Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಾರೋಬೆಲೆ ಏಸುಕ್ರಿಸ್ತನ ಪ್ರತಿಮೆ...

ಹಾರೋಬೆಲೆ ಏಸುಕ್ರಿಸ್ತನ ಪ್ರತಿಮೆ ವಿಚಾರದಲ್ಲಿ ಅನಗತ್ಯ ರಾಜಕೀಯ ಸಲ್ಲ: ಚಿಂತಕರಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ3 Jan 2020 12:07 PM IST
share

ಬೆಂಗಳೂರು, ಜ.3: ಕನಕಪುರದ ಹಾರೋಬೆಲೆ ಬಳಿ ಏಸುಕ್ರಿಸ್ತರ ಬೃಹತ್ ಪ್ರತಿಮೆ ನಿರ್ಮಾಣದಲ್ಲಿ ಸ್ಥಳೀಯ ಶಾಸಕರು ಕೈಜೋಡಿಸಿರುವುದು ರಾಜಕೀಯ ವಲಯದಲ್ಲಿ ಇದೀಗ ಅನೇಕ ವಾದ-ವಿವಾದಗಳಿಗೆ ಕಾರಣವಾಗಿದೆ. ಆದರೆ ಒಬ್ಬ ಜನಪ್ರತಿನಿಧಿ ತನ್ನ ಕ್ಷೇತ್ರದಲ್ಲಿನ ಸರ್ವಜನರ ಆಶೋತ್ತರಗಳಿಗೆ ಸ್ಪಂದಿಸುವುದು ಅವರ ಕರ್ತವ್ಯ. ಇದು ನಿಜವಾದ ಧರ್ಮನಿರಪೇಕ್ಷ ನಡಿಗೆಯಾಗಿದೆ ಎಂದು ಸಾಹಿತಿ, ಚಿಂತಕರಾದ ದೇವನೂರ ಮಹಾದೇವ, ಡಾ.ಕೆ.ಮರುಳಸಿದ್ದಪ್ಪ, ಪ್ರೊ.ಜಿ.ಕೆ.ಗೋವಿಂದ ರಾವ್, ಡಾ.ನಟರಾಜ್ ಹುಳಿಯಾರ್, ಡಾ.ಬಂಜಗೆರೆ ಜಯಪ್ರಕಾಶ್, ಪ್ರೊ.ಎಸ್.ಎನ್.ನಾಗರಾಜ ರೆಡ್ಡಿ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಮಂಜುನಾಥ ಅದ್ದೆ, ಡಾ.ರವಿಕುಮಾರ್ ಬಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಭಾರತ ಸರ್ವ ಧರ್ಮಗಳನ್ನು, ಜಾತಿಗಳನ್ನು ಒಳಗೊಂಡಿರುವ ಧರ್ಮಾತೀತ, ಜಾತ್ಯತೀತ ರಾಷ್ಟ್ರ. ಹಾಗಿರುವಾಗ ಇಲ್ಲಿರುವ ಎಲ್ಲ ಧರ್ಮೀಯರ ಭಾವನೆಗಳನ್ನು ಗೌರವಿಸಬೇಕಿದೆ. ಆದರೆ ಬಿಜೆಪಿ ಮುಖಂಡರು ಏಸುಕ್ರಿಸ್ತರ ಪ್ರತಿಮೆಯ ವಿಚಾರದಲ್ಲಿ ಅನಗತ್ಯವಾಗಿ ಸಲ್ಲದ ರಾಜಕೀಯ ಮಾಡುತ್ತಿದ್ದಾರೆ. ಅಲ್ಲದೆ ಈ ನೆಪದಲ್ಲಿ ಸೌಹಾರ್ದಯುತವಾಗಿ ಬದುಕುತ್ತಿರುವ ಅಮಾಯಕ ಜನರಲ್ಲಿ ಕೋಮುದ್ವೇಷ ಹರಡಲು ಮುಂದಾಗುತ್ತಿದ್ದಾರೆ. ಇದು ಖಂಡನೀಯ ಎಂದು ಚಿಂತಕರ ಪ್ರಕಟನೆ ತಿಳಿಸಿದೆ.

ಬಿಜೆಪಿ ಹೇಳುವಂತೆ ಹಾರೋಬೆಲೆಯಲ್ಲಿರುವುದು ಕಾಪಾಲಿಕರ ಬೆಟ್ಟ, ಅಲ್ಲಿ ಭೈರವನ ಪ್ರತಿಮೆ ಸ್ಥಾಪಿಸಬೇಕು ಎನ್ನುತ್ತಿದ್ದಾರೆ. ಅವರ ಆಗ್ರಹದಂತೆ ಅಲ್ಲಿ ಭೈರವನ ಪ್ರತಿಮೆ ನಿರ್ಮಾಣವಾಗಲಿ. ಇದಕ್ಕೆ ಯಾರು ಅಡ್ಡಿಪಡಿಸಲಾರರು. ಎಲ್ಲ ರೀತಿಯ ಧರ್ಮಗಳ, ಸಂಸ್ಕೃತಿಗಳ ಸಮಾಗಮದಲ್ಲೇ ಭಾರತದ ಬಹುತ್ವದ ಸೊಗಸು ಅಡಗಿದೆ. ಇದನ್ನು ಅರಿಯದೆ ಜಗತ್ತಿಗೆ ಶಾಂತಿ ಬೋಧಿಸಿದ ಏಸುವಿನ ಪ್ರತಿಮೆ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿರುವುದು ಸರ್ವಧರ್ಮ ಸಹಿಷ್ಣುತೆ ವಿರೋಧಿಯಾಗಿದೆ. ಆದ್ದರಿಂದ ಸರಕಾರ ಹಾಗೂ ಹಸ್ತಕ್ಷೇಪ ಮಾಡುತ್ತಿರುವ ರಾಕಾರಣಿಗಳು ಅನಗತ್ಯ ಕ್ಷುಲ್ಲಕ ಕೆಸರೆರಚಾಟವನ್ನು ಕೈಬಿಟ್ಟು ಒಮ್ಮತದಿಂದ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಸಹಕರಿಸಬೇಕು. ಆ ಮೂಲಕ ಕನ್ನಡ ನಾಡು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬುದನ್ನು ಸಾಬೀತುಪಡಿಸಬೇಕಿದೆ ಎಂದು ಅವರು ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X