Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭದ್ರತಾ ಮಂಡಳಿ ಸಭೆ: ಇರಾನ್ ವಿದೇಶ...

ಭದ್ರತಾ ಮಂಡಳಿ ಸಭೆ: ಇರಾನ್ ವಿದೇಶ ಸಚಿವಗೆ ಅಮೆರಿಕ ವೀಸಾ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ7 Jan 2020 11:50 PM IST
share
ಭದ್ರತಾ ಮಂಡಳಿ ಸಭೆ: ಇರಾನ್ ವಿದೇಶ ಸಚಿವಗೆ ಅಮೆರಿಕ ವೀಸಾ ನಿರಾಕರಣೆ

ವಾಶಿಂಗ್ಟನ್, ಜ. 7: ಗುರುವಾರ ನಡೆಯಲಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಭಾಗವಹಿಸಲು ಇರಾನ್ ವಿದೇಶ ಸಚಿವ ಮುಹಮ್ಮದ್ ಜವಾದ್ ಝಾರಿಫ್‌ಗೆ ಅಮೆರಿಕ ವೀಸಾ ನಿರಾಕರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನ ಕಚೇರಿಯು ನ್ಯೂಯಾರ್ಕ್‌ನಲ್ಲಿದೆ.

ಇರಾಕ್ ರಾಜಧಾನಿ ಬಗ್ದಾದ್‌ನಲ್ಲಿರುವ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಶುಕ್ರವಾರ ಅಮೆರಿಕ ನಡೆಸಿದ ವಾಯು ದಾಳಿಯಲ್ಲಿ ಇರಾನ್ ಸೇನಾಧಿಕಾರಿ ಕಾಸಿಮ್ ಸುಲೈಮಾನಿ ಹತ್ಯೆಗೀಡಾದ ಬಳಿಕ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

1947ರ ವಿಶ್ವಸಂಸ್ಥೆ ಪ್ರಧಾನಕಚೇರಿ ಒಪ್ಪಂದದ ಪ್ರಕಾರ, ಅಮೆರಿಕವು ಸಾಮಾನ್ಯವಾಗಿ ವಿಶ್ವಸಂಸ್ಥೆಗೆ ಹೋಗಲು ವಿದೇಶಿ ರಾಜತಾಂತ್ರಿಕರಿಗೆ ಅವಕಾಶ ನೀಡಬೇಕಾಗುತ್ತದೆ. ಆದರೆ, ‘ಭದ್ರತೆ, ಭಯೋತ್ಪಾದನೆ ಮತ್ತು ವಿದೇಶ ನೀತಿ’ ಕಾರಣಗಳಿಗಾಗಿ ತಾನು ವೀಸಾಗಳನ್ನು ನಿರಾಕರಿಸಬಹುದಾಗಿದೆ ಎಂದು ಅಮೆರಿಕ ಹೇಳುತ್ತದೆ.

ಅಮೆರಿಕದ ವಿದೇಶಾಂಗ ಇಲಾಖೆ ಈ ಬಗ್ಗೆ ತಕ್ಷಣಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.

‘‘ನಾವು ಮಾಧ್ಯಮ ವರದಿಗಳನ್ನು ನೋಡಿದ್ದೇವೆ. ಆದರೆ, ವಿದೇಶ ಸಚಿವ ಝಾರಿಫ್‌ರ ವೀಸಾಕ್ಕೆ ಸಂಬಂಧಿಸಿ ನಮಗೆ ಅಮೆರಿಕದಿಂದಾಗಲಿ ವಿಶ್ವಸಂಸ್ಥೆಯಿಂದಾಗಲಿ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ’’ ಎಂದು ವಿಶ್ವಸಂಸ್ಥೆಯಲ್ಲಿರುವ ಇರಾನ್ ರಾಯಭಾರ ಕಚೇರಿ ಹೇಳಿದೆ.

ಝಾರಿಫ್‌ಗೆ ಅಮೆರಿಕ ವೀಸಾ ನಿರಾಕರಿಸುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ವಿಶ್ವಸಂಸ್ಥೆಯ ವಕ್ತಾರ ಸ್ಟೀಫನ್ ಡುಜಾರಿಕ್ ನಿರಾಕರಿಸಿದ್ದಾರೆ.

 ಗುರುವಾರ ನಡೆಯಲಿರುವ ಭದ್ರತಾ ಮಂಡಳಿಯ ಸಭೆಯಲ್ಲಿ ಭಾಗವಹಿಸಲು ಝಾರಿಫ್ ಬಯಸಿದ್ದರು. ವಾಶಿಂಗ್ಟನ್ ಮತ್ತು ಟೆಹರಾನ್ ನಡುವಿನ ಪ್ರಸಕ್ತ ಉದ್ವಿಗ್ನತೆ ಸ್ಫೋಟಕ್ಕೆ ಮೊದಲೇ ಭದ್ರತಾ ಮಂಡಳಿಯ ಸಭೆ ಮತ್ತು ಝಾರಿಫ್ ಪ್ರಯಾಣ ನಿಗದಿಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X