Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ : ಪುಣ್ಕೆದಡಿ ಶಾಲೆಯಲ್ಲಿ ಎಂಟೇ...

ಬಂಟ್ವಾಳ : ಪುಣ್ಕೆದಡಿ ಶಾಲೆಯಲ್ಲಿ ಎಂಟೇ ವಿದ್ಯಾರ್ಥಿಗಳು !

ವಾರ್ತಾಭಾರತಿವಾರ್ತಾಭಾರತಿ5 Jan 2020 4:37 PM IST
share
ಬಂಟ್ವಾಳ : ಪುಣ್ಕೆದಡಿ ಶಾಲೆಯಲ್ಲಿ ಎಂಟೇ ವಿದ್ಯಾರ್ಥಿಗಳು !

ಬಂಟ್ವಾಳ, ಜ. 4: ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಪುಣ್ಕೆದಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ವರ್ಷ ಬೆರಳಣಿಕೆಯಷ್ಟು ಮಕ್ಕಳು ಮಾತ್ರ ದಾಖಲಾಗಿದ್ದು, ಮುಚ್ಚುವ ಭೀತಿ ಎದುರಾಗಿದೆ.

ಒಂದನೇ ತರಗತಿಯಲ್ಲಿ ಒಂದು, ಎರಡನೇ ತರಗತಿಯಲ್ಲಿ ಎರಡು, ಮೂರನೇ ತರಗತಿಯಲ್ಲಿ ಮೂರು, ನಾಲ್ಕನೇ ತರಗತಿಯಲ್ಲಿ ಯಾರೂ ಇಲ್ಲ. ಐದನೇ ತರಗತಿಯಲ್ಲಿ ಇಬ್ಬರು ಮಕ್ಕಳಿದ್ದು, ವರ್ಷ ಕಳೆದಂತೆ ಈ ಶಾಲೆಯೂ ಮಕ್ಕಳಿಲ್ಲದೆ ಸೊರಗುತ್ತಿದೆ.

1991ರಂದು ಆರಂಭವಾದ ಶಾಲೆಗೆ ಊರವರ ಶ್ರಮದಾನ, ಶಾಲಾ ಅಭಿವೃದ್ಧಿ ಸಮಿತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಾ ಬರುಯುತ್ತಿದ್ದರೂ, ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿದೆ. ಈ ಶಾಲೆಯ 1 ಕಿಲೋ ಮೀಟರ್ ದೂರದಲ್ಲಿ ಒಂದು, ಮತ್ತೆರಡು ಕಿಲೋ ಮೀಟರ್ ದೂರದಲ್ಲಿ ಇನ್ನೊಂದು ಶಾಲೆಯಿರುವುದು ಒಂದು ಕಾರಣವಾದರೆ, ಪುಣ್ಕೆದಡಿ ಊರಿನಲ್ಲಿ ಮಕ್ಕಳೇ ಸಂಖ್ಯೆ ಕಡಿಮೆಯಿರುವುದು ಇನ್ನೊಂದು ಕಾರಣ.

ಬಸ್ ಸಂಚಾರವಿಲ್ಲ

ಈಗ ಬರುವ ಎಂಟು ವಿದ್ಯಾರ್ಥಿಗಳೂ ತೀರಾ ಗ್ರಾಮೀಣ ಭಾಗದ ವಿದ್ಯಾರ್ಥಿಗಳಾಗಿದ್ದು, ಸುಮಾರು 2 ಕಿ.ಮೀ. ದೂರದಿಂದ ನಡೆದುಕೊಂಡೇ ಬರುತ್ತಾರೆ. ಈ ಶಾಲೆಗೆ ರಸ್ತೆ ಮಾರ್ಗವಿದ್ದರೂ ಇಲ್ಲಿನ ಸಮೀಪದ ಅಗರಗುಂಡಿವರೆಗೆ ಮಾತ್ರ ಬಸ್ ಬರುತ್ತವೆ. ಬಳಿಕ ಇಲ್ಲಿಂದ ನಡೆದುಕೊಂಡೇ ಶಾಲೆಗೆ ಹೋಗಬೇಕಾದ ಪರಿಸ್ಥಿತಿ. ಈ ಕಾರಣದಿಂದಲೇ ಶಿಕ್ಷಕರೂ ಕೂಡಾ ಸ್ವಲ್ಪ ಹಿಂದೇಟು ಹಾಕುತ್ತಿದ್ದಾರೆ.

ಪ್ರಸ್ತುತ ಶಾಲೆಯಲ್ಲಿ ಇಬ್ಬರು ಶಿಕ್ಷಕರಿದ್ದಾರೆ. ಶಾಲೆಯಲ್ಲಿನ ಕೊಠಡಿಗಳ ನೆಲಕ್ಕೆ ಟೈಲ್ಸ್ ಹಾಕಲಾಗಿದ್ದು, ಕೆಲವೊಂದು ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಬೇರೆ ಸರಕಾರಿ ಶಾಲೆಗಳಿಗೆ ಹೋಲಿಸಿದರೆ ಬಸ್ ಸೌಕರ್ಯ ಒಂದನ್ನು ಬಿಟ್ಟು ಯಾವುದೇ ಕೊರತೆ ಇಲ್ಲ.

ಈ ಊರಿನಲ್ಲಿ ಮಕ್ಕಳ ಸಂಖ್ಯೆಯು ತೀರಾ ಕಡಿಮೆ. ಶಾಲೆಗೆ ಬಸ್ ಸಂಚಾರವಿಲ್ಲದಿರುವುದರಿಂದ ವಿದ್ಯಾರ್ಥಿಗಳು ಸುಮಾರು 2 ಕಿ.ಮೀ. ದೂರದಿಂದಲೇ ನಡೆದುಕೊಂಡು ಬರುವ ಪರಿಸ್ಥಿತಿ. ಶಾಲೆಗೆ ಮಕ್ಕಳನ್ನು ಹೆಚ್ಚಿಸಲು, ವಾಹನದ ವ್ಯವಸ್ಥೆ ಕಲ್ಪಿಸಲು ಎಸ್‌ಡಿಎಂಸಿ ಸಮಿತಿಯಲ್ಲಿ ಅನುಕೂಲಸ್ಥರಿಲ್ಲ.

-ರಫೀಕ್, ಎಸ್‌ಡಿಎಂಸಿ ಅಧ್ಯಕ್ಷರು,

ಒಂದು ವೇಳೆ ವಿದ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆಯಾದರೆ ಪುಣ್ಕೆದಡಿ ಸರಕಾರಿ ಶಾಲೆಗೆ ಹತ್ತಿರದ ಶಾಲೆಯ ವಿದ್ಯಾರ್ಥಿಗಳನ್ನು ಕಳುಹಿಸಿ ಶಿಕ್ಷಣದ ವ್ಯವಸ್ಥೆ ಮಾಡಲಾಗುವುದು. ಹೀಗಿರುವಾಗ ಶಾಲೆ ಮುಚ್ಚುವ ಪ್ರಶ್ನೆಯೇ ಬರಲ್ಲ.
-ಜ್ಞಾನೇಶ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X