Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ನನ್ನ 9 ತಲೆಮಾರಿನ ಹೆಸರು ಹೇಳುತ್ತೇನೆ,...

“ನನ್ನ 9 ತಲೆಮಾರಿನ ಹೆಸರು ಹೇಳುತ್ತೇನೆ, ಮೋದಿಗೆ ಸಾಧ್ಯವೇ ?”

ದಿಲ್ಲಿ ಚಳಿಗೆ ಸವಾಲೊಡ್ಡಿ ಪೌರತ್ವ ಕಾಯ್ದೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ವೃದ್ಧೆಯರು

ವಾರ್ತಾಭಾರತಿವಾರ್ತಾಭಾರತಿ2 Jan 2020 11:54 PM IST
share
“ನನ್ನ 9 ತಲೆಮಾರಿನ ಹೆಸರು ಹೇಳುತ್ತೇನೆ, ಮೋದಿಗೆ ಸಾಧ್ಯವೇ ?”

ಹೊಸದಿಲ್ಲಿ, ಜ.2: ಪೌರತ್ವ ಕಾಯ್ದೆಯನ್ನು ವಿರೋಧಿಸಿ 15 ದಿನಗಳಿಂದ ದಿಲ್ಲಿಯ ಶಹೀನ್ ಬಾಘ್ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮೈನಡುಗಿಸುವ ಚಳಿಯನ್ನೂ ಲೆಕ್ಕಿಸದೆ ಮೂವರು ವೃದ್ಧೆಯರು ಮುಂಚೂಣಿಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

90 ವರ್ಷದ ಆಸ್ಮಾ ಖತೂನ್, 82 ವರ್ಷದ ಬಿಲ್ಕಿಸ್ ಹಾಗೂ 75 ವರ್ಷದ ಶಾರ್ವರಿ ಇದೀಗ ‘ಶಹೀನ್ ಬಾಘ್‌ನ ಅಜ್ಜಿಯಂದಿರು’ ಎಂದೇ ಹೆಸರಾಗಿದ್ದಾರೆ. ನಿಮ್ಮ ಪೂರ್ಣ ಹೆಸರೇನೆಂದು ಯಾರಾದರೂ ಕೇಳಿದರೆ- ನಾವು ಹೇಳುವಂತಿಲ್ಲ. ಯಾಕೆಂದರೆ ಹೆಸರನ್ನು ಸಾಬೀತುಪಡಿಸಲು ನಮ್ಮ ಬಳಿ ದಾಖಲೆಗಳಿಲ್ಲ ಎಂದುತ್ತರಿಸುತ್ತಾರೆ. ‘ನೀವೇಕೆ ಪ್ರತಿಭಟನೆ ನಡೆಸುತ್ತಿದ್ದೀರಿ’ ಎಂಬ ಪ್ರಶ್ನೆಗೆ- “ಅದನ್ನು ಪ್ರಧಾನಿ ಮೋದಿಗೆ ಕೇಳಿ. ನಮ್ಮ ಜೀವನದಲ್ಲಿ ಇಂತಹ ದಿನವನ್ನೂ ಕಾಣಬೇಕಾಯಿತು. ಜೀವನದ ಕೊನೆಯ ದಿನಗಳಲ್ಲಿ ಪ್ರತಿಭಟನೆ ನಡೆಸುವಂತಾಗಿದೆ” ಎಂದುತ್ತರಿಸುತ್ತಾರೆ.

 “ನಾವು ಪೌರತ್ವ ಕಾಯ್ದೆಯನ್ನು ವಿರೋಧಿಸುತ್ತೇವೆ. ಅವರು (ಮೋದಿ) ಪೌರತ್ವವನ್ನು ಸಾಬೀತುಪಡಿಸಲು ದಾಖಲೆ ಸಲ್ಲಿಸುವಂತೆ ಕೇಳುತ್ತಿದ್ದಾರೆ. ಈ ದೇಶದಲ್ಲಿ ಯಾವುದೇ ದಾಖಲೆ ಪತ್ರಗಳಿಲ್ಲದ ಹಲವು ಜನರಿದ್ದಾರೆ. ಹಲವರು ಪ್ರವಾಹ, ಭೂಕಂಪದಂತಹ ವಿಪತ್ತಿನಲ್ಲಿ ತಮ್ಮ ದಾಖಲೆಪತ್ರ ಕಳೆದುಕೊಂಡಿದ್ದಾರೆ. ನಾನು ನನ್ನ 9 ತಲೆಮಾರಿನವರ ಹೆಸರನ್ನು ಹೇಳುತ್ತೇನೆ. ಮೋದಿಗೆ ಇದು ಸಾಧ್ಯವೇ” ಎಂದು ಸವಾಲೆಸೆಯುತ್ತಾರೆ ಆಸ್ಮಾ. ಪೌರತ್ವ ಕಾಯ್ದೆಯ ಬಗ್ಗೆ ಅರಿವು ಹೊಂದಿಲ್ಲದವರು ಕಾಯ್ದೆಯನ್ನು ಬೆಂಬಲಿಸುತ್ತಿದ್ದಾರೆ. ಆದರೆ ಮುಸ್ಲಿಮರಷ್ಟೇ ಪ್ರತಿಭಟನೆ ನಡೆಸುತ್ತಿಲ್ಲ, ಎಲ್ಲಾ ಧರ್ಮದವರೂ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವೆಲ್ಲಾ ಇಲ್ಲೇ ಹುಟ್ಟಿ ಬೆಳೆದಿದ್ದು ಇಲ್ಲೇ ಸಾಯಲು ಬಯಸುವವರು. ಇದೊಂದು ವಿಭಜನಾತ್ಮಕ ಕಾನೂನಾಗಿದ್ದು, ನನ್ನ ಪೌರತ್ವ ಸಾಬೀತುಪಡಿಸುವ ಸಂದರ್ಭ ಬಂದರೂ ನಾನು ಯಾವುದೇ ದಾಖಲೆ ಪತ್ರ ನೀಡುವುದಿಲ್ಲ. ದಾಖಲೆ ಒದಗಿಸಲು ಸಾಧ್ಯವಿಲ್ಲದ ಜನರ ಬೆಂಬಲಕ್ಕೆ ನಾವು ನಿಲ್ಲುತ್ತೇವೆ ಎಂದು ಬಿಲ್ಕಿಸ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X