಿ ಸದಸ್ಯ ಧನಂಜಯ ಅಡ್ಪಂಗಾಯ, ಆಮ್ ಆದ್ಮಿ ಪಕ್ಷದ ಮುಖಂಡ ಅಶೋಕ್ ಎಡಮಲೆ, ಬೆಳ್ಳಾರೆ ಮಸೀದಿ ಧರ್ಮಗುರು ಯೂನುಸ್ ಸಖಾಫಿ, ಗಾಂಧಿನಗರ ಮಸೀದಿ ಧರ್ಮಗುರು ಅಶ್ರಫ್ ಶಾಮಿಲಾ ಸಖಾಫಿ, ನೂರುದ್ದೀನ್ ಸಾಲ್ಮರ ಮೊದಲಾದವರು ಮಾತನಾಡಿದರು.

ವೇದಿಕೆಯಲ್ಲಿ ಜೆಡಿಎಸ್ ಮುಖಂಡ ಎಂ.ಬಿ.ಸದಾಶಿವ, ಸಿಪಿಎಂ ಮುಖಂಡ ರಾಬರ್ಟ್ ಡಿಸೋಜ,, ಕೆಪಿಸಿಸಿ ಸದಸ್ಯ ಡಾ.ರಘು, ನ್ಯಾಯವಾದಿ ಕುಂಞಿಪಳ್ಳಿ, ಸಿದ್ದಿಕ್ ಕೊಕ್ಕೋ, ಮಹಮ್ಮದ್ ಕುಂಞಿ ಗೂನಡ್ಕ, ಜಿ.ಕೆ.ಹಮೀದ್, ಮಜೀದ್ ಅಡ್ಕಾರ್, ಅಝೀಝ್ ಬುಶ್ರಾ,  ಇಕ್ಬಾಲ್ ಎಲಿಮಲೆ, ಮಹಮ್ಮದ್ ಫವಾಝ್, ಅಬ್ದುಲ್ ಕಲಾಂ, ಹರಿಪ್ರಸಾದ್ ಕೆ.ಕೆ, ನಗರ ಪಂಚಾಯಿತಿ ಸದಸ್ಯರಾದ ಶರೀಫ್ ಕಂಠಿ, ಕೆ.ಎಸ್.ಉಮ್ಮರ್, ರಿಯಾಝ್ ಕಟ್ಟೆಕ್ಕಾರ್, ಕೆ.ಎಂ. ಮುಸ್ತಫ, ಅದಂಕುಂಞಿ ಕಮ್ಮಾಡಿ, ತಾ.ಪಂ. ಸದಸ್ಯ ಅಬ್ದುಲ್ ಗಫೂರ್ ಮೊದಲಾದವರು ಉಪಸ್ಥಿತರಿದ್ದರು.

ತಾಲೂಕಿನಾದ್ಯಂತ ಅಂಗಡಿ-ಮುಂಗಟ್ಟು ಬಂದ್: ಮುಸ್ಲಿಂ ಹಿತರಕ್ಷಣಾ ವೇದಿಕೆ ಸಂಘಟಕರು ಪ್ರತಿಭಟನೆಗೆ ಕರೆಕೊಟ್ಟು, ಮುಸ್ಲಿಂ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಕರೆ ನೀಡಿದ ಹಿನ್ನಲೆಯಲ್ಲಿ ಸುಳ್ಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಅಂಗಡಿಗಳನ್ನು  ಬೆಳಗ್ಗಿನಿಂದಲೇ ಬಂದ್ ಮಾಡಿ, ಸಂಜೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X