Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕವಿ ಫೈಝ್‌ರ ಗೀತೆ ಹಿಂದು ವಿರೋಧಿಯೇ?’...

‘ಕವಿ ಫೈಝ್‌ರ ಗೀತೆ ಹಿಂದು ವಿರೋಧಿಯೇ?’ ಎಂಬ ತನಿಖೆ ಕುರಿತು ಐಐಟಿ ಕಾನ್ಪುರ ಮರುಚಿಂತನೆ

ವಾರ್ತಾಭಾರತಿವಾರ್ತಾಭಾರತಿ3 Jan 2020 10:59 PM IST
share
‘ಕವಿ ಫೈಝ್‌ರ ಗೀತೆ ಹಿಂದು ವಿರೋಧಿಯೇ?’ ಎಂಬ  ತನಿಖೆ ಕುರಿತು ಐಐಟಿ ಕಾನ್ಪುರ ಮರುಚಿಂತನೆ

ಲಕ್ನೋ,ಜ.3: ದಶಕಗಳಿಂದಲೂ ಪ್ರತಿಭಟನಾ ಗೀತೆಯಾಗಿ ಬಳಕೆಯಾಗುತ್ತಿರುವ ಪಾಕಿಸ್ತಾನಿ ಕವಿ ಫೈಝ್ ಅಹ್ಮದ್ ಫೈಝ್ ಅವರ ಖ್ಯಾತ ಕವಿತೆ ‘ಹಮ್ ದೇಖೆಂಗೆ ’ ಹಿಂದು ವಿರೋಧಿ ಭಾವನೆಗಳನ್ನು ಪ್ರಚೋದಿಸುತ್ತಿದೆಯೇ ಎಂಬ ಕುರಿತು ತನ್ನ ತನಿಖೆಯಿಂದ ಐಐಟಿ-ಕಾನ್ಪುರ ಹಿಂದೆ ಸರಿಯುತ್ತಿರುವಂತಿದೆ.

 ಗೀತೆಯ ‘ಹಿಂದು ವಿರೋಧಿ’ ಸ್ವರೂಪವು ತನ್ನ ತನಿಖೆಯ ಕೇಂದ್ರಬಿಂದುವಾಗಿದೆ ಎಂದು ಈ ಮೊದಲು ಹೇಳಿದ್ದ ಸಂಸ್ಥೆಯು,ತನಿಖೆಯು ವಿಶಾಲ ವ್ಯಾಪ್ತಿಯನ್ನು ಹೊಂದಿದೆ ಮತ್ತು ವಿದ್ಯಾರ್ಥಿಗಳು ಕಳೆದ ತಿಂಗಳು ಕ್ಯಾಂಪಸ್‌ನಲ್ಲಿ ನಡೆಸಿದ್ದ ಪ್ರತಿಭಟನಾ ಜಾಥಾದ ಸುತ್ತ ಹಲವಾರು ಆರೋಪಗಳಿಗೆ ಸಂಬಂಧಿಸಿದೆ,ಫೈಝ್ ಅವರ ಗೀತೆ ಮತ್ತು ಅದರಲ್ಲಿಯ ವಿಷಯ ಈ ತನಿಖೆಯ ಒಂದು ಮಗ್ಗಲು ಮಾತ್ರವಾಗಿದೆ ಎಂದು ಈಗ ಹೇಳುತ್ತಿದೆ.

 ಉದ್ದೇಶಿತ ತನಿಖೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಐಐಟಿ-ಕಾನ್ಪುರದ ಆಡಳಿತ ವರ್ಗದ ನಿಲುವು ಮೃದುಗೊಂಡಂತಿದೆ. ಸಿಎಎ ವಿರುದ್ಧ ಪ್ರತಿಭಟನೆಗೆ ಸಂಬಂಧಿಸಿದಂತೆ ದಿಲ್ಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿವಿಯ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ತನ್ನ ವಿದ್ಯಾರ್ಥಿಗಳು ಡಿ.17ರಂದು ಕ್ಯಾಂಪಸ್‌ನಲ್ಲಿ ಜಾಥಾದಲ್ಲಿ ಫೈಝ್ ಗೀತೆಯನ್ನು ಹಾಡಿದ್ದರ ಕುರಿತು ದೂರುಗಳು ಬಂದ ಬಳಿಕ ಸಂಸ್ಥೆಯು ತನಿಖಾ ಸಮಿತಿಯೊಂದನ್ನು ರಚಿಸಿತ್ತು. ಡಿ.15ರಂದು ಜಾಮಿಯಾ ವಿದ್ಯಾರ್ಥಿಗಳ ಮೇಲೆ ನಡೆದಿದ್ದ ಪೊಲೀಸ್ ದೌರ್ಜನ್ಯವನ್ನು ವಿರೋಧಿಸಿ ದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ನಡೆಸಿದ್ದರು.

ಕಮ್ಯುನಿಸ್ಟ್ ಮತ್ತು ನಾಸ್ತಿಕರಾಗಿರುವ ಪಾಕಿಸ್ತಾನದ ಸಿಯಾಲಕೋಟ್‌ನ ಉರ್ದು ಕವಿ ಫೈಝ್ 1963ರಲ್ಲಿ ನೊಬೆಲ್ ಸಾಹಿತ್ಯ ಪ್ರಶಸ್ತಿಗೆ ನಾಮಕರಣಗೊಂಡಿದ್ದರು. ಅವರು ವ್ಯವಸ್ಥೆಯ ವಿರುದ್ಧ ದಾಳಿಗಳನ್ನು ನಡೆಸಲು ತನ್ನ ಕವಿತೆಗಳಲ್ಲಿ ಧಾರ್ಮಿಕ ರೂಪಕಗಳನ್ನು ಬಳಸಿದ್ದರು.

 ತನ್ನ ಕ್ರಾಂತಿಕಾರಿ ಬರಹಗಳಿಗಾಗಿ ಫೈಝ್ ಹಲವಾರು ಬಾರಿ ಜೈಲು ಸೇರಿದ್ದರು. 1979ರಲ್ಲಿ ನ್ಯೂಯಾರ್ಕ್‌ನಲ್ಲಿ ಅವರು ‘ಹಮ್ ದೇಖೆಂಗೆ ’ಗೀತೆಯನ್ನು ರಚಿಸಿದ್ದರು. ಅದು ಝುಲ್ಫಿಕರ್ ಅಲಿ ಭುಟ್ಟೋ ಸರಕಾರವನ್ನು ಪದಚ್ಯುತಗೊಳಿಸಿ ತನ್ನನ್ನು ರಾಷ್ಟ್ರಾಧ್ಯಕ್ಷನೆಂದು ಘೋಷಿಸಿಕೊಂಡಿದ್ದ ಪಾಕಿಸ್ತಾನದ ಸರ್ವಾಧಿಕಾರಿ ಝಿಯಾವುಲ್ ಹಕ್ ಅವರ ವಿರುದ್ಧ ಪ್ರತಿಭಟನೆಯ ಸಂಕೇತವಾಗಿತ್ತು. 1986ರಲ್ಲಿ ಪಾಕಿಸ್ತಾನಿ ಗಾಯಕಿ ಇಕ್ಬಾಲ್ ಬಾನೊ ಅವರು ಲಾಹೋರಿನಲ್ಲಿ 50,000ಕ್ಕೂ ಅಧಿಕ ಜನಸ್ತೋಮದ ಎದುರು ಮಿಲಿಟರಿ ಆಡಳಿತದ ವಿರುದ್ಧ ಧಿಕ್ಕಾರದ ಗೀತೆಯಾಗಿ ‘ಹಮ್ ದೇಖೆಂಗೆ’ಯನ್ನು ಹಾಡಿದಾಗಿನಿಂದ ಅದು ಮಾದರಿ ಪ್ರತಿಭಟನಾ ಗೀತೆಯಾಗಿ ಜನಪ್ರಿಯಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X