ಕರಾಟೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಂಟ್ವಾಳ, ಜ. 6: ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ವಿದ್ಯಾರ್ಥಿನಿಯರಾದ ಸಹನಾ ಶೆಟ್ಟಿ ಮತ್ತು ಸೋನಿ ಶೆಟ್ಟಿ ಅವರು ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಕರಾಟೆ ಟೂರ್ನಮೆಂಟ್ಗೆ ಆಯ್ಕೆಯಾಗಿರುತ್ತಾರೆ.
ಜ. 8ರಿಂದ ಚೆನ್ನೈಯ ಸತ್ಯಭಾಮಾ ವಿಶ್ವವಿದ್ಯಾನಿಲಯದಲ್ಲಿ ಈ ಟೂರ್ನಮೆಂಟ್ ನಡೆಯಲಿದ್ದು, ಕಾಲೇಜಿನ ಈ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
Next Story





