Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯೋಜನೆ ಅನುಷ್ಠಾನದಲ್ಲಿ ನಾಗರಿಕರ...

ಯೋಜನೆ ಅನುಷ್ಠಾನದಲ್ಲಿ ನಾಗರಿಕರ ಸಹಭಾಗಿತ್ವ ಅಗತ್ಯ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ5 Jan 2020 4:53 PM IST
share
ಯೋಜನೆ ಅನುಷ್ಠಾನದಲ್ಲಿ ನಾಗರಿಕರ ಸಹಭಾಗಿತ್ವ ಅಗತ್ಯ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಜ. 5: ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಪೂರ್ವದಲ್ಲಿ ಸ್ಥಳೀಯ ಜನರ ಅಭಿಪ್ರಾಯಗಳನ್ನು ಸಹ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರವಿವಾರ ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.

ಸಚಿವರು ನೆಹರು ಕ್ರೀಡಾಂಗಣ, ಜಯನಗರ ಕನ್ಸರ್ವೆನ್ಸಿ ಕಾಮಗಾರಿ, ರಾಜೇಂದ್ರ ನಗರ ಚಾನೆಲ್ ಬಳಿಯ ಕಾಮಗಾರಿ, ವಿನಾಯಕ ಪಾರ್ಕ್ ಬಸವನಗುಡಿ ಮತ್ತು ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ ಡಿಜಿಟಲ್ ಲೈಬ್ರರಿ ಯೋಜನೆ ಅನುಷ್ಠಾನದ ಪರಿಶೀಲನೆ ನಡೆಸಿದರು.

ಕಾಮಗಾರಿ ಅನುಷ್ಠಾನ ಪೂರ್ವದಲ್ಲಿ ಮತ್ತು ಅನುಷ್ಟಾನದ ವೇಳೆ ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರೊಂದಿಗೆ ಚರ್ಚಿಸಿ ಯೋಜನೆ ರೂಪಿಸಬೇಕು. ಸ್ಥಳೀಯ ಅಭಿಪ್ರಾಯಗಳನ್ನು ಸ್ವೀಕರಿಸಿದ ಬಳಿಕ ಕಾಮಗಾರಿ ಆರಂಭಿಸಿದರೆ ಜನರಿಗೆ ಉಪಯೋಗಕರವಾದ ರೀತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಿದೆ. ಆರಂಭದಲ್ಲಿ ಕುಂಟುತ್ತಾ ಸಾಗುತ್ತಿದ್ದ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳು ಕಳೆದ 6ತಿಂಗಳಿನಿಂದ ಚುರುಕಿನಿಂದ ನಡೆಯುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಟೆಂಡರ್ ಪ್ರಕ್ರಿಯೆ ಆದಷ್ಟು ಬೇಗನೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಲು ತಿಳಿಸಲಾಗಿದೆ. ನಗರದ ಮಧ್ಯ ಭಾಗದಲ್ಲಿ ಹರಿದು ಹೋಗಿರುವ ಚಾನೆಲ್‍ಗಳನ್ನು ಸ್ವಚ್ಛಗೊಳಿಸುವ ಕುರಿತು ಜಿಲ್ಲಾಧಿಕಾರಿ ಅವರು ಮೂರು ದಿನಗಳ ಒಳಗಾಗಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಸಭೆ ಕರೆದು ಕ್ರಮ ಕೈಗೊಳ್ಳುವರುಎಂದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಸುಮಾರು 20ಸಾವಿರ ಎಲ್‍ಇಡಿ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಟೆಂಡರ್ ಹಂತದಲ್ಲಿದೆ. ಇದರ ಸರಿಯಾದ ನಿರ್ವಹಣೆಗೂ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಅಹವಾಲು ಸಲ್ಲಿಕೆ: ಸಚಿವರು ನೆಹರು ಕ್ರೀಡಾಂಗಣದಲ್ಲಿ ಕಾಮಗಾರಿ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ನಾಗರಿಕರು ಹಲವು ಬೇಡಿಕೆಗಳನ್ನು ಮುಂದಿರಿಸಿದರು. ಕ್ರೀಡಾಂಗಣದಲ್ಲಿ ಸರಿಯಾದ ಶೌಚಾಲಯ ವ್ಯವಸ್ಥೆ ಮಾಡಬೇಕು. ಬೆಳಕಿನ ವ್ಯವಸ್ಥೆ, ಅಗತ್ಯವಿರುವ ಎಲ್ಲಾ ಕಡೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾಂಗಣವನ್ನು ಸುಸ್ಥಿತಿಯಲ್ಲಿರಿಸಲು ಕ್ರಮ, ಪಾರ್ಕಿಂಗ್ ಪ್ರತ್ಯೇಕ ವ್ಯವಸ್ಥೆ ಸೇರಿದಂತೆ ಹಲವು ಬೇಡಿಕೆಗಳನ್ನು ಸಚಿವರ ಮುಂದಿರಿಸಿದರು. ಕ್ರೀಡಾಳುಗಳೊಂದಿಗೆ ಸಮಾಲೋಚನೆ ನಡೆಸಿ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವಂತೆ ಸಚಿವರು ಸೂಚನೆ ನೀಡಿದರು.

ಡಿಜಿಟಲ್ ಲೈಬ್ರರಿ ಉತ್ತಮ ಯೋಜನೆಯಾಗಿದ್ದು, ಶಾಲಾ ಕಾಲೇಜು ಮಕ್ಕಳಿಗೆ ಅತ್ಯಂತ ಉಪಯುಕ್ತವಾಗಿದೆ. ಶಿಕ್ಷಣ ಸಚಿವರಿಂದ ಈ ಯೋಜನೆಯನ್ನು ಅಧಿಕೃತವಾಗಿ ಉದ್ಘಾಟಿಸಲು ಸಮಯ ನಿಗದಿಪಡಿಸುವಂತೆ ಸಚಿವರು ತಿಳಿಸಿದರು.

ಇದಕ್ಕೂ ಮೊದಲು ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಆಯುಕ್ತ ಚಿದಾನಂದ ವಟಾರೆ ಅವರು ಯೋಜನೆ ಅನುಷ್ಠಾನದ ಬಗ್ಗೆ ಸಚಿವರಿಗೆ ಮಾಹಿತಿ ಒದಗಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಉಪ ಮೇಯರ್ ಚನ್ನಬಸಪ್ಪ, ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಳ್ಳಿ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X