Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇರಾನ್ ಉದ್ವಿಗ್ನತೆಯಿಂದ ತೈಲ ಬೆಲೆ...

ಇರಾನ್ ಉದ್ವಿಗ್ನತೆಯಿಂದ ತೈಲ ಬೆಲೆ ಹೆಚ್ಚಳದ ಆತಂಕ

ವಾರ್ತಾಭಾರತಿವಾರ್ತಾಭಾರತಿ4 Jan 2020 10:03 AM IST
share
ಇರಾನ್ ಉದ್ವಿಗ್ನತೆಯಿಂದ ತೈಲ ಬೆಲೆ ಹೆಚ್ಚಳದ ಆತಂಕ

ಹೊಸದಿಲ್ಲಿ, ಜ.4: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಬೆನ್ನಲ್ಲೇ ಜಾಗತಿಕ ಮಟ್ಟದಲ್ಲಿ ತೈಲಬೆಲೆ ಶೇಕಡ 4ರಷ್ಟು ಹೆಚ್ಚಿದ್ದು, ತೈಲ ಮಾರುಕಟ್ಟೆಯಲ್ಲಿ ಚಂಚಲತೆ ಹೆಚ್ಚಿ ಗ್ರಾಹಕರಿಗೆ ಇದರ ನೇರ ಬಿಸಿ ತಟ್ಟುವ ಸಾಧ್ಯತೆಗಳು ನಿಚ್ಚಳವಾಗಿವೆ. ಆರ್ಥಿಕ ಪ್ರಗತಿಗೆ ಪುನಶ್ಚೇತನ ನೀಡುವ ಸರ್ಕಾರದ ಪ್ರಯತ್ನಕ್ಕೂ ಇದು ಹೊಡೆತ ನೀಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶುಕ್ರವಾರ ತೈಲ ಬೆಲೆ ಶೇಕಡ 4ರಷ್ಟು ಹೆಚ್ಚಿ ಬ್ಯಾರಲ್‌ಗೆ 70 ಡಾಲರ್ ತಲುಪಿತ್ತು. ಇರಾನ್ ಮಿಲಿಟರಿ ಕಮಾಂಡರ್ ಒಬ್ಬರನ್ನು ಅಮೆರಿಕ ಹತ್ಯೆ ಮಾಡಿರುವುದಕ್ಕೆ ಪ್ರತೀಕಾರವಾಗಿ ಪ್ರಮುಖ ಜಾಗತಿಕ ತೈಲ ವ್ಯಾಪಾರ ಮಾರ್ಗವಾದ ಹರ್ಮಸ್ ಕೊಲ್ಲಿಯನ್ನು ಇರಾನ್ ಮುಚ್ಚುವ ಸಾಧ್ಯತೆ ಇದೆ. ಇದು ತೈಲಬೆಲೆ ಮತ್ತಷ್ಟು ಹೆಚ್ಚುವ ಆತಂಕಕ್ಕೆ ಕಾರಣವಾಗಿದೆ.

ವಿಶ್ವದ ಮೂರನೇ ಅತಿಹೆಚ್ಚು ತೈಲ ಖರೀದಿಸುವ ರಾಷ್ಟ್ರವಾದ ಭಾರತಕ್ಕೆ ಮದ್ಯಪ್ರಾಚ್ಯ ಉದ್ವಿಗ್ನತೆ ಎರಡು ಬಗೆಯಲ್ಲಿ ನೇರ ಪರಿಣಾಮ ಬೀರಲಿದೆ. ಒಂದು; ಬೆಲೆ ಹೆಚ್ಚಳ ಮತ್ತು ದೇಶದ ಆರ್ಥಿಕತೆ ಹಾಗೂ ಗ್ರಾಹಕರ ಭಾವನೆಗಳ ಮೇಲೆ ಅದರ ಪರಿಣಾಮ. ಇನ್ನೊಂದು; ತೈಲ ಪೂರೈಕೆಯಲ್ಲಿ ವ್ಯತ್ಯಯ. ಇದರಿಂದಾಗಿ ಭಾರತ ಪರ್ಯಾಯ ಮೂಲಗಳಿಂದ ತೈಲ ಪಡೆಯುವ ಸಲುವಾಗಿ ಹೆಚ್ಚು ವೆಚ್ಚ ಮಾಡಬೇಕಾಗುತ್ತದೆ.

ಕಚ್ಚಾ ತೈಲ ದುಬಾರಿಯಾಗುವುದರಿಂದ ಸಹಜವಾಗಿಯೇ ಇಂಧನ ಬೆಲೆ ಹೆಚ್ಚಲಿದೆ. ಕುಟುಂಬಗಳು ಪೆಟ್ರೋಲ್/ ಡೀಸೆಲ್ ಮೇಲೆ ಅಧಿಕ ವೆಚ್ಚ ಮಾಡುವುದು ಅನಿವಾರ್ಯವಾದ ತಕ್ಷಣ ಇತರ ಅಗತ್ಯ ವೆಚ್ಚ ಕಡಿತವಾಗಲಿದ್ದು, ಇದು ಮಾರುಕಟ್ಟೆ ಮೇಲೆ ನೇರ ಪರಿಣಾಮ ಬೀರಲಿದೆ. ತೈಲ ಖರೀದಿಗೆ ಸರ್ಕಾರ ಅಧಿಕ ವೆಚ್ಚ ಮಾಡುವ ಪರಿಣಾಮ ಸಾಮಾಜಿಕ ವಲಯಕ್ಕೆ ಮಾಡುವ ವೆಚ್ಚ ಕಡಿತಗೊಳ್ಳಲಿದೆ. ಇದು ಆರ್ಥಿಕ ಪುನಶ್ಚೇತನದ ಹಾದಿಗೆ ತಡೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X