Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ತಾನಾ ವಿರುದ್ಧ ತನಿಖೆಯಲ್ಲಿ ವಿಳಂಬ:...

ಅಸ್ತಾನಾ ವಿರುದ್ಧ ತನಿಖೆಯಲ್ಲಿ ವಿಳಂಬ: ಸಿಬಿಐಗೆ ಚಾಟಿ ಬೀಸಿದ ದಿಲ್ಲಿ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ8 Jan 2020 8:57 PM IST
share
ಅಸ್ತಾನಾ ವಿರುದ್ಧ ತನಿಖೆಯಲ್ಲಿ ವಿಳಂಬ: ಸಿಬಿಐಗೆ ಚಾಟಿ ಬೀಸಿದ ದಿಲ್ಲಿ ಹೈಕೋರ್ಟ್

 ಹೊಸದಿಲ್ಲಿ,ಜ.8: ಸಿಬಿಐ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ವಿರುದ್ಧದ ತನಿಖೆಯಲ್ಲಿ ವಿಳಂಬಕ್ಕಾಗಿ ದಿಲ್ಲಿ ಉಚ್ಚ ನ್ಯಾಯಾಲಯವು ಬುಧವಾರ ತನಿಖಾ ಸಂಸ್ಥೆಯನ್ನು ತೀವ್ರ ತರಾಟೆಗೆತ್ತಿಕೊಂಡಿದೆ. ನಾಲ್ಕು ವಾರಗಳಲ್ಲಿ ತನಿಖೆಯು ಪೂರ್ಣಗೊಳ್ಳದಿದ್ದರೆ ತನ್ನೆದುರು ಖುದ್ದಾಗಿ ಹಾಜರಾಗುವಂತೆ ಸಿಬಿಐ ಮುಖ್ಯಸ್ಥ ಆರ್.ಕೆ.ಶುಕ್ಲಾ ಅವರಿಗೆ ನಿರ್ದೇಶ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯು ಫೆ.12ರಂದು ನಡೆಯಲಿದೆ.

ಸಿಬಿಐ ಕಳೆದ ವರ್ಷದ ಡಿ.9ರಂದು ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಅಸ್ತಾನಾ ವಿರುದ್ಧ ತನಿಖೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಸಮಯಾವಕಾಶವನ್ನು ಕೋರಿತ್ತು.

ಅಸ್ತಾನಾ ಮತ್ತು ಆಗಿನ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ನಡುವಿನ ಬಹಿರಂಗ ಕಚ್ಚಾಟದ ನಡುವೆಯೇ 2018,ಅ.15ರಂದು ಅಸ್ಥಾನಾ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾಗಿತ್ತು. ಅಂತಿಮವಾಗಿ ಸರಕಾರವು ಇಬ್ಬರನ್ನೂ ವರ್ಗಾವಣೆಗೊಳಿಸಿತ್ತು. ತನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಸ್ತಾನಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ದಿಲ್ಲಿ ಉಚ್ಚ ನ್ಯಾಯಾಲಯವು ತನಿಖೆಯನ್ನು 10 ವಾರಗಳಲ್ಲಿ ಪೂರ್ಣಗೊಳಿಸುವಂತೆ ಜ.11ರಂದು ಸಿಬಿಐಗೆ ನಿರ್ದೇಶ ನೀಡಿತ್ತು. ಆದರೆ ಸಿಬಿಐ ಇನ್ನಷ್ಟು ಕಾಲಾವಕಾಶವನ್ನು ಕೋರಿದ್ದು,ನ್ಯಾಯಾಲಯವು ಮೇ 31ರ ಅಂತಿಮ ಗಡುವನ್ನು ವಿಧಿಸಿತ್ತು.

ನಂತರ ಸಿಬಿಐ ಮತ್ತೆ ಮೂರು ತಿಂಗಳ ಕಾಲಾವಕಾಶವನ್ನು ನೀಡುವಂತೆ ಉಚ್ಚ ನ್ಯಾಯಾಲಯವನ್ನು ಕೋರಿಕೊಂಡಿತ್ತು. ನ್ಯಾಯಾಲಯವು ‘ಇನ್ನು ಮುಂದೆ ಗಡುವನ್ನು ವಿಸ್ತರಿಸುವುದಿಲ್ಲ ’ಎಂಬ ಕಠಿಣ ಎಚ್ಚರಿಕೆಯೊಂದಿಗೆ ಎರಡು ತಿಂಗಳ ಹೆಚ್ಚಿನ ಕಾಲಾವಕಾಶ ನೀಡಿತ್ತು. ಈಗ ಪ್ರಕರಣದಲ್ಲಿ ಮೂರನೇ ಬಾರಿ ಸಿಬಿಐ ಗಡುವು ವಿಸ್ತರಣೆಗೆ ಕೋರಿತ್ತು.

ಪ್ರಕರಣದಲ್ಲಿಯ ತನಿಖಾಧಿಕಾರಿ ಸತೀಶ ದಾಗರ್ ಅವರು ಈಗಾಗಲೇ ತನಿಖೆಯನ್ನು ಪೂರ್ಣಗೊಳಿಸಿದ್ದಾರೆ ಮತ್ತು ಮುಂದಿನ ಪರಿಶೀಲನೆಗಾಗಿ ತನಿಖಾ ವರದಿಯನ್ನು ಮೇಲಧಿಕಾರಿಗಳಿಗೆ ಸಲ್ಲಿಸಿದ್ದಾರೆ ಎಂದು ಸಿಬಿಐನಲ್ಲಿಯ ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ. ಸಿಬಿಐ ಪದ್ಧತಿಯಂತೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮುನ್ನ ಎಂಟು ಹಂತಗಳಲ್ಲಿ ಅದರ ಪರಿಶೀಲನೆ ನಡೆಯಬೇಕು. ಅದೀಗ ಮೂರು ಹಂತಗಳನ್ನು ದಾಟಿದೆ,ಇನ್ನೂ ಐದು ಹಂತಗಳು ಬಾಕಿಯಿವೆ ಎಂಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.

ಆಗಿನ ಡಿಐಜಿ ಎಂ.ಕೆ.ಸಿನ್ಹಾ ಸೇರಿದಂತೆ ಅಸ್ತಾನಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಅಧಿಕಾರಿಗಳನ್ನೂ ತನಿಖೆೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಿನ್ಹಾ ಮತ್ತು ಇಬ್ಬರು ಹಿರಿಯ ಅಧಿಕಾರಿಗಳನ್ನು ಸಿಬಿಐನಿಂದ ವರ್ಗಾವಣೆಗೊಳಿಸಲಾಗಿತ್ತು.

ನಾಲ್ಕು ತಿಂಗಳ ಹಿಂದೆ ದಾಗರ್ ಅವರು ಡಿ.1ರಿಂದ ಸ್ವಯಂಪ್ರೇರಿತ ನಿವೃತ್ತಿಯನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸರಕಾರವು ತಿರಸ್ಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X