Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೈ ವಿರುದ್ಧ ನಿಂದನೆಗಿಳಿದರೆ ಪಕ್ಷ...

ರೈ ವಿರುದ್ಧ ನಿಂದನೆಗಿಳಿದರೆ ಪಕ್ಷ ಸುಮ್ಮನಿರದು: ಬೇಬಿ ಕುಂದರ್

ವಾರ್ತಾಭಾರತಿವಾರ್ತಾಭಾರತಿ7 Jan 2020 11:02 PM IST
share
ರೈ ವಿರುದ್ಧ ನಿಂದನೆಗಿಳಿದರೆ ಪಕ್ಷ ಸುಮ್ಮನಿರದು: ಬೇಬಿ ಕುಂದರ್

ಬಂಟ್ವಾಳ, ಜ. 7: ಕ್ಷೇತ್ರದೊಳಗಿನ ರಾಜಕೀಯ ವಿಚಾರಕ್ಕೆ ಸಂಬಂಧಿಸಿ ಹರಿಕೃಷ್ಣ ಬಂಟ್ವಾಳರಂತಹ ವ್ಯಕ್ತಿಗಳ ಮೂಲಕ ಮಾಜಿ ಸಚಿವರನ್ನು ಹೀನಾಯವಾಗಿ ನಿಂದಿಸುವುದು ಸೌಮ್ಯ ಸ್ವಭಾವದ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಶೋಭೆ ತರುವುದಿಲ್ಲ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದ್ದಾರೆ.

ಪಾಣೆಮಂಗಳೂರು  ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ.ರಮಾನಾಥ ರೈ ಅವರು ಬಂಟ್ವಾಳ ಕ್ಷೇತ್ರದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯ ಕುರಿತು ರಾಜಕೀಯ ಚರ್ಚೆ ನಡೆಸಿ, ಆದರೆ, ವೈಯಕ್ತಿಕ ನಿಂದನೆಗಿಳಿದರೆ ಪಕ್ಷ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ್ ಅವರು ರಮಾನಾಥ ರೈ ಅವರನ್ನು ವೈಯಕ್ತಿಕ ನೆಲೆಯಲ್ಲಿ ಟೀಕಿಸುತ್ತಿದ್ದು, ಇದು ಸಹಿಸಲಸಾಧ್ಯ ವಿಚಾರ. ಇಂಥವರು ಸೌಮ್ಯ ಸ್ವಭಾವದವರಾದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಾರೆ.  2017-18ರಲ್ಲಿ ರಸ್ತೆಗಳು ಅಭಿವೃದ್ಧಿ ಕಾಮಗಾರಿಗೆ ಪತ್ರ ಬರೆದಿರುವ ಬಗ್ಗೆ ನಮ್ಮಲ್ಲಿ ದಾಖಲೆಗಳಿವೆ. ಮಾಜಿ ಸಚಿವ ಬಿ.ರಮಾನಾಥ ರೈ ಅವರು 2013ರಿಂದ 2018ರ ವರೆಗೆ ಎರಡು ಸಾವಿರ ಕೋಟಿಗಿಂತಲೂ ಅಧಿಕ ಅನುದಾನ ತಂದು ಅಭಿವೃದ್ಧಿ ಯೋಜನೆ ಮಾಡಿದ್ದರೆ, ಇದೀಗ ಕ್ಷೇತ್ರ ಬಡವಾಗಿದೆ. ಶಾಸಕ ರಾಜೇಶ್ ನಾಯ್ಕ್ ವೈಫಲ್ಯವೇ ಸರಿ ಎಂದರು.

ಬಂಟ್ವಾಳ ನಗರ ಸೌಂದರ್ಯವೃದ್ಧಿ ಕೆಲಸ ಯಾವಾಗ ಆರಂಭಿಸಲಾಗುತ್ತದೆ ಎಂದು ಪ್ರಶ್ನಿಸಿದ ಅವರು, ಮೂಲರಪಟ್ಣ ಸೇತುವೆ ಸಹಿತ ಹಲವು ವಿಚಾರಗಳಲ್ಲಿ ರಮಾನಾಥ ರೈ ಇದ್ದರೆ ಬೇಗ ಕೆಲಸವಾಗುತ್ತಿತ್ತು ಎಂದು ಜನರಾಡಿಕೊಳ್ಳುತ್ತಿದದ್ದಾರೆ ಎಂದರು. ಸಚಿವ ರೇವಣ್ಣ ಅವರಿಗೆ ರಮಾನಾಥ ರೈ ಪತ್ರ ಬರೆದದ್ದಕ್ಕೆ ದಾಖಲೆಗಳಿವೆ ಎಂದ ಬೇಬಿ ಕುಂದರ್ ಹೇಳಿದರು.

ಜಿಪಂ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ ಮಾತನಾಡಿ, ಗ್ರಾಮ ಪಂಚಾಯತ್ ಸದಸ್ಯನಾಗಲು ಯೋಗ್ಯತೆಯಿಲ್ಲದ ಹರಿಕೃಷ್ಣ ಬಂಟ್ವಾಳರಿಗೆ ರಮಾನಾಥ ರೈ, ಧರ್ಮಸ್ಥಳದ ಹಾಗೂ ಪಕ್ಷದ ಬಗ್ಗೆ ನೈತಿಕತೆಯಿಲ್ಲ. ಅಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‍ರನ್ನು ನಿಂದಿಸಿದಕ್ಕೆ ಬಿಜೆಪಿಯವರು ಪಕ್ಷದಿಂದ ಉಚ್ಛಾಟನೆ ಮಾಡಿದ್ದು ಎಲ್ಲರಿಗೂ ತಿಳಿದಿದೆ. ಜನಾರ್ಧನ ಪೂಜಾರಿ ಅವರು ನಾಲ್ಕು ಬಾರಿ ಸೋಲಿನ ಹಿಂದೆ ಹರಿಕೃಷ್ಣ ಬಂಟ್ವಾಳರ ಕೈವಾಡವಿದೆ ಎಂದು ಆರೋಪಿಸಿದ ಅವರು, ರಾಜಕೀಯ ವಾಗಿ ಚರ್ಚೆಗೆ ಬರಲಿ. ವಿನಾಕಾರಣ ವೈಯಕ್ತಿಕ ನಿಂದನೆ ಸರಿಯಲ್ಲ, ರೈ ಅವರನ್ನು ವೈಯಕ್ತಿಕವಾಗಿ ನಿಂದಿಸಿರುವುದು ಬಹಳ ನೋವಾಗಿದೆ. ಸಮಯ ಬಂದಾಗ ಹರಿಕೃಷ್ಣ ಅವರ ಚರಿತ್ರೆಯನ್ನು ನಾವು ಬಹಿರಂಗ ಪಡಿಸುತ್ತೇವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮಹಮ್ಮದ್, ಪದ್ಮಶೇಖರ ಜೈನ್, ಮಂಜುಳಾ ಮಾಧವ ಮಾವೆ, ಬಿ.ಎಂ.ಅಬ್ಬಾಸ್ ಅಲಿ, ಸುದೀಪ್ ಕುಮಾರ ಶೆಟ್ಟಿ, ಸದಾಶಿವ ಬಂಗೇರ, ಮಾಯಿಲಪ್ಪ ಸಾಲಿಯಾನ್, ಜಗದೀಶ ಕೊಯ್ಲ, ಜನಾರ್ದನ ಚಂಡ್ತಿಮಾರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X