Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 7ನೇ ತರಗತಿಗೆ ಸಾಮಾನ್ಯ ಮೌಲ್ಯಮಾಪನ...

7ನೇ ತರಗತಿಗೆ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ: ಸುರೇಶ್‌ಕುಮಾರ್

ಮಾರ್ಚ್‌ನಲ್ಲಿ 7ನೇ ತರಗತಿ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ7 Jan 2020 9:34 PM IST
share
7ನೇ ತರಗತಿಗೆ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ: ಸುರೇಶ್‌ಕುಮಾರ್

ಬೆಂಗಳೂರು, ಜ.7: 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆಯ ಬದಲಾಗಿ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದ್ದಾರೆ. ಮಂಗಳವಾರ ನಗರದ ಶಿಕ್ಷಣ ಸದನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಸಾಮರ್ಥ್ಯ ಹಾಗೂ ಕೊರತೆಯನ್ನು ಗುರುತಿಸುವುದಕ್ಕಾಗಿ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುತ್ತಿದೆಯೇ ವಿನಃ ಯಾರನ್ನು ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲವೆಂದು ಖಂಚಿತ ಪಡಿಸಿದರು.

ಪರೀಕ್ಷಾ ವಿಧಾನ: 7ನೇ ತರಗತಿಗೆ ರಾಜ್ಯಮಟ್ಟದಲ್ಲಿ ಒಂದೇ ರೀತಿಯ ಪ್ರಶ್ನೆ ಪತ್ರಿಕೆಯನ್ನು ಕೊಡಲಾಗುತ್ತದೆ. ಹಾಗೂ ಪರೀಕ್ಷೆಯನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುತ್ತದೆ. ಅದರೆ, ಮೌಲ್ಯಮಾಪನ ಮಾತ್ರ ಜಿಲ್ಲಾಮಟ್ಟದಲ್ಲಿ ಡಯಟ್ ಶಿಕ್ಷಕರು ಸೇರಿದಂತೆ ಇತರೆ ಶಿಕ್ಷಕರು ಮಾಡಲಿದ್ದಾರೆಂದು ಅವರು ಮಾಹಿತಿ ನೀಡಿದರು.

ಸಾಮಾನ್ಯ ಮೌಲ್ಯಮಾಪನ ಪರೀಕ್ಷೆಯ ಮೂಲಕ ಏಕಕಾಲದಲ್ಲಿ ವಿದ್ಯಾರ್ಥಿ ಹಾಗೂ ಶಿಕ್ಷಕರ ಗುಣಮಟ್ಟವನ್ನು ಅಳೆಯಲಾಗುತ್ತದೆ. ಪ್ರತಿ ವಿದ್ಯಾರ್ಥಿ ಯಾವ ವಿಷಯದಲ್ಲಿ ಉತ್ತಮವಾಗಿದ್ದಾನೆ. ಯಾವುದರಲ್ಲಿ ಕೊರತೆಯಿದೆಯೆಂದು ಗುರುತಿಸಿ, 8 ಹಾಗೂ 9ನೇ ತರಗತಿಯಲ್ಲಿ ಕೊರತೆಯಿರುವ ವಿಷಯಕ್ಕೆ ಹೆಚ್ಚಿನ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ಬೆಳಗಾವಿ ವಿಭಾಗದಲ್ಲಿ ಈಗಾಗಲೇ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆಯನ್ನು ಪ್ರಾಯೋಗಿಕವಾಗಿ ಮಾಡಲಾಗಿದ್ದು, ಅಲ್ಲಿನ ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆಂದು ಗುರುತಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಹಾಗೂ ಶಿಕ್ಷಕರಿಬ್ಬರಿಗೂ ಹೆಚ್ಚಿನ ತರಬೇತಿ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅವರು ಹೇಳಿದರು.

 ಕಲಬುರಗಿ ಭಾಗದ ವಿದ್ಯಾರ್ಥಿಗಳಿಗೆ ಗಣಿತ ಕಷ್ಟಕರವಾಗಿದೆ. ಅಲ್ಪಸಂಖ್ಯಾತ ಸಮುದಾಯ ಹೆಚ್ಚಿರುವ ಕಡೆಗಳಲ್ಲಿ ಭಾಷಾ ವಿಷಯಗಳಲ್ಲಿ ಸಮಸ್ಯೆ, ಹಲವು ಕಡೆ ಇಂಗ್ಲಿಷ್ ಕಷ್ಟಕರವಾಗಿದೆ. ಯಾವ ವಿದ್ಯಾರ್ಥಿ ಯಾವ ವಿಷಯದಲ್ಲಿ ಸಮಸ್ಯೆ ಎದುರಿಸುತ್ತಿದ್ದಾನೆಂದು ನಿಖರವಾಗಿ ತಿಳಿದುಕೊಂಡು, ಆ ವಿಷಯದಲ್ಲಿ ಹೆಚ್ಚಿನ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ಬಾಕ್ಸ್

ಮಾರ್ಚ್‌ನಲ್ಲಿ ಪರೀಕ್ಷೆ

 7ನೇ ತರಗತಿಯ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆಯನ್ನು ಮಾರ್ಚ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಳಗಾವಿ, ಮೈಸೂರು, ಕಲಬುರಗಿ ವಿಭಾಗದ ಡಿಡಿಪಿಐ ಮತ್ತು ಬಿಇಒಗಳ ಜೊತೆ ಸಭೆ ನಡೆಸಿದ್ದೇನೆ. ಈ ಪರೀಕ್ಷೆಯ ಸಾಧಕ-ಬಾಧಕಗಳನ್ನು ಅರಿತುಕೊಂಡು 8 ಹಾಗೂ 9ನೇ ತರಗತಿಗೂ ವಿಸ್ತರಿಸಲು ಚಿಂತನೆ ನಡೆಸಲಾಗುವುದು.

-ಸುರೇಶ್‌ಕುಮಾರ್, ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X