Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೌರತ್ವ ಕಾಯ್ದೆಯು ತಾಯಿಯೇ ಮಗನಿಗೆ 'ನೀನು...

ಪೌರತ್ವ ಕಾಯ್ದೆಯು ತಾಯಿಯೇ ಮಗನಿಗೆ 'ನೀನು ಯಾರು' ಎಂದು ಕೇಳಿದಂತಿದೆ: ಸಸಿಕಾಂತ್ ಸೆಂಥಿಲ್

ವಾರ್ತಾಭಾರತಿವಾರ್ತಾಭಾರತಿ7 Jan 2020 11:08 PM IST
share
ಪೌರತ್ವ ಕಾಯ್ದೆಯು ತಾಯಿಯೇ ಮಗನಿಗೆ ನೀನು ಯಾರು ಎಂದು ಕೇಳಿದಂತಿದೆ: ಸಸಿಕಾಂತ್ ಸೆಂಥಿಲ್

ಜೇವರ್ಗಿ: ಪ್ರಸ್ತುತ ಕೇಂದ್ರ ಸರ್ಕಾರ ತರಲು ಹೊರಟಿರುವ ಪೌರತ್ವ ಕಾಯ್ದೆಯು ತಾಯಿಯೇ ಮಗನಿಗೆ 'ನೀನು ಯಾಎಉ' ಎಂದು ಕೇಳಿದಂತಿದೆ ಎಂದು ಸಸಿಕಾಂತ್ ಸೆಂಥಿಲ್ ಹೇಳಿದರು. ಪಟ್ಟಣದ ಮೆಹಬೂಬ ಪಂಕ್ಷನ್ ಹಾಲ್ ನಲ್ಲಿ ಮಂಗಳವಾರ  ಜೇವರ್ಗಿ ಪೀಪಲ್ಸ್ ಫೋರಂ ವತಿಯಿಂದ ಆಯೋಜಿಸಿದ್ದ ಪೌರತ್ವ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ನಮ್ಮ ದೇಶದ ಪ್ರಧಾನ ಮಂತ್ರಿಗಳು ಬರೀ ಮಾತೆತ್ತಿದರೆ ಪಾಕಿಸ್ತಾನದ ಹೆಸರು ತೆಗೆದುಕೊಳ್ಳುತ್ತಾರೆ. ಅದೇ ಚೀನಾ, ಅಮೆರಿಕದ ಹೆಸರು ಯಾಕೆ ತೆಗೆದುಕೊಂಡು ಚಾಲೆಂಜ್ ಮಾಡುವುದಿಲ್ಲ ಎಂದು ಪ್ರಶ್ನಿಸಿದರು. ಪಾಕಿಸ್ತಾನಕ್ಕೆ ಬೈದರೆ ಭಾರತದ ಪ್ರಜೆಗಳು ಮತ ಹಾಕುತ್ತಾರೆ ಎನ್ನುವ ಕಾರಣಕ್ಕಾಗಿಯೇ ಪಾಕಿಸ್ತಾನವನ್ನು ಬೈಯುತ್ತಾರೆ ಹೊರತು ಅಭಿವೃದ್ಧಿ ದೃಷ್ಟಿಯಿಂದಲ್ಲ. ರಾಷ್ಟ್ರ ವಿರೋಧಿ ಜನವಿರೋಧಿ ನೀತಿಗಳನ್ನು ತರುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ.  

ಎನ್ ಆರ್ ಸಿಯಿಂದ ಅತಿ ಹೆಚ್ಚು ಮಹಿಳೆಯರಿಗೆ ತೊಂದರೆಯಾಗುತ್ತದೆ. ಪ್ರಸ್ತುತ ಸರಕಾರ ಅರ್ಥಶಾಸ್ತ್ರಜ್ಞರು ಕೊಡುವ ಸಲಹೆಯನ್ನು ಸಹ ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ.  ಹಿಟ್ಲರ್ ನಂತೆಯೇ ಈ ಸರ್ಕಾರವಿದೆ. ಇವತ್ತು ನಾವು ಪ್ರತಿಭಟಿಸದಿದ್ದರೆ ಇತಿಹಾಸ ನಮ್ಮನ್ನು ಕ್ಷಮಿಸಲ್ಲ. ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನಕ್ಕೆ ವಿರುದ್ಧವಿರುವ ಯಾವುದೇ ಕಾನೂನು ಬಂದರೂ ಅದನ್ನು ನಾವು ವಿರೋಧಿಸುತ್ತೇವೆ. ಈ ಕಾಯ್ದೆ ವಿರೋಧಿಸಿ ದಲಿತರು, ಮುಸ್ಲಿಮರು, ಹಿಂದುಳಿದವರು ಕೂಡಿ ಸಂಘಟನೆ ಮಾಡಿದ್ದರಿಂದ ಕೇಂದ್ರದ ಮೈ ಉರಿಯುತ್ತಿದೆ. ದಲಿತರು ಮುಸ್ಲಿಮರು ಹಿಂದುಳಿದವರು ಸಹಪಂಕ್ತಿ ಭೋಜನ, ಹಾಡು ಹಾಡುವುದರ ಮೂಲಕ ಸಂಘಟನೆ ಮಾಡಿ ಹೋರಾಟ ಮಾಡಿ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೋಪದಿಂದಲ್ಲ, ಧೈರ್ಯದಿಂದ ಎದುರಿಸಿ. ಎರಡನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಿದ್ಧರಾಗಿ. ಅಂದು ಬ್ರಿಟಿಷರು, ಇಂದು ಮನುವಾದಿಗಳು. ಮನುವಾದಿಗಳು ಬೇಡ ಅಂದಿದ್ದೆ ನಾವು ಮಾಡಿ ತೋರಿಸಬೇಕಾಗಿದೆ ಎಂದು ಸಶಿಕಾಂತ್ ಸೆಂಥಿಲ್ ನೆರೆದಿದ್ದ ಜನರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಡಾ ಸಂಪತ್ ಕುಮಾರ್, ಮಲ್ಲಣ್ಣ ಕೊಡಚಿ, ಮಲ್ಲಿಕಾರ್ಜುನ ದಿನ್ನಿ, ಶಂಕರ ಕಟ್ಟಿ ಸಂಗಾವಿ, ಡಾ. ಮಹೇಶ್ ರಾಠೋಡ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ರಜಾಕ್ ಮನಿಯಾರ್, ರಾಜು ಮುದ್ದಡಗಿ, ಶ್ರೀಹರಿ ಕರಕಿಹಳ್ಳಿ, ಆರ್. ಬಿ ಭಂಡಾರಿ, ಸಿದ್ದು ಜನಿವಾರ, ಎಸ್.ಡಿ.ಪಿ.ಐನ ಸೊಹೇಲ್, ಬೆಣ್ಣೆಪ್ಪ ಕೊಂಬಿನ್,  ಡಾ.ಅಶೋಕ್ ದೊಡ್ಮನಿ, ನಿಜಲಿಂಗ ದೊಡ್ಮನಿ, ಬಾಬಾ ಪಟೇಲ್ ಮುತ್ತಕೋಡ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X