ಬಂದ್ ಯಾವುದೇ ಪರಿಣಾಮ ಬೀರದು: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಜ. 7: ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ(ಜ.8) ಕರೆ ನೀಡಿರುವ ಬಂದ್ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದ ಎಲ್ಲ ನಗರಗಳು, ಅದರಲ್ಲೂ ಬೆಂಗಳೂರಿನಲ್ಲಿ ಜನಜೀವನ ಎಂದಿನಂತೆ ಸಾಮಾನ್ಯವಾಗಿರುತ್ತದೆ ಮತ್ತು ಅವರ ದಿನನಿತ್ಯದ ಕಾರ್ಯಗಳಿಗೆ ಯಾವುದೇ ತಡೆ ಇರುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಣೆ ನೀಡಿದ್ದಾರೆ.
ಶಾಲಾ-ಕಾಲೇಜು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಮತ್ತು ಸಾರಿಗೆ ಸಾಮಾನ್ಯವಾಗಿರುತ್ತದೆ. ಯಾವುದೇ ಸಮಾಜ ವಿರೋಧಿ ಶಕ್ತಿಗಳು ಬಂದ್ನಲ್ಲಿ ಭಾಗವಹಿಸಲು ಒತ್ತಾಯ ಮಾಡಿದರೆ ಅಥವಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಪ್ರಯತ್ನಿಸಿದರೆ ಪೊಲೀಸ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ಎಚ್ಚರಿಕೆನೀಡಿದ್ದಾರೆ.
ಬಂದ್ಗಳು ಜನವಿರೋಧಿಯೆಂದು ಹಿಂದೆ ಸುಪ್ರೀಂ ಕೋರ್ಟ್ ಹೇಳಿದೆ. ಈ ವಿಷಯ ಬಂದ್ಗೆ ಕರೆ ಕೊಟ್ಟವರ ಗಮನದಲ್ಲಿ ಇರಬೇಕು. ಜನರು ಯವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಿಕೊಂಡು ತಮ್ಮ ಕೆಲಸ-ಕಾರ್ಯಗಳನ್ನು ನಿರ್ವಹಿಸಬೇಕೆನ್ನುವುದು ನನ್ನ ಕಳಕಳಿಯ ಮನವಿ ಎಂದು ಬಿಎಸ್ವೈ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.





