Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 6 ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿ, 90...

6 ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿ, 90 ವರ್ಷದ ವೃದ್ಧರಿಗೆ ನೋಟಿಸ್ ಜಾರಿಗೊಳಿಸಿದ ಉ.ಪ್ರದೇಶ ಪೊಲೀಸರು

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Jan 2020 2:49 PM IST
share
6 ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿ, 90 ವರ್ಷದ ವೃದ್ಧರಿಗೆ ನೋಟಿಸ್ ಜಾರಿಗೊಳಿಸಿದ ಉ.ಪ್ರದೇಶ ಪೊಲೀಸರು

ಲಕ್ನೋ: ಉತ್ತರ ಪ್ರದೇಶದ ವಿವಿಧೆಡೆ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳನ್ನು ದಮನಿಸಲು ಬಲಪ್ರಯೋಗ ನಡೆಸಿದ ರಾಜ್ಯ ಪೊಲೀಸರ ಕ್ರಮ ವಿವಾದಕ್ಕೀಡಾಗಿದೆ. ಇನ್ನೊಂದೆಡೆ ಪ್ರತಿಭಟನೆ ನಡೆಸಿ ಶಾಂತಿಗೆ ಭಂಗ ತರುವ ಸಾಧ್ಯತೆಯಿದೆಯೆಂದು ಫಿರೋಝಾಬಾದ್ ಪೊಲೀಸರಿಂದ ನೋಟಿಸ್ ಪಡೆದ ಹಲವರಲ್ಲಿ ಮೃತ ವ್ಯಕ್ತಿಯೊಬ್ಬರೂ ಸೇರಿದ್ದಾರೆ.

ಹಿಂಸಾತ್ಮಕ ಪ್ರತಿಭಟನೆಗಳ ನಂತರ ಪೊಲೀಸರು ಸುಮಾರು 200 ಮಂದಿಗೆ ಐಪಿಸಿ ಸೆಕ್ಷನ್ 107/16 ಅನ್ವಯ ನೋಟಿಸ್ ಜಾರಿಗೊಳಿಸಿದ್ದರು. ಈ 200 ಮಂದಿಯಲ್ಲಿ ಆರು ವರ್ಷಗಳ ಹಿಂದೆ ಮೃತಪಟ್ಟ ಬನ್ನೇ ಖಾನ್ ಹೆಸರು ಕೂಡ ಇದೆ. ಇದನ್ನು ದೃಢೀಕರಿಸಿದ ಖಾನ್ ಅವರ ಪುತ್ರ ಮುಹಮ್ಮದ್ ಸರ್ಫರಾಝ್, ಪೊಲೀಸರು ಸರಿಯಾಗಿ ಪರಾಮರ್ಶಿಸಿ ಇಂತಹ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ತಮ್ಮ ತಂದೆಯ ಮರಣ ಪ್ರಮಾಣಪತ್ರವೂ ತಮ್ಮ ಬಳಿಯಿದೆ ಎಂದು ಅವರು ತಿಳಿಸಿದ್ದಾರೆ.

ಖಾನ್ ಹೊರತಾಗಿ ಕೆಲ 90 ವರ್ಷದ ದಾಟಿದ ವ್ಯಕ್ತಿಗಳಿಗೂ ನೋಟಿಸ್ ಜಾರಿಯಾಗಿದೆ. ಇವರ ಪೈಕಿ 93 ವರ್ಷದ  ಸಮಾಜ ಸೇವಕ ಫಸಾಹತ್ ಮೀರ್ ಖಾನ್ ಕೂಡ ಒಬ್ಬರು.

"ಮೀರ್ ಖಾನ್ ಒಬ್ಬ ಸಮಾಜ ಸೇವಕ ಹಾಗೂ ರಾಷ್ಟ್ರಪತಿ ಭವನದಲ್ಲಿ ಹಿಂದೆ ಮಾಜಿ ರಾಷ್ಟ್ರಪತಿ ಕಲಾಂ ಅವರನ್ನು ಭೇಟಿಯಾಗಿದ್ದರು. ಅವರಿಗೆ ಇಂತಹ ನೋಟಿಸ್ ಏಕೆ ಜಾರಿಗೊಳಿಸಲಾಗಿದೆ ಎಂದು ತಿಳಿದಿಲ್ಲ'' ಎಂದು ಅವರ ಪುತ್ರ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಈ ಪಟ್ಟಿಯಲ್ಲಿರುವವರಿಗೆ ಸರಕಾರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ರೂ 10 ಲಕ್ಷ ಬಾಂಡ್ ಸಲ್ಲಿಸಿ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಹೇಳಲಾಗಿದೆ. "ಆದರೆ ಪಟ್ಟಿಯಲ್ಲಿ ಕೆಲವು ಅಮಾಯಕರ ಹೆಸರು ಪ್ರಮಾದದಿಂದ ಸೇರಿಕೊಂಡಿದೆ. ಶಾಂತಿ ಕಾಪಾಡಲು ಬಹಳಷ್ಟು ಒತ್ತಡವಿತ್ತು. ವಿವಿಧ ಠಾಣೆಗಳಿಂದ ದೊರೆತ ಮಾಹಿತಿಯ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿತ್ತು'' ಎಂದು ಫಿರೋಝಾಬಾದ್ ಮ್ಯಾಜಿಸ್ಟ್ರೇಟ್ ಕುನ್ವರ್ ಪಂಕಜ್ ಸಿಂಗ್ ಹೇಳಿದ್ದಾರೆ. ಪಟ್ಟಿಯಲ್ಲಿ ಹೆಸರಿರುವ ಅಮಾಯಕ ಹಿರಿಯರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಸ್ಥಳೀಯ ಮಸೀದಿಯಲ್ಲಿ 58 ವರ್ಷ ಸೇವೆ ಸಲ್ಲಿಸಿದ್ದ 90 ವರ್ಷದ ಶುಫಿ ಅನ್ಸಾ ಹುಸೇನ್ ಎಂಬವರಿಗೂ ನೋಟಿಸ್ ಜಾರಿಯಾಗಿದೆ ಎಂದು ಇನ್ನೊಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X