Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಾಲನಾ ಪರವಾನಿಗೆ ಮುನ್ನ ರಸ್ತೆ ಸುರಕ್ಷತೆ...

ಚಾಲನಾ ಪರವಾನಿಗೆ ಮುನ್ನ ರಸ್ತೆ ಸುರಕ್ಷತೆ ಬಗ್ಗೆ ತರಬೇತಿ ಅಗತ್ಯ: ಜಿಲ್ಲಾಧಿಕಾರಿ ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ5 Jan 2020 10:13 PM IST
share
ಚಾಲನಾ ಪರವಾನಿಗೆ ಮುನ್ನ ರಸ್ತೆ ಸುರಕ್ಷತೆ ಬಗ್ಗೆ ತರಬೇತಿ ಅಗತ್ಯ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಜ.5: ಅಂಕಿ ಅಂಶಗಳ ಪ್ರಕಾರ ಶೇ.78ರಷ್ಟು ಅಪಘಾತಗಳಿಗೆ ವಾಹನ ಚಾಲಕರೆ ಕಾರಣವಾಗಿದ್ದು, ಸಾರಿಗೆ ಇಲಾಖೆಯ ಮೂಲಕ ವಾಹನ ಚಾಲನಾ ಪರವಾನಗಿ ನೀಡುವ ಮೊದಲು ಚಾಲಕರಿಗೆ ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳ ಪಾಲನೆ ಕುರಿತು ವಿವರವಾದ ತರಬೇತಿ ನೀಡಬೇಕು. ಆ ಮೂಲಕ ಅಪಘಾತ ಪ್ರಕರಣಗಳು ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯಲ್ಲಿರುವ ಉಡುಪಿ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಅಪಘಾತದಿಂದ ಮರಣ ಹೊಂದುವ ವ್ಯಕ್ತಿಯ ಕುಟುಂಬ ಎದುರಿಸುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ಇಲ್ಲದವರು ಹಾಗೂ ವಾಹನ ಚಾಲನೆಗೆ ಸೂಕ್ತ ಅರ್ಹತೆ ಇಲ್ಲದ ವ್ಯಕಿಗಳು ಚಾಲನಾ ಪರವಾನಗಿ ಪಡೆಯುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯ ಅಪಘಾತಗಳು ಸಂಭವಿಸುತ್ತಿವೆ. ಇದನ್ನು ತಪ್ಪಿಸಲು ಚಾಲನಾ ಪರವಾನಗಿಗೆ ಅರ್ಜಿ ಸಲ್ಲಿಸುವ ಅ್ಯರ್ಥಿಗಳಿಗೆ ಸುರಕ್ಷಿತ ಸಂಚಾರಿ ನಿಯಮಗಳ ಪಾಲನೆ ವಿವರವಾದ ಮಾಹಿತಿಯನ್ನು ಹಾಗೂ ಅಪಘಾತದಿಂದ ಮರಣ ಹೊಂದುವ ಕುಟುಂಬಗಳು ಎದುರಿಸಬಹುದಾದ ಸಂಕಷ್ಟಗಳ ಕುರಿತು ಅರಿವು ಮೂಡಿಸಬೇಕು ಎಂದರು.

ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಅಧಿಕಾರಿಗಳ ಕೊರತೆ ಇದೆ. ಆದರೂ ಸಹ ಸುರಕ್ಷಿತ ಸಂಚಾರ ನಿಯಮಗಳ ಪಾಲನೆ ಕುರಿತು ಮಾಹಿತಿ ನೀಡಲು, ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಹೊರಗುತ್ತಿಗೆ ಆಧಾರದಲ್ಲಿ ಸೂಕ್ತ ಅ್ಯರ್ಥಿ ಯನ್ನು ನೇಮಕ ಮಾಡಿಕೊಂಡು ಮಾಹಿತಿ ನೀಡಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ, ಆ ಪ್ರದೇಶದಲ್ಲಿ ಸೂಕ್ತ ಎಚ್ಚರಿಕಾ ಕ್ರಮಗಳನ್ನು ಅಳವಡಿಸುವ ಕುರಿತು ಕ್ರಿಯಾ ಯೋಜನೆ ರೂಪಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಮತ್ತು ಅಗತ್ಯವಿರುವಲ್ಲಿ ಜೀಬ್ರಾ ಕ್ರಾಸ್ ಅಳವಡಿಸಲು ಸೂಚಿಸಲಾಗಿದೆ. ಮೀನುಗಾರಿಕಾ ವಾಹನಗಳು ರಸ್ತೆ ಯಲ್ಲಿ ನೀರು ಚೆಲ್ಲಿದರೆ ದಂಡ ವಿಧಿಸುವುದರ ಜೊತೆಗೆ ಅವರು ಆ ನೀರನ್ನು ಸೂಕ್ತ ಪ್ರದೇಶದಲ್ಲಿ ವಿಸರ್ಜಿಸಲು ಸ್ಥಳ ನಿಗಧಿಪಡಿಸೇಕಾಗಿದೆ ಎಂದು ಅವರು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ಕೆಎಂಸಿಯ ಡಾ.ಕೃಷ್ಣ ಪ್ರಸಾದ್ ಮಾತನಾಡಿ, ಮಾನವ ತಪ್ಪಿನಿಂದಲೇ ಹೆಚ್ಚಿನ ಅಪಘಾತ ಗಳು ಸಂಭವಿಸುತ್ತಿದ್ದು, ದೇಶದಲ್ಲಿ ಪ್ರತಿ ವರ್ಷ ಇತರೆ ಕಾರಣಗಳಿಂದ ಮರಣ ಹೊಂದುವವರಿಗಿಂತ ಅಪಘಾತದಿಂದ ಮರಣ ಹೊಂದುವವರ ಸಂಖ್ಯೆ ಅಧಿಕವಾಗಿದೆ. ಇದರಲ್ಲಿ 18-35 ವರ್ಷದ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮರಣ ಹೊಂದುತ್ತಿ ದ್ದಾರೆ. ಇದರಿಂದ ಇಡೀ ಕುಟುಂಬ ಆಧಾರಸ್ಥಂವನ್ನು ಕಳೆದುಕೊಳ್ಳುವಂತಾ ಗಿದೆ, ಯುವಜನತೆ ಈ ಬಗ್ಗೆ ಎಚ್ಚೆತುತಿಕೊಳ್ಳಬೇಕಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಬಸ್ ಮಾಲಕರು, ಆಟೋ ಮತ್ತು ಟ್ಯಾಕ್ಸಿ ಸಂಘಟನೆಗಳ ಪದಾಧಿಕಾರಿ ಗಳು, ಖಾಸಗಿ ಶಾಲೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಅಪಘಾತ ಕಡಿಮೆ, ಸಾವು ಅಧಿಕ !

ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ಕಡಿಮೆಯಾಗಿದ್ದರೂ ಅದರಿಂದ ಮರಣ ಹೊಂದುವವರ ಸಂಖ್ಯೆ ಅಧಿಕವಾಗಿದೆ. 2017ರಲ್ಲಿ 231 ಅಪಘಾತ ದಲ್ಲಿ 225, 2018ರಲ್ಲಿ 218 ಅಪಘಾತದಲ್ಲಿ 228 ಮತ್ತು 2019ರಲ್ಲಿ 246 ಅಪಘಾತದಲ್ಲಿ 259 ಮಂದಿ ಮೃತಪಟ್ಟಿದ್ದಾರೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ತಿಳಿಸಿದರು.

ಅಪಘಾತಗಳಲ್ಲಿ ಮೃತಪಟ್ಟವರ ಪೈಕಿ ಯುವ ಜನತೆಯೇ ಅಧಿಕವಾಗಿದ್ದಾರೆ. ಅಪ್ರಾಪ್ತರು ವಾಹನ ಚಲಾಯಿಸಿದರೆ, ಅವರ ಪೋಷಕರಿಗೂ ಶಿಕ್ಷೆ ವಿಧಿಸಲು ಕಾನೂನಿಲ್ಲಿ ಅವಕಾಶ ಇದೆ. ಕೇವಲ ದಂಡ ವಿಧಿಸುವುದರಿಂದ ಮಾತ್ರವೇ ಅಪಘಾತಗಳನ್ನು ಕಡಿಮೆಗೊಳಿಸಲು ಸಾಧ್ಯವಿಲ್ಲ. ಸ್ವಯಂ ಪ್ರೇರಿತವಾಗಿ ಕಾನೂನು ಮತ್ತು ಸುರಕ್ಷತಾ ನಿಯಮ ಪಾಲಿಸುವುದರಿಂದ ಅಪಘಾತ ನಿಯಂತ್ರಿಸಬಹುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X