ಉಡುಪಿ ಪರ್ಯಾಯಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸೌಲಭ್ಯ

ಉಡುಪಿ, ಜ.6:ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವವನ್ನು ನಾಡಹಬ್ಬದಂತೆ ಆಚರಿಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ಮತ್ತು ಅಗತ್ಯ ಸೌಲ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ಪರ್ಯಾಯ ಸಂಬಂಧ ನಡೆದ ಸಬೆಯಲ್ಲಿ ಅವರು ಮಾತನಾಡುತಿದ್ದರು. ಜ.17-18 ರಂದು ಕೃಷ್ಣ ಮಠದ ಪರ್ಯಾಯ ಮಹೋತ್ಸವ ನಡೆಯಲಿದ್ದು, ಪರ್ಯಾಯ ಮಹೋತ್ಸವ ದಲ್ಲಿ ಸುಮಾರು 3 ಲಕ್ಷ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ನೈರ್ಮಲ್ಯ ಮತ್ತು ಘನ ತ್ಯಾಜ್ಯ ವಸ್ತು ವಿಲೇವಾರಿಯ ಉಸ್ತುವಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರು ನಗರಸಬೆ ಅಧಿಕಾರಿಗಳಿಗೆ ಸೂಚಿಸಿದರು.
ಪರ್ಯಾಯ ಮಹೋತ್ಸವ ಸಂದರ್ದಲ್ಲಿ ರಥಬೀದಿ ಅಕ್ಕಪಕ್ಕದ ಪ್ರದೇಶ ಗಳಲ್ಲಿಯೂ ಸ್ವಚ್ಛತೆ ಕಾಪಾಡಬೇಕು. ಕೆಎಸ್ಅರ್ಟಿಸಿ ಬಸ್ ನಿಲ್ದಾಣ, ಸರ್ವಿಸ್ ಮತ್ತು ಸಿಟಿ ಬಸ್ ನಿಲ್ದಾಣ, ಶ್ರೀಕೃಷ್ಣ ಮಠದ ವಾಹನಗಳ ನಿಲುಗಡೆ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳಿದ್ದು, ಸಾರ್ವಜನಿಕರ ಓಡಾಟ ಇರುವ ಇನ್ನು ಕೆಲವು ಸ್ಥಳಗಳಲ್ಲಿ ತಾತ್ಕಾಲಿಕವಾದ ಶೌಚಾಲಯಗಳನ್ನು ನಿರ್ಮಿಸ ಬೇಕು. ಬೀದಿದೀಪಗಳ ಸರಿಪಡಿಸುವಿಕೆ, ರಸ್ತೆ ದುರಸ್ತಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಶಾಸಕ ರಘುಪತಿ ಭಟ್ ಮಾತನಾಡಿ, ಪರ್ಯಾಯ ಸಂದರ್ದಲ್ಲಿ ರಥಬೀದಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಸುಮಾರು 80 ಕಾರ್ಮಿಕರನ್ನು ಹೆಚ್ಚುವರಿಯಾಗಿ ಬಳಸಿಕೊಳ್ಳಲಾಗುವುದು. ಪರ್ಯಾಯ ಮೆರವಣಿಗೆ ಸಂದರ್ದಲ್ಲಿ ನಾಡಿನ ಕಲೆ, ಸಂಸ್ಕೃತಿ ಬಿಂಬಿಸುವ ಸ್ಥಬ್ಧ ಚಿತ್ರಗಳನ್ನು ವಿವಿಧ ಇಲಾಖೆಗಳು ಬಳಸಿಕೊಳ್ಳುವಂತೆ ಸೂಚಿಸಿದರು.
ಈಗಾಗಲೇ ಉಡುಪಿ ನಗರ ಪ್ರವೇಶಿಸುವ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದ್ದು, ಅಗತ್ಯ ಇರುವ ಕಡೆ ಬೀದಿ ದೀಪಗಳ ದುಸ್ತಿ, ತಾತ್ಕಾಲಿಕ ಶೌಚಾಲಯ ನಿರ್ಮಿಸಲಾಗುವುದು ಎಂದು ಶಾಸಕರು ತಿಳಿಸಿದರು. ಉಡುಪಿ ಪರ್ಯಾಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ನಿರ್ಮ ಸೀತಾರಾಮನ್ ಸೇರಿದಂತೆ ವಿವಿಧ ಗಣ್ಯರು ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.
ಸಭೆಯಲ್ಲಿ ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ನಗರಸಬೆ ಆಯುಕ್ತ ಆನಂದ್ ಕಲ್ಲೋಲ್ಕರ್, ಎಂ.ಬಿ ಪುರಾಣಿಕ್ ಮತ್ತಿತರರು ಉಪಸ್ಥಿತರಿದ್ದರು.







