Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾನಮತ್ತ ಗೂಂಡಾಗಳು ನನಗೆ ಥಳಿಸಿದರು:...

ಪಾನಮತ್ತ ಗೂಂಡಾಗಳು ನನಗೆ ಥಳಿಸಿದರು: ಜೆಎನ್‌ಯುನ ಅಂಧ ವಿದ್ಯಾರ್ಥಿಯ ಅಳಲು

ವಾರ್ತಾಭಾರತಿವಾರ್ತಾಭಾರತಿ6 Jan 2020 10:15 PM IST
share
ಪಾನಮತ್ತ ಗೂಂಡಾಗಳು ನನಗೆ ಥಳಿಸಿದರು: ಜೆಎನ್‌ಯುನ ಅಂಧ ವಿದ್ಯಾರ್ಥಿಯ ಅಳಲು

ಹೊಸದಿಲ್ಲಿ,ಜ.6: ರವಿವಾರ ಜೆಎನ್‌ಯು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ನಡೆದ ಹಲ್ಲೆ ಕ್ರೂರ ಮಾತ್ರವಲ್ಲ, ಸಂವೇದನಾಶೂನ್ಯವೂ ಆಗಿತ್ತು. ಮಾರಕಾಸ್ತ್ರಗಳಿಂದ ಸಜ್ಜಾಗಿದ್ದ ಮುಸುಕುಧಾರಿ ಗೂಂಡಾಗಳು ಹಾಸ್ಟೆಲ್‌ನಲ್ಲಿ ವಾಸವಿರುವ ಅಂಧ ಸಂಶೋಧನಾ ವಿದ್ಯಾರ್ಥಿ ಸೂರ್ಯಪ್ರಕಾಶರನ್ನೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ತಾನು ಅಂಧ ಎಂದು ಪರಿಪರಿಯಾಗಿ ಹೇಳಿಕೊಂಡರೂ ಅದನ್ನು ಲೆಕ್ಕಿಸದೆ ಮೈತುಂಬ ಹೊಡೆತಗಳನ್ನು ನೀಡಿದ್ದಾರೆ.

 ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ತನ್ನ ಭಯಾನಕ ಅನುಭವವನ್ನು ಹೇಳಿಕೊಂಡ ಸೂರ್ಯಪ್ರಕಾಶ,‘ ದೊಡ್ಡ ಗುಂಪೊಂದು ಘೋಷಣೆಗಳನ್ನು ಕೂಗುತ್ತ ಕ್ಯಾಂಪಸ್ ಪ್ರವೇಶಿಸಿತ್ತು. ನನ್ನ ರೂಮನ್ನು ಒಳಗಿನಿಂದ ಭದ್ರಪಡಿಸಲಾಗಿತ್ತು. ಬಾಗಿಲು ತೆರೆಯುವಂತೆ ಕೂಗುತ್ತಿದ್ದ ಅವರು ಅದನ್ನು ಬಲವಾಗಿ ಬಡಿಯುತ್ತಿದ್ದರು. ಅವರು ರೂಮಿನ ಎಲ್ಲ ಕಿಟಕಿಗಳ ಗಾಜುಗಳನ್ನು ಒಡೆದಿದ್ದರು. ಕೆಲವು ಗಾಜಿನ ಚೂರುಗಳು ನನ್ನ ತಲೆಗೆ ಬಡಿದಿದ್ದವು,ಆದರೆ ನಾನು ಟೊಪ್ಪಿಗೆ ಧರಿಸಿದ್ದರಿಂದ ಗಾಯಗಳಾಗಲಿಲ್ಲ. ಕೊನೆಗೂ ಅವರು ಬಾಗಿಲು ಒಡೆದು ರೂಮನ್ನು ಪ್ರವೇಶಿಸಿದ್ದರು. ನಾನು ಅಂಧ,ದಯವಿಟ್ಟು ನನ್ನನ್ನು ಬಿಡಿ ಎಂದು ಕೋರಿಕೊಂಡರೂ ಸುಳ್ಳು ಹೇಳುತ್ತಿದ್ದೇನೆ ಎಂದು ಅವರು ಜರಿದಿದ್ದರು. ಅವರು ಅತಿಯಾಗಿ ಮದ್ಯಪಾನ ಮಾಡಿದ್ದರು. ನಮಗೆ ಪಾಠವನ್ನು ಕಲಿಸುವುದಾಗಿ ಅವರು ಹೇಳುತ್ತಿದ್ದರು. ಕಬ್ಬಿಣದ ಸರಳುಗಳನ್ನು ಹಿಡಿದಿದ್ದ ಅವರು ನನ್ನ ರೂಮಿನಲ್ಲಿದ್ದ ಎಲ್ಲ ವಸ್ತುಗಳನ್ನೂ ಒಡೆದುಹಾಕಿದ್ದಾರೆ. ನನ್ನ ಶರೀರದ ತುಂಬೆಲ್ಲ ಗಾಯಗಳಾಗಿವೆ ’ಎಂದು ಹೇಳಿದರು.

ಪೊಲೀಸರೂ ಸಹಕರಿಸಲಿಲ್ಲ ಮತ್ತು ಹಾಸ್ಟೆಲ್‌ನಿಂದ ಏಮ್ಸ್‌ಗೆ ತೆರಳಲು ತನಗೆ ನೆರವಾದವರನ್ನು ಅವರು ಬೆದರಿಸಿದ್ದರು. ವಿವಿ ಸಿಬ್ಬಂದಿಗಳೂ ವಿದ್ಯಾರ್ಥಿಗಳ ನೆರವಿಗೆ ಬಂದಿರಲಿಲ್ಲ ಎಂದು ಸೂರ್ಯಪ್ರಕಾಶ ಆರೋಪಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡದಂತೆ ತನಗೆ ಬೆದರಿಕೆ ಕರೆಗಳು ಬರುತ್ತಿವೆ. ಭವಿಷ್ಯದಲ್ಲಿ ಯಾರಿಗೂ ಇಂತಹ ಗೂಂಡಾಗಳನ್ನು ಎದುರಿಸುವ ಸ್ಥಿತಿ ಬರದಿರಲಿ ಎಂದು ತಾನು ಹಾರೈಸುತ್ತೇನೆ. ಇಂತಹ ಭೀತಿ ತುಂಬಿದ ವಾತಾವರಣದಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.

Surya Prakash, a visually impaired student who was attacked by the mob on Sunday inside his room at Sabarmati hostel in #JNU, narrates his ordeal #JNUattack pic.twitter.com/W6ZWV8LH1B

— Rahiba R. Parveen (@RahibaParveen) January 6, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X