Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಪ್ರೀಂ ಕೋರ್ಟ್ ನಿವೃತ್ತ...

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಿಗೆ ಪತ್ರಿಕಾಗೋಷ್ಠಿಗೆ ನಿರಾಕರಣೆ !

► ಮಂಗಳೂರು ಹಿಂಸಾಚಾರ- ಪೊಲೀಸ್ ಗೋಲಿಬಾರ್ ಪ್ರಕರಣ ► ಹೊಟೇಲ್ ಆವರಣದಲ್ಲೇ ಮಾಹಿತಿ ನೀಡಿದ ತಂಡ

ವಾರ್ತಾಭಾರತಿವಾರ್ತಾಭಾರತಿ7 Jan 2020 5:09 PM IST
share
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಿಗೆ ಪತ್ರಿಕಾಗೋಷ್ಠಿಗೆ ನಿರಾಕರಣೆ !

ಮಂಗಳೂರು, ಜ.7: ನಗರದಲ್ಲಿ ನಡೆದ ಹಿಂಸಾಚಾರ ಹಾಗೂ ಪೊಲೀಸ್ ಗೋಲಿಬಾರ್‌ಗೆ ಸಂಬಂಧಿಸಿ ಸತ್ಯಾಂಶದ ಕುರಿತು ವರದಿ ಮಾಡಲು ಬಂದಿದ್ದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡ ನೇತೃತ್ವದ ತಂಡಕ್ಕೆ ಪೊಲೀಸರು ಪತ್ರಿಕಾಗೋಷ್ಠಿ ನಡೆಸಲು ಅವಕಾಶ ನಿರಾಕರಿಸಿದ ಘಟನೆ ನಡೆದಿದೆ.

‘‘ಡಿ.19ರಂದು ನಡೆದ ಘಟನೆಗೆ ಸಂಬಂಧಿಸಿ ಕಳೆದ ಎರಡು ದಿನಗಳಿಂದ ಸತ್ಯ ಶೋಧನೆಯನ್ನು ನಡೆಸುತ್ತಿರುವ ನಮ್ಮ ತಂಡ ಇಂದು ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರಾಥಮಿಕ ವರದಿಯನ್ನು ನೀಡಲು ಮುಂದಾಗಿತ್ತು. ಆದರೆ ಸುಮಾರು ಎಂಟರಿಂದ 10 ಹೊಟೇಲ್‌ಗಳಲ್ಲಿ ಪತ್ರಿಕಾಗೋಷ್ಠಿಗೆ ಅವಕಾಶವನ್ನು ಹೊಟೇಲ್ ಮುಖ್ಯಸ್ಥರ ಮೂಲಕ ಒತ್ತಡ ಹೇರಿ ನಿರಾಕರಿಸಲಾಗಿದೆ. ಪತ್ರಿಕಾಗೋಷ್ಠಿ ನಡೆಸಬೇಕಿದ್ದರೆ ಪೊಲೀಸರಿಂದ ಅನುಮತಿ ಪತ್ರ ಬೇಕು ಎಂಬ ಹೇಳಿಕೆಯನ್ನು ಹೊಟೇಲ್ ಸಿಬ್ಬಂದಿ ತಿಳಿಸಿದ್ದಾರೆ’’ ಎಂದು ಜನತಾ ನ್ಯಾಯಾಲಯ ತಂಡದ ಸದಸ್ಯರಲ್ಲಿ ಓರ್ವರಾದ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ನಗರದ ಹೊಟೇಲೊಂದರ ಆವರಣದಲ್ಲಿ ಮಾಹಿತಿ ನೀಡಿದರು.

‘‘ನಾವು ಯಾರ ಹಕ್ಕನ್ನು ಮುರಿಯಲು ಅಥವಾ ನಿಯಮವನ್ನು ಮೀರಲು ಬಂದಿಲ್ಲ. ಆದರೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರೊಬ್ಬರಿಗೆ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ಸಿಗದಿರುವುದು ಮಾತ್ರ ದುರದೃಷ್ಟಕರ’’ ಎಂದು ಸುಗತ ಬೇಸರಿಸಿದರು.

ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಗೆ ಪತ್ರಿಕಾಗೋಷ್ಠಿ ನಡೆಸಲು ಸ್ವಾತಂತ್ರ ಇಲ್ಲ ಎಂದಾದರೆ, ಇಂತಹ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರ ಪಾಡೇನು ಎನ್ನುವಂತಾಗಿದೆ. ನಿನ್ನೆಯಿಂದ ಜನತಾ ನ್ಯಾಯಾಲಯ ನಡೆಸದಂತೆಯೂ ಹೊಟೇಲ್ ಆಡಳಿತದ ಮೂಲಕ ಒತ್ತಡ ತರಲಾಗಿತ್ತು. ಹಾಗಿದ್ದರೂ ನಮ್ಮ ತಂಡ ಸಾಕಷ್ಟು ಅಹವಾಲುಗಳನ್ನು ಸ್ವೀಕರಿಸಿ, ಮಾಹಿತಿಗಳನ್ನು ರೆಕಾರ್ಡ್ ಮಾಡಿಕೊಂಡಿದೆ. ಸಣ್ಣಪುಟ್ಟ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಮೆಡಿಕೋ -ಲೀಗಲ್ ಸೇರಿದಂತೆ ಫಾರೆನ್ಸಿಕ್ ವರದಿಯನ್ನೂ ಪಡೆಯಲಾಗಿದೆ. ನಮ್ಮದು ಸ್ವತಂತ್ರ ತನಿಖೆ. ನಾವು ಪರಿಸ್ಥಿತಿಯ ಕುರಿತಂತೆ ನಾವೇನು ತೀರ್ಪು ನೀಡುವವರಲ್ಲ. ಜನಪರವಾಗಿ ನಾವು ಏನು ಮಾಡಲು ಸಾಧ್ಯವೋ ಅದನ್ನಷ್ಟೇ ಮಾಡುತ್ತಿದ್ದೇವೆ’’ ಎಂದು ಸುಗತ ಶ್ರೀನಿವಾಸರಾಜು ತಿಳಿಸಿದರು.

ಲಿಸನಿಂಗ್ ಪೋಸ್ಟ್‌ನ ಅಶೋಕ್ ಮರಿದಾಸ್ ಉಪಸ್ಥಿತರಿದ್ದರು.

ಸತ್ಯಾಂಶವನ್ನು ತಿಳಿಯುವುದಷ್ಟೇ ನಮ್ಮ ಉದ್ದೇಶ

‘‘ಕಳೆದ ಎರಡು ದಿನಗಳಲ್ಲಿ ನಾವು ಹಲವಾರು ಸಂತ್ರಸ್ತರಿಂದ ಅಹವಾಲು ಸ್ವೀಕರಿಸಿದ್ದೇವೆ. ಇಂದು ಆಸ್ಪತ್ರೆಗಳಲ್ಲಿ ಗಾಯಾಳು ಗಳನ್ನು ಭೇಟಿ ಮಾಡಿದ್ದೇವೆ. ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರ ಜತೆ ಮಾತನಾಡಿ, ಘಟನಾ ಸ್ಥಳವನ್ನೂ ಪರಿಶೀಲಿಸಿದ್ದೇವೆ. ನಮ್ಮ ತಂಡ ಜನಪರ ಸಂಘಟನೆಯ ಮನವಿಯ ಮೇರೆಗೆ ಇಲ್ಲಿ ಸತ್ಯಾಂಶವನ್ನು ಕಂಡುಕೊಳ್ಳಲು ಮಾತ್ರವೇ ಬಂದಿದ್ದೇವೆ. ನಮ್ಮ ವರದಿ ಯಾವುದೇ ತೀರ್ಪು ಆಗಿರುವುದಿಲ್ಲ. ನಮಗೆ ಇಲ್ಲಿನ ಹೊಟೇಲ್‌ನವರು, ಜನತೆ, ಸ್ಥಳೀಯರು ಎಲ್ಲರೂ ಸಹಕಾರ ನೀಡಿದ್ದಾರೆ. ಎಲ್ಲಾ ದಾಖಲೆ, ಸಾಕ್ಷಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಶೀಘ್ರವೇ ಅಂತಿಮ ವರದಿಯನ್ನು ಪ್ರಕಟಿಸಲಿದ್ದೇವೆ’’

- ಬಿ.ಟಿ.ವೆಂಕೇಶ್, ಹಿರಿಯ ನ್ಯಾಯವಾದಿ.

ಗಾಬರಿಯಿಂದ ಅವಕಾಶ ನಿರಾಕರಿಸಿದಂತಿದೆ

‘‘ನಿವೃತ್ತ ನ್ಯಾಯಾಧೀಶರು ನಿನ್ನೆ ಮರದಡಿಯಲ್ಲಿ ಕುಳಿತು ಅಹವಾಲು ಆಲಿಸಲು ಸಿದ್ಧವಾಗಿರುವುದಾಗಿ ಹೇಳಿದ್ದರು. ಆದರೆ ಯಾವ ಕಾರಣಕ್ಕಾಗಿ ಅವರಿಗೆ ಈ ರೀತಿ ಅವಕಾಶ ನಿರಾಕರಣೆ ಮಾಡಿದ್ದಾರೆಂಬುದು ಪೊಲೀಸರಿಗೆ ಬಿಟ್ಟ ವಿಷಯ. ಬಹುಶ: ಅವರಿಗೆ ಗಾಬರಿ ಆದಂತಿದೆ. ಯಾರಿಗೂ ತೊಂದರೆ ನೀಡುವ, ನಿಯಮ, ಮೀರುವ ಉದ್ದೇಶ ನಮ್ಮದಲ್ಲ. ಈ ಬಗ್ಗೆ ನಮ್ಮದೇನು ತಕರಾರು ಇಲ್ಲ. ನಾಡಿನ ಅತ್ಯುನ್ನತ ಹುದ್ದೆಯಲ್ಲಿದ್ದ ನಿವೃತ್ತ ನ್ಯಾಯಮೂರ್ತಿ ಯನ್ನು ಬೀದಿಯಲ್ಲಿ ನಿಲ್ಲಿಸಿ ಮಾತನಾಡಿಸಲು ನಮ್ಮ ಮನಸಾಕ್ಷಿ ಕೂಡಾ ಒಪ್ಪಲಿಲ್ಲ.’’

- ಸುಗತ ಶ್ರೀನಿವಾಸರಾಜು, ಹಿರಿಯ ಪತ್ರಕರ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X