Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಡಿ ವಿಚಾರದಲ್ಲಿ ಉದ್ಧವ್ ಉದ್ಧಟತನದ...

ಗಡಿ ವಿಚಾರದಲ್ಲಿ ಉದ್ಧವ್ ಉದ್ಧಟತನದ ವರ್ತನೆ: ನಾಡೋಜ ಡಾ.ಎಂ. ಚಿದಾನಂದಮೂರ್ತಿ

ವಾರ್ತಾಭಾರತಿವಾರ್ತಾಭಾರತಿ2 Jan 2020 8:55 PM IST
share
ಗಡಿ ವಿಚಾರದಲ್ಲಿ ಉದ್ಧವ್ ಉದ್ಧಟತನದ ವರ್ತನೆ: ನಾಡೋಜ ಡಾ.ಎಂ. ಚಿದಾನಂದಮೂರ್ತಿ

ಬೆಂಗಳೂರು, ಜ.2: ಮಹಾರಾಷ್ಟ್ರದಲ್ಲಿ ಸದ್ಯ ಗಡಿ ವಿಚಾರ ಸಂಪುಟ ವಿಸ್ತರಣೆಗಿಂತ ಹೆಚ್ಚು ಸದ್ದು ಮಾಡುತ್ತಿದೆ. ಸಿಎಂ ಉದ್ಧವ್ ಠಾಕ್ರೆ ಅವರು, ಈ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿ ಇದೆ ಎನ್ನುವುದನ್ನೂ ಮರೆತು ಉದ್ಧಟತನದಿಂದ ವರ್ತಿಸುತ್ತಿದ್ದಾರೆ ಎಂದು ನಾಡೋಜ ಡಾ. ಎಂ. ಚಿದಾನಂದಮೂರ್ತಿ ಕಿಡಿಕಾರಿದ್ದಾರೆ.

ಗುರುವಾರ ಪ್ರೆಸ್‌ಕ್ಲಬ್‌ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಗಡಿಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಕೆ ಮಾಡಿ ಗಡಿ ಉಸ್ತುವಾರಿಗೆ ಇಬ್ಬರು ಸಚಿವರನ್ನು ನೇಮಕ ಮಾಡಿದ್ದಾರೆ. ಈ ಮೂಲಕ ಸುಪ್ರೀಂ ಕೋರ್ಟ್‌ನ ಪ್ರಕರಣಕ್ಕೆ ಚುರುಕು ನೀಡುವುದರ ಜೊತೆಗೆ, ಭಾಷಾ ಅಸ್ಮಿತೆಯ ವಿಚಾರವಾಗಿ ಮರಾಠಿಗರನ್ನು ಹಿಡಿದಿಡುವ ಪ್ರಯತ್ನ ಆರಂಭಿಸಿದ್ದಾರೆ ಎಂದರು.

ಸಿಎಂ ಉದ್ದವ್ ಠಾಕ್ರೆ ಗಡಿ ವಿಚಾರದಲ್ಲಿ ತುಂಬ ಆಕ್ರಮಣಕಾರಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಇದು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ. ಈ ವಿಚಾರದಲ್ಲಿ ಉದ್ಘಟತನದ ಹೇಳಿಕೆಯನ್ನು ಉದ್ದವ್ ಠಾಕ್ರೆ ನೀಡದೆ ಗಡಿ ಭಾಗದಲ್ಲಿ ಶಾಂತಿ ಸಾಮರಸ್ಯದ ವಾತಾವರಣ ನಿರ್ಮಿಸಲಿ ಎಂದು ತಿಳಿಸಿದರು.

ಕನ್ನಡಿಗರು ಶಾಂತಿ ಪ್ರಿಯರು. ಆದರೆ ಸಮಯ ಬಂದರೆ ಕ್ರಾಂತಿ ಮಾಡಲು ಸಿದ್ಧ. ಈಗಾಗಲೇ ಕರ್ನಾಟಕ ಸರಕಾರವು ಬೆಳಗಾವಿ ಬಗೆಗಿನ ತನ್ನ ನಿಲುವನ್ನು ಸ್ಪಷ್ಟಪಡಿಸಿ ಅದು ಎಂದೆಂದೂ ಕರ್ನಾಟಕದಲ್ಲೇ ಇರುತ್ತದೆ ಎಂಬ ದೃಢ ನಿರ್ಧಾರವನ್ನು ಘೋಷಿಸುವುದು ಅತ್ಯಂತ ಸಮಂಜಸವಾಗಿದೆ ಎಂದು ತಿಳಿಸಿದರು.

ಈಗಿನ ಮಹಾರಾಷ್ಟ್ರ ಎಂಬುದು ಸಾವಿರ ವರ್ಷಗಳ ಹಿಂದೆ ಕನ್ನಡ ಮಾತನಾಡುವ ಪ್ರದೇಶವಾಗಿತ್ತು. ಬಾಲ ಗಂಗಾಧರ ತಿಲಕರು ಸ್ವಾತಂತ್ರಪೂರ್ವದಲ್ಲಿ ಬೆಳಗಾವಿ ಜಿಲ್ಲೆಯ ಗುರಲ್ ಹೊಸೂರಿನಲ್ಲಿ ಮಾತನಾಡಿ ಮರಾಠಿಗರ, ಕನ್ನಡಿಗರ ರಕ್ತ ಭಾಷೆ ಒಂದೇ ಎಂದು ಘೋಷಿಸಿದ್ದು, ಇಂದಿಗೂ ಉಲ್ಲೇಖವಿದೆ. ಬ್ರಿಟಿಷರ ಕಾಲದ ಮುಂಬೈ ಸರಕಾರವು ಪ್ರಕಟಿಸಿರುವ ಶಾಲಾ ಪಠ್ಯ ಪುಸ್ತಕದಲ್ಲಿ ಕರ್ನಾಟಕ ನಕಾಶವೂ ಎಂಬ ನಕ್ಷೆಯಿದ್ದು ಅದರಲ್ಲಿ ಬೆಳಗಾವಿಯೂ ಕರ್ನಾಟಕದ ಭಾಗವಾಗಿದೆ ಎಂದರು.

ಭಾರತಕ್ಕೆ ಸ್ವಾತಂತ್ರ ಬಂದ ನಂತರ ಭಾರತವನ್ನು ಭಾಷಾವಾರು ಪ್ರಾಂತ್ಯಗಳನ್ನಾಗಿ ವಿಂಗಡಿಸಲು ನೇಮಕವಾದ ಫಜಲ್ ಅಲಿ ನಿಯೋಗವು 1956ರಲ್ಲಿ ಚಂದ್ರಘಡ ಬಿಟ್ಟು ಬೆಳಗಾವಿಯನ್ನು ಕರ್ನಾಟಕಕ್ಕೆ ಸೇರಿಸಿತು. ಆದರೆ, ಅದನ್ನು ಮಹಾರಾಷ್ಟ್ರ ಸರಕಾರವು ಒಪ್ಪದೇ ಇದ್ದುದ್ದರಿಂದ 1967ರಲ್ಲಿ ಕರ್ನಾಟಕ-ಮಹಾರಾಷ್ಟ್ರ ಎರಡೂ ಸರಕಾರಗಳ ಒಪ್ಪಿಗೆ ಪಡೆದು ನ್ಯಾಯಮೂರ್ತಿ ಮಹಾಜನ್ ಆಯೋಗವು ಅಸ್ತಿತ್ವಕ್ಕೆ ಬಂದಿತು. ಬೆಳಗಾವಿ ತನಗೆ ಸೇರದಿರುವ ಕಾರಣಕ್ಕೆ ಮಹಾಜನ್ ಆಯೋಗದ ವರದಿಯನ್ನು ಒಪ್ಪದ ಮಹಾರಾಷ್ಟ್ರ ಸರಕಾರವು 2004ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದೆ. ಆದರೆ, ಆ ದಾವೆ ಇನ್ನೂ ಇತ್ಯರ್ಥವಾಗಿಲ್ಲ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X