Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಲೆಮಾರಿ ಸಮುದಾಯಕ್ಕೆ ವಸತಿ ಸೌಕರ್ಯ:...

ಅಲೆಮಾರಿ ಸಮುದಾಯಕ್ಕೆ ವಸತಿ ಸೌಕರ್ಯ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ4 Jan 2020 11:46 PM IST
share
ಅಲೆಮಾರಿ ಸಮುದಾಯಕ್ಕೆ ವಸತಿ ಸೌಕರ್ಯ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಜ.4: ರಾಜ್ಯದಲ್ಲಿನ ಅಲೆಮಾರಿ ಜನಾಂಗವನ್ನು ಗುರುತಿಸಿ ಗುಡಿಸಲು ಮುಕ್ತಗೊಳಿಸುವ ನಿಟ್ಟಿನಲ್ಲಿ ‘ವಸತಿ ಸೌಕರ್ಯ’ ಕಲ್ಪಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದರು.

ಶನಿವಾರ ನಗರದ ಕುಮಾರ ಕೃಪಾದ ಗಾಂಧಿ ಭವನ ಸಭಾಂಗಣದಲ್ಲಿ ಕರ್ನಾಟಕ ಅಲೆಮಾರಿ, ಅಲೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ಆಯೋಜಿಸಿದ್ದ, ಅಲೆಮಾರಿ ಸಮಸ್ಯೆ ಸವಾಲುಗಳು ಮತ್ತು ಪರಿಹಾರೋಪಾಯಗಳು ಸಮಾಲೋಚನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಅಲೆಮಾರಿ ಸಮುದಾಯ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಅಗತ್ಯ ಕಾರ್ಯಕ್ರಮಗಳನ್ನು ಕೈಗೊಳ್ಳಲಿದೆ. ಅದೇ ರೀತಿಯಲ್ಲಿ ಈ ಸಮುದಾಯ ನೆಲೆ ಕಂಡುಕೊಳ್ಳಬೇಕಾಗಿದೆ. ಇದಕ್ಕಾಗಿ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.  ಈ ಹಿಂದೆ ಅಲೆಮಾರಿ ಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ಕೈಗೊಳ್ಳಲಾಗಿತ್ತು. ಜೊತೆಗೆ ಶೈಕ್ಷಣಿಕ ಪ್ರಗತಿಗೂ ಒತ್ತು ನೀಡಲಿದ್ದು, ಯಾವೊಂದು ಮಗು ಸಹ ಶಾಲೆಯಿಂದ ಹೊರಗಡೆ ಇರಬಾರದು ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರದ ಅಲೆಮಾರಿ ಕಲ್ಯಾಣ ಮತ್ತು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಆರ್.ದಾದಾ, ಹಂಪಿಯ ಕನ್ನಡ ವಿವಿಯ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಕೆ.ಎಂ.ಮೈತ್ರಿ, ಬಿಜೆಪಿ ಮುಖಂಡ ರವಿಕುಮಾರ್, ಒಕ್ಕೂಟದ ಅಧ್ಯಕ್ಷ ಕೆ.ಭಾಸ್ಕರ್ ದಾಸ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಬೇಡಿಕೆಗಳೇನು?:

* ಅಲೆಮಾರಿ ಅಧ್ಯಯನ ಕೇಂದ್ರ ಸ್ಥಾಪಿಸಿ

* ಅಲೆಮಾರಿ ಅಕಾಡೆಮಿ ಸ್ಥಾಪಿಸಿ

* ಶೈಕ್ಷಣಿಕ-ಉದ್ಯೋಗದಲ್ಲಿ ಮೀಸಲಾತಿ

* ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಕಲ್ಪಿಸಬೇಕು

* ರಾಜ್ಯದಲ್ಲಿ ಕೂಡಲೇ ಅಲೆಮಾರಿ ಅರೆ ಅಲೆಮಾರಿ ಆಯೋಗ ರಚಿಸಲು ತಕ್ಷಣವೇ ಕ್ರಮ ಕೆಗೊಳ್ಳಬೇಕು

* ಜನಾಂಗಕ್ಕೆ ಕೃಷಿ ಯೋಗ್ಯ ಜಮೀನು ನೀಡಬೇಕು

‘ಅನರ್ಹರಿಗೆ ಮೀಸಲಾತಿ, ಕಳ್ಳತನಕ್ಕೆ ಸಮ’

 ರಾಜ್ಯದಲ್ಲೂ ಕೆಲವು ಮುಂದುವರೆದ ಜಾತಿ ಸಮುದಾಯವು ಪರಿಶಿಷ್ಟ ಜಾತಿ/ಪಂಗಡದ ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆಯಾಗಿ, ಸೌಲಭ್ಯ ಪಡೆಯುತ್ತಿರುವುದು ದುರ್ದೈವ. ಇದರಿಂದ ನಿಜವಾದ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುತ್ತಾರೆ. ಅಲ್ಲದೆ, ಅನರ್ಹರು ಮೀಸಲಾತಿ ಸೌಲಭ್ಯ ಪಡೆದರೆ ಕಳ್ಳತನ ಮಾಡಿದಷ್ಟೇ ಅಪರಾಧ.

-ಗೋವಿಂದ ಕಾರಜೋಳ, ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X