Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ತಲೆ ತಂದವರಿಗೆ 575 ಕೋಟಿ...

ಟ್ರಂಪ್ ತಲೆ ತಂದವರಿಗೆ 575 ಕೋಟಿ ರೂಪಾಯಿ: ಇರಾನ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ6 Jan 2020 7:22 PM IST
share
ಟ್ರಂಪ್ ತಲೆ ತಂದವರಿಗೆ 575 ಕೋಟಿ ರೂಪಾಯಿ: ಇರಾನ್ ಘೋಷಣೆ

ಟೆಹರಾನ್ (ಇರಾನ್), ಜ. 6: ಕಳೆದ ವಾರ ಇರಾನ್ ಸೇನಾಧಿಕಾರಿ ಜನರಲ್ ಕಾಸಿಮ್ ಸುಲೈಮಾನಿ ಸಾವಿಗೆ ಕಾರಣವಾದ ವಾಯು ದಾಳಿಯನ್ನು ನಡೆಸುವಂತೆ ಆದೇಶಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ತಲೆ ತಂದವರಿಗೆ 80 ಮಿಲಿಯ ಡಾಲರ್ (ಸುಮಾರು 575 ಕೋಟಿ ರೂಪಾಯಿ) ಬಹುಮಾನವನ್ನು ಇರಾನ್ ಘೋಷಿಸಿದೆ.

ರವಿವಾರ ನಡೆದ ಸುಲೈಮಾನಿಯವರ ಅಂತ್ಯಸಂಸ್ಕಾರದ ವೇಳೆ, ಸರಕಾರಿ ಸುದ್ದಿ ಚಾನೆಲ್‌ಗಳಲ್ಲಿ ಈ ಘೋಷಣೆಯನ್ನು ಮಾಡಲಾಗಿದೆ. ಟ್ರಂಪ್‌ರನ್ನು ಕೊಲ್ಲುವುದಕ್ಕಾಗಿ ಪ್ರತಿಯೊಬ್ಬ ಇರಾನ್ ಪ್ರಜೆಗೆ ಒಂದು ಡಾಲರ್‌ನಂತೆ (ಸುಮಾರು 72 ರೂಪಾಯಿ) ಮೊತ್ತವನ್ನು ತೆಗೆದಿಡಲಾಗುವುದು ಹಾಗೂ ಅಮೆರಿಕ ಅಧ್ಯಕ್ಷರನ್ನು ಕೊಂದವರಿಗೆ ಈ ಹಣವನ್ನು ನೀಡಲಾಗುವುದು ಎಂಬುದಾಗಿ ಘೋಷಿಸಲಾಗಿದೆ ಎಂದು ಮಿರರ್.ಕೊ.ಯುಕೆ ವರದಿಯೊಂದರಲ್ಲಿ ತಿಳಿಸಿದೆ.

‘‘ಇರಾನ್‌ನಲ್ಲಿ 80 ಮಿಲಿಯ (8 ಕೋಟಿ) ನಿವಾಸಿಗಳಿದ್ದಾರೆ. ಇರಾನ್ ಜನಸಂಖ್ಯೆಯ ಆಧಾರದಲ್ಲಿ ನಾವು 80 ಮಿಲಿಯ ಡಾಲರ್ ಹಣವನ್ನು ತೆಗೆದಿಡುತ್ತೇವೆ. ಅದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರನ್ನು ಕೊಂದವರಿಗೆ ಕೊಡುತ್ತೇವೆ’’ ಎಂಬುದಾಗಿ ಘೋಷಿಸಲಾಗಿದೆ.

ಜನವರಿ 3ರಂದು ಇರಾಕ್ ರಾಜಧಾನಿ ಬಗ್ದಾದ್‌ನ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸೇನಾ ವಾಹನಗಳ ಸಾಲಿನ ಮೇಲೆ ಅಮೆರಿಕದ ಡ್ರೋನ್‌ಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲೂಶನ್ ಗಾರ್ಡ್ಸ್ ಕಾರ್ಪ್ಸ್‌ಗೆ ಸೇರಿದ ಖುದ್ಸ್ ಫೋರ್ಸ್‌ನ ಮುಖ್ಯಸ್ಥ ಸುಲೈಮಾನಿ ಸೇರಿದಂತೆ ಇರಾನ್ ಮತ್ತು ಇರಾಕ್‌ನ ಹಲವು ಸೇನಾಧಿಕಾರಿಗಳು ಸಾವಿಗೀಡಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X