ಯೋಧರ ಸಾವು, ಒಳನುಸುಳುವಿಕೆ: ಬಿಜೆಪಿ ವಿರುದ್ಧ ಶಿವಸೇನೆ ಆಕ್ರೋಶ
ಕಾಶ್ಮೀರ, ಜ. 3: ಜಮ್ಮು ಹಾಗೂ ಕಾಶ್ಮೀರದಲ್ಲಿ ಇತ್ತೀಚೆಗೆ ಕದನ ವಿರಾಮ ಉಲ್ಲಂಘನೆಯ ಮೂಲಕ ಯೋಧರ ಹತ್ಯೆ ಹಾಗೂ ಗಡಿಯಾಚೆಯಿಂದ ಒಳನುಸುಳುವಿಕೆ ಕುರಿತು ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.
ಜಮ್ಮು ಹಾಗೂ ಕಾಶ್ಮೀರದಲ್ಲಿ ಕಳೆದ ತಿಂಗಳಲ್ಲಿ ಮಹಾರಾಷ್ಟ್ರದ 8ರಿಂದ 9 ಯೋಧರು ಗಡಿಯಾಚೆಯ ಗುಂಡಿನ ದಾಳಿಯಿಂದ ಹತ್ಯೆಗೀಡಾಗಿದ್ದಾರೆ ಎಂದು ಶಿವಸೇನೆಯ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯ ಹೇಳಿದೆ.
ವಿಧಿ 370ನ್ನು ರದ್ದುಗೊಳಿಸಿದ ಬಳಿಕ ಜಮ್ಮು ಹಾಗೂ ಕಾಶ್ಮೀರದ ಈಗಿನ ಪರಿಸ್ಥಿತಿ ಬಗ್ಗೆ ದೇಶವನ್ನು ಹಾದಿ ತಪ್ಪಿಸುತ್ತಿರುವುದಕ್ಕೆ ನರೇಂದ್ರ ಮೋದಿ ಸರಕಾರವನ್ನು ಸಂಪಾದಕೀಯದಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಜಮ್ಮು ಹಾಗೂ ಕಾಶ್ಮೀರದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ಸಂಪಾದಕೀಯ ಹೇಳಿದೆ.
Next Story