Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ...

80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಷಿಪ್

ಅಗ್ರಸ್ಥಾನ ಉಳಿಸಿಕೊಂಡ ಮಂಗಳೂರು ವಿವಿ

ವಾರ್ತಾಭಾರತಿವಾರ್ತಾಭಾರತಿ4 Jan 2020 11:35 PM IST
share
80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಷಿಪ್

ಮೂಡುಬಿದಿರೆ: ಇಲ್ಲಿನ ಸ್ವರಾಜ್ ಮೈದಾನದಲ್ಲಿ ನಡೆಯುತ್ತಿರುವ 80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ನ ಮೂರನೇ ದಿನವಾದ ಶನಿವಾರ ಮಹಿಳೆಯರ ವಿಭಾಗದ 20 ಕಿ.ಮೀ. ನಡಿಗೆ ಹಾಗೂ 3000 ಮೀ. ಸ್ಟೀಪಲ್ ಚೇಸ್‍ನಲ್ಲಿ ನೂತನ ಕೂಟ ದಾಖಲೆಗಳು ನಿರ್ಮಾಣಗೊಂಡವು.

20ಕಿ.ಮೀ. ನಡಿಗೆ:

20 ಸಾವಿರ ಮೀಟರ್ (20ಕಿ.ಮೀ.) ನಡಿಗೆಯಲ್ಲಿ ಉದಯ್‍ಪುರ್‍ನ ಮೋಹನ್‍ಲಾಲ್ ಸುಖಾದಿಯಾ ವಿವಿಯ ಸೋನಾಲ್ ಸುಖ್‍ವಾಲ್ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ. 20ಕಿ.ಮೀ ದೂರವನ್ನು 1ಗಂಟೆ 38ನಿಮಿಷ 40.49 ಸೆಕೆಂಡ್‍ಗಳಲ್ಲಿ ಕ್ರಮಿಸಿ ಮಹರ್ಷಿ ದಯಾನಂದ ವಿವಿಯ ಎಮ್ ಆರ್ ರವೀನ(1ಗಂಟೆ 43ನಿಮಿಷ 58.64ಸೆಕೆಂಡ್) ಅವರ ಹೆಸರಿನಲ್ಲಿದ್ದ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಬಾರಿಯ ಪ್ರಥಮ ನಾಲ್ಕು ಸ್ಥಾನ ಪಡೆದ ಕ್ರೀಡಾಪಟುಗಳು ಕಳೆದ ಬಾರಿಯ ಕೂಟ ದಾಖಲೆಯನ್ನು ಸರಿಗಟ್ಟಿದ್ದಾರೆ.

ಸ್ಟೀಪಲ್ ಚೇಸ್ ದಾಖಲೆ

ಮಹಿಳೆಯರ ವಿಭಾಗದ 3000 ಮೀ. ಸ್ಟೀಪಲ್ ಚೇಸ್‍ನಲ್ಲಿ ಪುಣೆಯ ಸಾವಿತ್ರಿ ಬಾಯಿ ಪುಲೆ ವಿವಿಯ ಕೋಮಲ್ ಜಗದಾಲೆ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ. 10ನಿ 23.658ಸೆಂಕಡ್‍ಗಳಲ್ಲಿ ಚೇಸ್ ಮಾಡಿ ಮಂಗಳೂರು ವಿವಿಯ ಭಗತ್ ಶೀತಲ್ ಜಾಮಜಿ (10ನಿಮಿಷ 34.53ಸೆಂಕೆಡ್) ಅವರ ಹೆಸರಲ್ಲಿದ್ದ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.  ಮೆಹಬೂಬ್‍ನಗರದ ಪಲಿಮೂರ್ ವಿವಿ ಜಿ ಮಹೇಶ್ವರಿ 10ನಿ 54.961ಸೆಂಕೆಡ್ ಕ್ರಮಿಸಿ ಬೆಳ್ಳಿಯ ಪದಕ ಹಾಗೂ ಮಂಗಳೂರು ವಿವಿಯ ಜ್ಯೋತಿ ಜಗ್‍ಬಹುದ್ಧೂರ್ ಚೌಹಾರ್ 11ನಿ 3.246 ಸೆಂಕೆಡ್ ಕ್ರಮಿಸುವ ಮೂಲಕ ಕಂಚಿನ ಪದಕ ಪಡೆದಿದ್ದಾರೆ. 

ದಾಖಲೆ ಮುರಿದರೂ ನಾಲ್ಕನೇ ಸ್ಥಾನ !

ಶನಿವಾರದ ಕ್ರೀಡಾಕೂಟಕ್ಕೆ ನಾಂದಿ ಹಾಡಿದ ಮಹಿಳೆಯರ ವಿಭಾಗದ 20.ಕಿ.ಮೀ ನಡಿಗೆ ವಿಶೇಷತೆಗೆ ಸಾಕ್ಷಿಯಾಯಿತು. ಇದರಲ್ಲಿ ಈ ಹಿಂದೆ ಕೂಟ ದಾಖಲೆ ಹೊಂದಿದ್ದ ಮಹರ್ಷಿ ದಯಾನಂದ ವಿವಿಯ ಎಂ ಆರ್ ರವೀನ(1ಗಂಟೆ 43ನಿಮಿಷ 58.64ಸೆಕೆಂಡ್) ಈ ಬಾರಿ (1ಗಂಟೆ 43ನಿಮಿಷ 27.74ಸೆಕೆಂಡ್) ತಮ್ಮ ದಾಖಲೆಯನ್ನು ಸರಿಗಟ್ಟಿರಾದರೂ ನಾಲ್ಕನೇ ಸ್ಥಾನ ಪಡೆಯುವಂತಾಯಿತು. ಇವರೊಟ್ಟಿಗೆ ಮೊದಲ ಮೂರು ಸ್ಥಾನ ಪಡೆದ ಕ್ರೀಡಾಪಟುಗಳು ಹಿಂದಿನ ಕೂಟ ದಾಖಲೆಯನ್ನು ಮುರಿದ ಕೀರ್ತಿಗೆ ಭಾಜನರಾದರು.

ದ್ವಿತೀಯ ಸ್ಥಾನ ಕಸಿದ ಮದ್ರಾಸ್

ಮೂರನೇ ದಿನದ ಅಂತ್ಯಕ್ಕೆ 86 ಅಂಕಗಳೊಂದಿಗೆ ಮಂಗಳೂರು ವಿವಿ ಕೂಟದಲ್ಲಿ ಅಗ್ರಸ್ಥಾನ ಪಡೆದಿದ್ದು, ಮದ್ರಾಸ್ ವಿವಿಯು 45 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಹರ್ಯಾಣದ ಮಹರ್ಷಿ ದಯಾನಂದ ವಿವಿಯು 29 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ನಿನ್ನೆ ದಿನದ ಅಂತ್ಯಕ್ಕೆ ಮದ್ರಾಸ್ ವಿವಿ ಹಾಗೂ ಹರ್ಯಾಣದ ಮಹರ್ಷಿ ದಯಾನಂದ ವಿವಿಯು 28 ಅಂಕಗಳೊಂದಿಗೆ ಎರಡನೇ ಸ್ಥಾನ ಹಂಚಿಕೊಂಡಿದ್ದವು.

ಕಳೆದ ವರ್ಷ ತೀವ್ರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಕಾರಣ ಕಂಚಿನ ಪದಕ ಪಡೆದುಕೊಂಡಿದ್ದೆ. ಆದರೆ ಈ ಬಾರಿ ಕಠಿಣ ಪರಿಶ್ರಮ, ನಿರ್ಧಿಷ್ಟ ಗುರಿ ಹೊಂದಿದ ಕಾರಣ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದೇನೆ.
- ಕೋಮಲ್ ಜಗದಾಲೆ, ಸಾವಿತ್ರಿ ಬಾಯಿ ಪುಲೆ ವಿವಿ, 3000 ಮೀ. ಸ್ಟೀಪಲ್ ಚೇಸ್ ಕೂಟ ದಾಖಲೆ ವಿಜೇತೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X