Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್ ಯುನಲ್ಲಿ ಗೂಂಡಾ ದಾಳಿ: ಲಾಠಿ...

ಜೆಎನ್ ಯುನಲ್ಲಿ ಗೂಂಡಾ ದಾಳಿ: ಲಾಠಿ ಹಿಡಿದ ಎಬಿವಿಪಿ ನಾಯಕನ ಫೋಟೊ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ6 Jan 2020 11:34 PM IST
share
ಜೆಎನ್ ಯುನಲ್ಲಿ ಗೂಂಡಾ ದಾಳಿ: ಲಾಠಿ ಹಿಡಿದ ಎಬಿವಿಪಿ ನಾಯಕನ ಫೋಟೊ ಬಹಿರಂಗ

ಹೊಸದಿಲ್ಲಿ, ಜ. 6: ಕನಿಷ್ಠ 34 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಗಾಯಗೊಳ್ಳಲು ಕಾರಣವಾದ ದಿಲ್ಲಿಯ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ರವಿವಾರ ರಾತ್ರಿ ಮುಸುಕುಧಾರಿ ಗೂಂಡಾಗಳು ನಡೆಸಿದ ಹಿಂಸಾಚಾರದ ವೀಡಿಯೊ ಹಾಗೂ ಚಿತ್ರಗಳು ಬಹಿರಂಗವಾಗುತ್ತಿದ್ದು, ಒಂದು ಫೋಟೊದಲ್ಲಿ ಎಬಿವಿಪಿಗೆ ನಂಟು ಇರುವುದು ಕಂಡು ಬಂದಿದೆ.

ಫೋಟೊವೊಂದರಲ್ಲಿ ಎಬಿವಿಪಿಯ ಜೆಎನ್‌ಯು ಕಾರ್ಯಕಾರಿ ಸಮಿತಿಯ ಸದಸ್ಯ ವಿಕಾಸ್ ಪಟೇಲ್ ಎಂದು ಗುರುತಿಸಲಾದ ಯುವಕ ಲಾಠಿ ಹಿಡಿದ 12ಕ್ಕೂ ಅಧಿಕ ಯುವಕರೊಂದಿಗೆ ಇರುವುದು ಕಂಡು ಬಂದಿದೆ. ಪಟೇಲ್ ಫೈಬಲ್ ಗ್ಲಾಸ್‌ನ ಲಾಠಿ ಹಿಡಿದಿದ್ದು, ಇದು ಪೊಲೀಸರ ಲಾಠಿಯಂತೆ ಇದೆ. ಆತನ ಬಳಿಕ ನಿಂತ ನೀಲಿ ಹಾಗೂ ಹಳದಿ ಟೀ ಶರ್ಟ್ ಹಾಕಿಕೊಂಡ ವಿದ್ಯಾರ್ಥಿಯನ್ನು ಶಿವ ಪೂಜನ್ ಮಂಡಲ್ ಎಂದು ಗುರುತಿಸಲಾಗಿದೆ. ಈತ ಜೆಎನ್‌ಯುನ ಬಿ.ಎ. ಮೊದಲ ವರ್ಷದ ವಿದ್ಯಾರ್ಥಿ ಹಾಗೂ ಎಬಿವಿಪಿಯ ಕಾರ್ಯಕರ್ತ. ಜೆಎನ್‌ಯುನಲ್ಲಿ ದಾಳಿ ನಡೆಯುವ ರವಿವಾರ ಮಧ್ಯಾಹ್ನ ಈ ಪೋಟೊ ತೆಗೆಯಲಾಗಿದೆ ಎಂದು ಹೇಳಲಾಗುತ್ತಿದೆ.

ಇತರ ಕೆಲವು ಫೋಟೊಗಳಲ್ಲಿ ಲಾಠಿ ಹೊಂದಿದ ದೊಡ್ಡ ಗುಂಪಿನಲ್ಲಿ ಮಂಡಲ್ ಕಾಣಿಸಿಕೊಂಡಿದ್ದಾನೆ. ಶಸ್ತ್ರ ಗುಂಪು ಕ್ಯಾಂಪಸ್‌ನಿಂದ ರಾತ್ರಿ ಹಿಂದಿರುಗುವ ಸಂದರ್ಭ ದಾಖಲಿಸಿದ ವೀಡಿಯೊದಲ್ಲಿ ಕೂಡ ಮಂಡಲ್ ಕಾಣಿಸಿಕೊಂಡಿದ್ದಾನೆ. ಪಟೇಲ್ ಹಾಗೂ ಮಂಡಲ್ ತಮ್ಮ ಸಾಮಾಜಿಕ ಮಾಧ್ಯಮದ ಖಾತೆಯನ್ನು ಅಳಿಸಿದ್ದಾರೆ. ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಡಪಂಥೀಯ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸುವ ಕುರಿತು ಎಬಿವಿಪಿ ಸದಸ್ಯರ ವ್ಯಾಟ್ಸ್‌ಆ್ಯಪ್ ಗುಂಪಿನಲ್ಲಿ ನಡೆದ ಚರ್ಚೆಯಲ್ಲಿ ಪಟೇಲ್ ನಂಬರ್ ಇರುವ ಸ್ಕ್ರೀನ್ ಶಾಟ್ ಬಹಿರಂಗವಾಗಿದೆ. ವ್ಯಾಟ್ಸ್‌ಆ್ಯಪ್‌ನ ಇತರ ಸಂಭಾಷಣೆಗಳಲ್ಲಿ ಜೆಎನ್‌ಯುನ ಸಂಸ್ಕೃತ ವಿದ್ಯಾರ್ಥಿ ಯೋಗೇಂದ್ರ ಭಾರಧ್ವಾಜ್, ಪಿಎಚ್‌ಡಿ ವಿದ್ಯಾರ್ಥಿ ಸಂದೀಪ್ ಸಿಂಗ್ ಒಳಗೊಂಡಿರುವ ಸ್ಕ್ರೀನ್ ಶಾಟ್ ಕೂಡ ಬೆಳಕಿಗೆ ಬಂದಿದೆ. ಸಾಮಾಜಿಕ ಮಾಧ್ಯಮದ ಖಾತೆಯನ್ನು ಭಾರಧ್ವಾಜ್ ಅಳಿಸಿದ್ದಾನೆ. ಆದರೆ, ಆತ ಎಬಿವಿಪಿ ಸದಸ್ಯ ಎಂಬುದನ್ನು ಟ್ವಿಟ್ಟರ್ ಪ್ರೊಫೈಲ್‌ನ ಸ್ಕ್ರೀನ್ ಶಾಟ್ ಬಹಿರಂಗಪಡಿಸಿದೆ.

ವ್ಯಾಟ್ಸ್‌ಆ್ಯಪ್ ಸಂಭಾಷಣೆಯಲ್ಲಿ ಭಾರದ್ವಾಜ್ ಕೊನೆಯಲ್ಲಿ ‘‘ಎಡಪಂಥೀಯ ಭಯೋತ್ಪಾದನೆ’’ ಹಾಗೂ ‘‘ನಾವು ಅವರನ್ನು ಹಿಡಿಯಬೇಕು ಹಾಗೂ ಥಳಿಸಬೇಕು’’ ಎಂದು ಹೇಳಿದ್ದಾನೆ.

 ಆದರೆ, ಹಿಂಸಾಚಾರದಲ್ಲಿ ತನ್ನ ಪಾತ್ರ ಇರುವುದನ್ನು ಎಬಿವಿಪಿ ನಿರಾಕರಿಸಿದೆ. ಚಿತ್ರಗಳು ಹಾಗೂ ವ್ಯಾಟ್ಸ್‌ಆ್ಯಪ್ ಸಂದೇಶಗಳನ್ನು ತಿರುಚಲಾಗಿದೆ ಎಂದು ಹೇಳಿದೆ. ಅಲ್ಲದೆ, ಎಡಪಂಥೀಯ ವಿದ್ಯಾರ್ಥಿಗಳು ನಮ್ಮ ಮೇಲೆ ಹಲ್ಲೆ ನಡೆಸಿದರು ಎಂದು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X